ಆಫ್ಘನ್ ಉಪಾಧ್ಯಕ್ಷ ಅಮೃಲ್ಲಾಹ್ ಸಲೇಹ್ 
ವಿದೇಶ

ಅಧ್ಯಕ್ಷ ಓಡಿ ಹೋದರೇನು.. ನಾನಿನ್ನೂ ದೇಶದಲ್ಲೇ ಇದ್ದೇನೆ: ಆಫ್ಘನ್ ಉಪಾಧ್ಯಕ್ಷ ಅಮೃಲ್ಲಾಹ್ ಸಲೇಹ್

ಆಫ್ಘನ್ ಅಧ್ಯಕ್ಷ ಘನಿ ದೇಶ ತೊರೆದು ಪರಾರಿಯಾದರೇನು.. ನಾನು ಉಪಾಧ್ಯಕ್ಷ ಇನ್ನೂ ದೇಶದಲ್ಲೇ ಇದ್ದೇನೆ... ಸರ್ಕಾರ ನಮ್ಮ ಕೈಯಲ್ಲಿದೆ ಎಂದು ಆಫ್ಘನ್ ಉಪಾಧ್ಯಕ್ಷ ಅಮೃಲ್ಲಾಹ್ ಸಲೇಹ್ ಹೇಳಿದ್ದಾರೆ.

ಕಾಬೂಲ್: ಆಫ್ಘನ್ ಅಧ್ಯಕ್ಷ ಘನಿ ದೇಶ ತೊರೆದು ಪರಾರಿಯಾದರೇನು.. ನಾನು ಉಪಾಧ್ಯಕ್ಷ ಇನ್ನೂ ದೇಶದಲ್ಲೇ ಇದ್ದೇನೆ... ಸರ್ಕಾರ ನಮ್ಮ ಕೈಯಲ್ಲಿದೆ ಎಂದು ಆಫ್ಘನ್ ಉಪಾಧ್ಯಕ್ಷ ಅಮೃಲ್ಲಾಹ್ ಸಲೇಹ್ ಹೇಳಿದ್ದಾರೆ.

ತಾಲಿಬಾಲಿಗಳು ರಾಜಧಾನಿ ಕಾಬೂಲ್‌ ಸೇರಿದಂತೆ ಬಹುತೇಕ ಅಫ್ಘಾನಿಸ್ತಾನವನ್ನೇ ವಶಕ್ಕೆ ಪಡೆದುಕೊಂಡಿದ್ದು, ಮುಖ್ಯವಾಗಿ ಕಾಬೂಲ್‌ನಿಂದ ಅಲ್ಲಿನ ಅಧ್ಯಕ್ಷ ಅಶ್ರಫ್ ಘನಿ ಸೇರಿದಂತೆ ಬಹುತೇಕ ನಾಯಕರು ದೇಶ ತೊರೆದು ಪಲಾಯನಗೈದಿದ್ದಾರೆ. ಅಶ್ರಫ್ ಘನಿ ದೇಶವನ್ನೇ ತೊರೆದಿದ್ದಾರೆ. ಇದೆಲ್ಲದರ ಬೆನ್ನಲ್ಲೇ ತಾಲಿಬಾನಿಗಳು ಸರ್ಕಾರ ರಚಿಸಲು ಮುಂದಾಗಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ನಡುವೆಯೇ ಆಫ್ಘನ್ ಉಪಾಧ್ಯಕ್ಷ ಅಮೃಲ್ಲಾಹ್ ಸಲೇಹ್ ಅವರು ತಾಲಿಬಾನ್ ಸರ್ಕಾರ ರಚನೆ ಸಾಧ್ಯವಿಲ್ಲ.. ದೇಶದ ಸಂವಿಧಾನದ ಪ್ರಕಾರ ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷರಿಗೆ ಮಾತ್ರ ಆ ಹಕ್ಕಿರುತ್ತದೆ ಎಂದು ಹೇಳಿದ್ದಾರೆ. 

ಈ ಕುರಿತಂತೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, 'ಅಫ್ಘಾನಿಸ್ತಾನದ ಸಂವಿಧಾನದ ಪ್ರಕಾರ ಅಧ್ಯಕ್ಷರ ಗೈರು, ಪಲಾಯನ, ರಾಜೀನಾಮೆ ಅಥವಾ ಸಾವಿನ ನಂತರ ಉಪಾಧ್ಯಕ್ಷರು ಅಧ್ಯಕ್ಷರಾಗಿ ಭಡ್ತಿ ಹೊಂದುತ್ತಾರೆ. ಸದ್ಯ ನಾನು ದೇಶದ ಒಳಗೇ ಇದ್ದೇನೆ. ಮತ್ತು ನಾನು ಈಗ ದೇಶದ  ಉಸ್ತುವಾರಿ ಅಧ್ಯಕ್ಷನಾಗಿದ್ದೇನೆ. ನಾನು ಎಲ್ಲ ನಾಯಕರನ್ನೂ ಸಂಪರ್ಕಿಸಿ ಅವರ ಬೆಂಬಲ ಹಾಗೂ ಒಮ್ಮತ ಸಂಗ್ರಹಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT