ಹಮೀದ್ ಕರ್ಜೈ 
ವಿದೇಶ

ತಾಲಿಬಾನ್ ಮುಖಂಡರ ಜೊತೆ ಆಫ್ಘಾನಿಸ್ತಾನ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ಭೇಟಿ, ಹಕ್ಕಾನಿ ನೆಟ್ ವರ್ಕ್ ಕುರಿತು ಚರ್ಚೆ

ಆಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ಅವರು ಪ್ರಬಲ ತಾಲಿಬಾನ್ ಹಿರಿಯ ನಾಯಕರನ್ನು ಭೇಟಿಯಾಗಿದ್ದು, ಸರ್ಕಾರದಲ್ಲಿ ಹಕ್ಕಾನಿ ನೆಟ್ ವರ್ಕ್ ಪಾಲ್ಗೊಳ್ಳುವಿಕೆಯ ಕುರಿತು ಚರ್ಚೆ ನಡೆಸಿದ್ದಾರೆ.

ಕಾಬೂಲ್: ಆಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ಅವರು ಪ್ರಬಲ ತಾಲಿಬಾನ್ ಹಿರಿಯ ನಾಯಕರನ್ನು ಭೇಟಿಯಾಗಿದ್ದು, ಸರ್ಕಾರದಲ್ಲಿ ಹಕ್ಕಾನಿ ನೆಟ್ ವರ್ಕ್ ಪಾಲ್ಗೊಳ್ಳುವಿಕೆಯ ಕುರಿತು ಚರ್ಚೆ ನಡೆಸಿದ್ದಾರೆ.

ಹಕ್ಕಾನಿ ನೆಟ್ ವರ್ಕ್ ಅನ್ನು ಅಮೆರಿಕ ಸರ್ಕಾರ ಉಗ್ರಗಾಮಿ ಸಮೂಹ ಎಂದು 2012ರಲ್ಲಿ ಘೋಷಣೆ ಮಾಡಿತ್ತು. ಅಲ್ಲದೆ ಅದರ ನಾಯಕರನ್ನು ಬಂಧಿಸಿ ಜೈಲಿಗಟ್ಟಿತ್ತು. ಇದೀಗ ಇದೇ ಗುಂಪಿನ ಮುಖಂಡರು ತಾಲಿಬಾನ್ ಸರ್ಕಾರದ ಭಾಗವಾಗುವ ಕುರಿತು ಮಾತುಕತೆಗಳು ನಡೆಯುತ್ತಿದ್ದು, ಇದೇ ವಿಚಾರವಾಗಿ ಹಮೀದ್  ಕರ್ಜೈ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ಮತ್ತು ಪದಚ್ಯುತ ಸರ್ಕಾರದ ಹಿರಿಯ ಅಧಿಕಾರಿಯಾದ ಅಬ್ದುಲ್ಲಾ ಅಬ್ದುಲ್ಲಾ, ಪ್ರಾಥಮಿಕ ಸಭೆಗಳ ಭಾಗವಾಗಿ ಅನಸ್ ಹಕ್ಕಾನಿಯನ್ನು ಭೇಟಿಯಾದರು, ಕರ್ಜೈ ಅವರ ವಕ್ತಾರರು ತಾಲಿಬಾನ್‌ನ ಉನ್ನತ ರಾಜಕೀಯ ನಾಯಕ ಮುಲ್ಲಾ ಅಬ್ದುಲ್ ಘನಿ ಬರದಾರ್ ಅವರೊಂದಿಗೆ  ಅಂತಿಮವಾಗಿ ಮಾತುಕತೆ ನಡೆಸಲು ಅನುಕೂಲವಾಗಲಿದೆ ಎಂದು ಹೇಳಿದರು.

ಮೂಲಗಳ ಪ್ರಕಾರ 2012ರಲ್ಲೇ ಅಮೆರಿಕ ಸರ್ಕಾರ ಹಕ್ಕಾನಿ ನೆಟ್ವರ್ಕ್ ಅನ್ನು ಭಯೋತ್ಪಾದಕ ಗುಂಪಿಗೆ ಸೇರ್ಪಡೆ ಮಾಡಿದ್ದು, ಭವಿಷ್ಯದ ಸರ್ಕಾರದಲ್ಲಿ ಅದರ ಪಾಲ್ಗೊಳ್ಳುವಿಕೆ ಅಂತಾರಾಷ್ಟ್ರೀಯ ನಿರ್ಬಂಧಗಳನ್ನು ಹೇರಲು ದಾರಿ ಮಾಡಿಕೊಡಬಹುದು ಎಂದು ಹೇಳಿದ್ದಾರೆ ಎಂದು ಹೇಳಲಾಗಿದೆ. 

ತಾಲಿಬಾನ್‌ಗಳು "ಅಂತರ್ಗತ, ಇಸ್ಲಾಮಿಕ್ ಸರ್ಕಾರ" ವನ್ನು ಸ್ಥಾಪಿಸಲು ಪ್ರತಿಜ್ಞೆ ಮಾಡಿವೆಯಾದರೂ ಇಸ್ಲಾಂ ಧರ್ಮದ ಅತ್ಯಂತ ತೀವ್ರವಾದ ವ್ಯಾಖ್ಯಾನಗಳನ್ನು ಅನುಸರಿಸದವರಿಗೆ ಈ ಹಿಂದಿನ ತಾಲಿಬಾನ್ ಸರ್ಕಾರದ ನಿಯಮಗಳೇ ಅನುಸರಿಸಲಾಗುತ್ತದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT