ಅಶ್ರಫ್ ಘನಿ 
ವಿದೇಶ

ಪರಾರಿಯಾಗಿದ್ದ ಆಫ್ಘನ್ ಅಧ್ಯಕ್ಷ ಯುಎಇನಲ್ಲಿ ಪತ್ತೆ, ಮಾನವೀಯ ನೆಲೆಗಟ್ಟಿನಲ್ಲಿ ಆಶ್ರಯ ಎಂದ ಯುಎಇ ಸರ್ಕಾರ!

ತಾಲಿಬಾನ್ ಬಂಡುಕೋರರ ದಾಳಿ ಬಳಿಕ ಆಫ್ಘಾನಿಸ್ತಾನದಿಂದ ಪರಾರಿಯಾಗಿದ್ದ ಅಧ್ಯಕ್ಷ ಅಶ್ರಫ್ ಘನಿ ಯುಎಇಯಲ್ಲಿ ಪತ್ತೆಯಾಗಿದ್ದು, ಮಾನವೀಯ ನೆಲೆಗಟ್ಟಿನಲ್ಲಿ ಆಶ್ರಯ ನೀಡಲಾಗಿದೆ ಎಂದು ಅಲ್ಲಿನ ಸರ್ಕಾರ ಹೇಳಿದೆ.

ದುಬೈ: ತಾಲಿಬಾನ್ ಬಂಡುಕೋರರ ದಾಳಿ ಬಳಿಕ ಆಫ್ಘಾನಿಸ್ತಾನದಿಂದ ಪರಾರಿಯಾಗಿದ್ದ ಅಧ್ಯಕ್ಷ ಅಶ್ರಫ್ ಘನಿ ಯುಎಇಯಲ್ಲಿ ಪತ್ತೆಯಾಗಿದ್ದು, ಮಾನವೀಯ ನೆಲೆಗಟ್ಟಿನಲ್ಲಿ ಆಶ್ರಯ ನೀಡಲಾಗಿದೆ ಎಂದು ಅಲ್ಲಿನ ಸರ್ಕಾರ ಹೇಳಿದೆ.

ಹೌದು.. ಅಫ್ಗಾನಿಸ್ತಾನದಿಂದ ಪಲಾಯನ ಮಾಡಿದ್ದ ಮಾಜಿ ಅಧ್ಯಕ್ಷ ಅಶ್ರಫ್ ಘನಿ ದುಬೈನಲ್ಲಿ ಪತ್ತೆಯಾಗಿದ್ದು, ತಾಲಿಬಾನ್ ಆಕ್ರಮಣದ ಬಳಿಕ ಓಡಿ ಬಂದ ಅಶ್ರಫ್ ಘನಿ ಅವರಿಗೆ ಮಾನವೀಯತೆ ಆಧಾರದ ಮೇಲೆ ಆಶ್ರಯ ನೀಡಿರುವುದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ಹೇಳಿದೆ.

ಈ ಬಗ್ಗೆ ಸ್ವತಃ ಯುಎಇ ವಿದೇಶಾಂಗ ವ್ಯವಹಾರಗಳು ಮತ್ತು ಅಂತಾರಾಷ್ಟ್ರೀಯ ಸಹಕಾರ ಸಚಿವಾಲಯವು, ಮಾನವೀಯತೆಯ ಆಧಾರದ ಮೇಲೆ ಅಫ್ಗಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಮತ್ತು ಅವರ ಕುಟುಂಬವನ್ನು ದೇಶಕ್ಕೆ ಸ್ವಾಗತಿಸಿರುವುದಾಗಿ ದೃಢೀಕರಿಸುತ್ತೇವೆ ಎಂದು ಯುಎಇ ಸಂಕ್ಷಿಪ್ತ ಹೇಳಿಕೆಯಲ್ಲಿ  ತಿಳಿಸಿದೆ.

ಭಾನುವಾರ, ತಾಲಿಬಾನ್ ಉಗ್ರರು ಕಾಬೂಲ್ ನಗರವನ್ನು ಆಕ್ರಮಿಸಲು ಬರುತ್ತಿದ್ದಂತೆ ಅಶ್ರಫ್ ಘನಿ ಅವರು ಅಫ್ಗಾನಿಸ್ತಾನದಿಂದ ಕುಟುಂಬದ ಜೊತೆ ಪಲಾಯನ ಮಾಡಿದ್ದರು. ತಾಲಿಬಾನಿಗಳು ಗೆದ್ದಿದ್ದಾರೆ. ರಕ್ತಪಾತವನ್ನು ತಪ್ಪಿಸಲು ದೇಶ ಬಿಟ್ಟು ಹೋಗುತ್ತಿರುವುದಾಗಿ ಅಶ್ರಫ್ ಘನಿ ಫೇಸ್‌ಬುಕ್ ಪೋಸ್ಟ್‌ನಲ್ಲಿ  ಹೇಳಿದ್ದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT