ಆಘ್ಘಾನ್ ಜನರು 
ವಿದೇಶ

ಅಘ್ಘಾನಿಸ್ತಾನದಲ್ಲಿ ಹಸಿವಿನ ಬಿಕ್ಕಟ್ಟು: ವಿಶ್ವಸಂಸ್ಥೆ ಕಳವಳ

ಅಫ್ಘಾನಿಸ್ತಾನವನ್ನು ತಾಲಿಬಾನ್‌ ವಶಪಡಿಸಿಕೊಳ್ಳುವ ಮೂಲಕ ಉದ್ಭವವಾಗಿರುವ ಮಾನವೀಯ ಬಿಕ್ಕಟ್ಟಿನಿಂದಾಗಿ 1.4 ಕೋಟಿ ಮಂದಿಗೆ ತಿನ್ನಲು ಆಹಾರ ಕೂಡ ಲಭಿಸುತ್ತಿಲ್ಲ ಎಂದು ವಿಶ್ವಸಂಸ್ಥೆ ಅಂದಾಜಿಸಿದೆ.

ವಿಶ್ವಸಂಸ್ಥೆ: ಅಫ್ಘಾನಿಸ್ತಾನವನ್ನು ತಾಲಿಬಾನ್‌ ವಶಪಡಿಸಿಕೊಳ್ಳುವ ಮೂಲಕ ಉದ್ಭವವಾಗಿರುವ ಮಾನವೀಯ ಬಿಕ್ಕಟ್ಟಿನಿಂದಾಗಿ 1.4 ಕೋಟಿ ಮಂದಿಗೆ ತಿನ್ನಲು ಆಹಾರ ಕೂಡ ಲಭಿಸುತ್ತಿಲ್ಲ ಎಂದು ವಿಶ್ವಸಂಸ್ಥೆ ಅಂದಾಜಿಸಿದೆ.

ಕೊರೊನಾ ಸಾಂಕ್ರಾಮಿಕದಿಂದ ಬಳಲುತ್ತಿರುವ ಆ ದೇಶದಲ್ಲಿ ಈ ಹೊಸ ಬಿಕ್ಕಟ್ಟು, ಗಂಭೀರ ಆರ್ಥಿಕ ಹಾಗೂ ಸಾಮಾಜಿಕ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ವಿಶ್ವ ಸಂಸ್ಥೆ ಆಹಾರ ಕಾರ್ಯಕ್ರಮಗಳ ಆಫ್ಘನ್ ನಿರ್ದೇಶಕಿ ಮೇರಿ ಎಲ್ಲೆನ್, ಕಳವಳ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಶೇ. 40 ಕ್ಕಿಂತಲೂ ಹೆಚ್ಚು ಬೆಳೆ ವಿಫಲವಾಗಿದ್ದು, ಸಂಗ್ರಹಿಸಿದ ಆಹಾರ ಧಾನ್ಯಗಳು ನಾಶವಾಗಿವೆ ಎಂದು ಅವರು ಹೇಳಿದ್ದಾರೆ.

ವಿಶ್ವಸಂಸ್ಥೆ ಪ್ರತಿನಿಧಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ತಾಲಿಬಾನಿಗಳ ಆಗಮನದಿಂದ ಸಾವಿರಾರು ಜನರು ನಿರಾಶ್ರಿತರಾಗುತ್ತಿದ್ದಾರೆ. ಅವರಿಗೆ ಆಹಾರ ಒದಗಿಸುವುದು ದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.

ಮೇ ತಿಂಗಳಲ್ಲಿ 40 ಲಕ್ಷ ಜನರ ಹಸಿವನ್ನು ನೀಗಿಸಲಾಗಿದೆ. ಮುಂದಿನ ಕೆಲವು ತಿಂಗಳಲ್ಲಿ 90 ಲಕ್ಷ ಜನರಿಗೆ ಆಹಾರ ಕಲ್ಪಿಸಬೇಕಾದ ಸಮಸ್ಯೆ ಸೇರಿದಂತೆ ಇನ್ನೂ ಹಲವು ಸವಾಲುಗಳಿವೆ. ಈ ಹಸಿವಿನ ಬಿಕ್ಕಟು ನಿವಾರಿಸಲು ಆಹಾರ ಪದಾರ್ಥಗಳನ್ನು ಆಮದು ಮಾಡಿಕೊಳ್ಳಲು ತುರ್ತಾಗಿ 20 ಕೋಟಿ ಅಮೆರಿಕನ್‌ ಡಾಲರ್‌ ಅಗತ್ಯವಿದೆ ಎಂದು ಮೇರಿ ವಿವರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT