ಸಂಗ್ರಹ ಚಿತ್ರ 
ವಿದೇಶ

ಕೋವಿಡ್ ಉಲ್ಬಣ: ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ ಕುವೈತ್

 ದೇಶದಲ್ಲಿ ಭಾರೀ ಏರಿಕೆ ಕಾಣುತ್ತಿರುವ ಕೋವಿಡ್19 ಪರಿಸ್ಥಿತಿಯಿಂದಾಗಿ ಮುಂದಿನ ಆದೇಶದವರೆಗೂ ಭಾರತದಿಂದ ಬರುವ ಎಲ್ಲಾ ವಾಣಿಜ್ಯ ವಿಮಾನಗಳನ್ನು ಕುವೈತ್ ಸ್ಥಗಿತಗೊಳಿಸಿದೆ. ಆರೋಗ್ಯ ಅಧಿಕಾರಿಗಳ ಸೂಚನೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ

ನವದೆಹಲಿ: ದೇಶದಲ್ಲಿ ಭಾರೀ ಏರಿಕೆ ಕಾಣುತ್ತಿರುವ ಕೋವಿಡ್-19 ಪರಿಸ್ಥಿತಿಯಿಂದಾಗಿ ಮುಂದಿನ ಆದೇಶದವರೆಗೂ ಭಾರತದಿಂದ ಬರುವ ಎಲ್ಲಾ ವಾಣಿಜ್ಯ ವಿಮಾನಗಳನ್ನು ಕುವೈತ್ ಸ್ಥಗಿತಗೊಳಿಸಿದೆ. ಆರೋಗ್ಯ ಅಧಿಕಾರಿಗಳ ಸೂಚನೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ

ಏಪ್ರಿಲ್ 24 ರಿಂದ ಜಾರಿಗೆ ಬರುವಂತೆ ಭಾರತದಿಂದ ಬರುವ ಎಲ್ಲಾವಾಣಿಜ್ಯ ವಿಮಾನಗಳನ್ನು ಸ್ಥಗಿತಗೊಳಿಸಿದೆ ಎಂದು ಕುವೈತ್ ನ ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ. ಭಾರತದಿಂದ ನೇರವಾಗಿ ಅಥವಾ ಬೇರೆ ದೇಶದ ಮೂಲಕ ಬರುವ ಎಲ್ಲಾ ಪ್ರಯಾಣಿಕರನ್ನು ಅವರು ಭಾರತದ ಹೊರಗೆ ಕನಿಷ್ಟ 14 ದಿನಗಳನ್ನು ಕಳೆಯದ ಹೊರತು ದೇಶ ಪ್ರವೇಶಿಸುವುದನ್ನು ನಿಷೇಧಿಸಲಾಗುವುದು ಎಂದು  ಟ್ವಿಟರ್‌ನಲ್ಲಿ ಪ್ರಕಟಣೆ ನೀಡಿದೆ.

ಕುವೈತ್ ನಾಗರಿಕರು, ಅವರ ಪ್ರಾಥಮಿಕ ಸಂಬಂಧಿಗಳುಮತ್ತು ಅವರ ಮನೆಯ ಕೆಲಸಗಾರರಿಗೆ ದೇಶ ಪ್ರವೇಶಿಸಲು ಅವಕಾಶ ನೀಡಲಾಗುವುದು. ಅಲ್ಲದೆ ಸರಕು ಹಾರಾಟದ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪ್ರಕಟಣೆ ಹೇಳಿದೆ.

ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಪ್ರಕಾರ, ದೇಶದ ಅತಿದೊಡ್ಡ ವಲಸಿಗ ಸಮುದಾಯವಾಗಿರುವ ಭಾರತೀಯ ಜನರು ಒಂದು ದಶಲಕ್ಷಕ್ಕೂ ಹೆಚ್ಚು ಸಂಖ್ಯೆಯಲ್ಲಿ ವಾಸವಿದ್ದಾರೆ.

ಈ ಹಿಂದೆ, ಯುಕೆ, ಯುಎಇ ಮತ್ತು ಕೆನಡಾ ರಾಷ್ಟ್ರಗಳು ಭಾರತದಿಂದ ಬರುವ ವಿಮಾನಯಾನವನ್ನು ನಿಷೇಧಿಸಿದ್ದವು.

ಏತನ್ಮಧ್ಯೆ, ಯುಎಇ ಶುಕ್ರವಾರ ಭಾರತಕ್ಕೆ ತನ್ನ ಪ್ರಯಾಣ ನಿಷೇಧವನ್ನು ನವೀಕರಿಸಿದೆ, ಯುಎಇ ಗುರುವಾರ 10 ದಿನಗಳವರೆಗೆ ಭಾರತದ ಪ್ರಯಾಣಿಕರನ್ನು ನಿರ್ಬಂಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT