ಭದ್ರತಾ ಸಿಬ್ಬಂದಿ 
ವಿದೇಶ

ಅಫ್ಘಾನಿಸ್ತಾನದಿಂದ ಕಜಕಿಸ್ತಾನ್ ಗೆ ವಿಶ್ವಸಂಸ್ಥೆಯ ನೂರಾರು ಸಿಬ್ಬಂದಿ ಸ್ಥಳಾಂತರ

ಕಾಬೂಲ್ ನಲ್ಲಿ ಭದ್ರತೆ ಮತ್ತಿತರ ನಿರ್ಬಂಧಗಳ ದೃಷ್ಟಿಯಿಂದ ತನ್ನ ಸುಮಾರು 100  ಸಿಬ್ಬಂದಿಯನ್ನು ಅಫ್ಘಾನಿಸ್ತಾನದಿಂದ ಕಜಕಿಸ್ತಾನಕ್ಕೆ ಸ್ಥಳಾಂತರಿಸಲಾಗಿದೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಗಳ ವಕ್ತಾರ ತಿಳಿಸಿದ್ದಾರೆ.

ಕಾಬೂಲ್: ಕಾಬೂಲ್ ನಲ್ಲಿ ಭದ್ರತೆ ಮತ್ತಿತರ ನಿರ್ಬಂಧಗಳ ದೃಷ್ಟಿಯಿಂದ ತನ್ನ ಸುಮಾರು 100  ಸಿಬ್ಬಂದಿಯನ್ನು ಅಫ್ಘಾನಿಸ್ತಾನದಿಂದ ಕಜಕಿಸ್ತಾನಕ್ಕೆ ಸ್ಥಳಾಂತರಿಸಲಾಗಿದೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಗಳ ವಕ್ತಾರ ತಿಳಿಸಿದ್ದಾರೆ.

 ಭಾನುವಾರ ತಾಲಿಬಾನ್ ಕ್ಷಿಪ್ರಗತಿಯಲ್ಲಿ ಅಫ್ಘಾನಿಸ್ತಾನವನ್ನು ತಕ್ಕೆ ತೆಕ್ಕೆಗೆ ತೆಗೆದುಕೊಂಡ ನಂತರ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಭಾರೀ ಜನದಟ್ಟಣೆ ಉಂಟಾಗಿತ್ತು. ಅಮೆರಿಕ ಹಾಗೂ ಅದರ ಮಿತ್ರ ರಾಷ್ಟ್ರಗಳು ತಮ್ಮ ದೇಶದ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಕ್ಕೆ ಪ್ರಯತ್ನಿಸಿದ್ದವು.  

ಬುಧವಾರ ಸುಮಾರು 100 ವಿಶ್ವಸಂಸ್ಥೆ ಸಿಬ್ಬಂದಿ ಕಾಬೂಲ್‌ನಿಂದ ಅಲ್ಮಾಟಿಗೆ ಪ್ರಯಾಣ ಬೆಳೆಸಿತು, ಅಲ್ಲಿಂದಲೇ ಅವರು ತಮ್ಮ ಕೆಲಸವನ್ನು ಮುಂದುವರೆಸುತ್ತಾರೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಜನರಲ್ ಅಂಟೊನಿಯೊ ಗುಟೆರೆಸ್ ಸುದ್ದಿಗಾರರಿಗೆ ತಿಳಿಸಿದರು.

ಅಫ್ಘಾನಿಸ್ತಾನದಲ್ಲಿ ವಿಶ್ವಸಂಸ್ಥೆ ನೆರವು ಕಾರ್ಯಾಚರಣೆಗೆ ತಾತ್ಕಾಲಿಕ ಕಚೇರಿಗೆ ಅವಕಾಶ ನೀಡಿದ್ದಕ್ಕೆ ಕಜಕಿಸ್ತಾನ್ ಸರ್ಕಾರಕ್ಕೆ ವಿಶ್ವಸಂಸ್ಥೆ ಧನ್ಯವಾದ ಸಲ್ಲಿಸಲಿದೆ.  ಪ್ರಧಾನ ಕಾರ್ಯದರ್ಶಿ ಆಗಸ್ಟ್ 16 ರಂದು ಭದ್ರತಾ ಮಂಡಳಿಗೆ ಹೇಳಿದಂತೆ, ಅಫ್ಘಾನಿಸ್ತಾದಲ್ಲಿ ವಿಶ್ವಸಂಸ್ಥೆಯ ಉಪಸ್ಥಿತಿಯು ಭದ್ರತಾ ಪರಿಸ್ಥಿತಿಗೆ ಹೊಂದಿಕೊಳ್ಳುತ್ತದೆ ಎಂದು ಡುಜಾರಿಕ್ ಹೇಳಿದರು.

ಈ ಸಮಯದಲ್ಲಿ ಕಾಬೂಲ್ ಮತ್ತು ದೇಶದ ಇತರ ಭಾಗಗಳಲ್ಲಿನ ಭದ್ರತೆ ಮತ್ತು ಇತರ ನಿರ್ಬಂಧಗಳ ಹಿನ್ನೆಲೆಯಲ್ಲಿ, ಯುಎನ್ ಸಿಬ್ಬಂದಿಯ ಒಂದು ಭಾಗವನ್ನು ದೇಶದಿಂದ ಹೊರಹಾಕಲು ನಿರ್ಧರಿಸಲಾಗಿದೆ. ಪರಿಸ್ಥಿತಿ ತಿಳಿಯಾದ ನಂತರ ಸಿಬ್ಬಂದಿ ಅಫ್ಘಾನಿಸ್ತಾನಕ್ಕೆ ಮರಳಲಿದ್ದಾರೆ ಎಂದು ಅವರು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT