ಅಮೆರಿಕಾ ಅಧ್ಯಕ್ಷ ಜೋ ಬೈಡನ್ 
ವಿದೇಶ

ಸದ್ಯಕ್ಕೆ ತಾಲಿಬಾನ್ ಮೇಲಿನ ನಿರ್ಬಂಧ ಸಡಿಲಿಕೆ ಇಲ್ಲ, ಅವರ ವರ್ತನೆಯನ್ನಾಧರಿಸಿ ಮುಂದಿನ ನಿರ್ಧಾರ: ಜೋ ಬೈಡನ್

ಸದ್ಯಕ್ಕೆ ತಾಲಿಬಾನ್ ಮೇಲಿನ ನಿರ್ಬಂಧ ಸಡಿಲಿಕೆ ಸಾಧ್ಯವಿಲ್ಲ ಎಂದು ಹೇಳಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್, ಮುಂದಿನ ನಿರ್ಧಾರ ಅವರ ವರ್ತನೆಯನ್ನಾಧರಿಸಿದೆ ಎಂದು ಹೇಳಿದ್ದಾರೆ.

ವಾಷಿಂಗ್ಟನ್: ಸದ್ಯಕ್ಕೆ ತಾಲಿಬಾನ್ ಮೇಲಿನ ನಿರ್ಬಂಧ ಸಡಿಲಿಕೆ ಸಾಧ್ಯವಿಲ್ಲ ಎಂದು ಹೇಳಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್, ಮುಂದಿನ ನಿರ್ಧಾರ ಅವರ ವರ್ತನೆಯನ್ನಾಧರಿಸಿದೆ ಎಂದು ಹೇಳಿದ್ದಾರೆ.

ಅಫ್ಘಾನಿಸ್ತಾನವನ್ನು ತಾಲಿಬಾನ್‌ ವಶಪಡಿಸಿಕೊಂಡ ನಂತರ ಅವರ ವಿರುದ್ಧ ಅಮೆರಿಕಾ ವಿಧಿಸಲಾಗಿರುವ ಕಠಿಣ ನಿರ್ಬಂಧಗಳನ್ನು ಕೈಬಿಡಲು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ನಿರಾಕರಿಸಿದ್ದಾರೆ. ಕಾಬೂಲ್‌ನಲ್ಲಿ ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರವನ್ನು ಬಲವಂತವಾಗಿ ಪತನಗೊಳಿಸಿದ ನಂತರ ಹಲವಾರು ಭರವಸೆ ನೀಡಿರುವ ತಾಲಿಬಾನ್‌ಗಳ ನಡವಳಿಕೆಗಳು ನಿರ್ಬಂಧ ಸಡಿಲಿಕೆಯನ್ನು ಅವಲಂಬಿಸಿರುತ್ತದೆ ಎಂದು ಅವರು ಹೇಳಿದ್ದಾರೆ. 

ಕೆಲವು ಷರತ್ತುಗಳಿಗೆ ಒಳಪಟ್ಟು ತಾಲಿಬಾನ್ ವಿರುದ್ಧದ ನಿರ್ಬಂಧಗಳನ್ನು ಮುಂದುವರಿಸಲಾಗುವುದೇ ಎಂದು ರೂಸ್ ವೆಲ್ಟ್‌ ಕೊಠಡಿಯಲ್ಲಿ ನಡೆದ ಸಮಾವೇಶದಲ್ಲಿ ಮಾಧ್ಯಮಗಳು ಪ್ರಶ್ನಿಸಿದಾಗ "ಹೌದು" ಎಂದು ಬೈಡನ್‌ ಉತ್ತರಿಸಿದರು.

ನಿರ್ಬಂಧ ಸಡಿಲಿಕೆ ತಾಲಿಬಾನ್‌ ನಡವಳಿಕೆಯನ್ನು ಅವಲಂಬಿಸಿರುತ್ತದೆ. ಕಾಬೂಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಲೂ ಭದ್ರತಾ ವಲಯವನ್ನು ಇನ್ನಷ್ಟು ವಿಸ್ತರಿಸಲಾಗುವುದು. ಆಗಸ್ಟ್‌ 31 ರೊಳಗೆ ಪೂರ್ಣಗೊಳ್ಳಲಿರುವ, ಸೇನಾ ಪಡೆಗಳ ವಾಪಸಾತಿ ಅವಧಿ ವಿಸ್ತರಿಸುವ ಸಾಧ್ಯತೆಗಳ ಬಗ್ಗೆ ಅಮೆರಿಕಾ ಭದ್ರತಾ ಪಡೆಗಳೊಂದಿಗೆ ಚರ್ಚಿಸುತ್ತೇವೆ ಎಂದು ಅವರು ತಿಳಿಸಿದರು. 

ಇದಕ್ಕೂ ಮುನ್ನ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಜೇಕ್ ಸುಲ್ಲಿವಾನ್ ಅವರು ಮಾತನಾಡಿ, ಕಾಬೂಲ್ ವಿಮಾನ ನಿಲ್ದಾಣದಿಂದ ನಾಗರೀಕರ ಸ್ಥಳಾಂತರ ಕಾರ್ಯಾಚರಣೆಗೆ ತಾಲಿಬಾನ್‌ ಅಡ್ಡಿಪಡಿಸಿದರೆ, ಅಮೆರಿಕಾ ಅವರಿಗೆ ತಕ್ಕ ಬುದ್ದಿ ಹೇಳಲಿದೆ ಎಂದು ಎಚ್ಚರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!