ತಾಲಿಬಾನ್ ಉಗ್ರರು 
ವಿದೇಶ

ಆಗಸ್ಟ್ 31ರ ಗಡುವು ಮೀರಿದರೆ ಪರಿಣಾಮ ಎದುರಿಸಬೇಕಾಗುತ್ತದೆ: ಅಮೆರಿಕಾ, ಬ್ರಿಟನ್ ಗೆ ತಾಲೀಬಾನ್ ಎಚ್ಚರಿಕೆ

ಅಫ್ಘಾನಿಸ್ತಾನದಿಂದ ಸೇನಾ ಪಡೆಗಳನ್ನು ಹಿಂಪಡೆದುಕೊಳ್ಳಲು ಹೆಚ್ಚುವರಿ ಸಮಯ ಕೋರಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೆರಿಕಾ ಹಾಗೂ ಬ್ರಿಟನ್ ದೇಶಗಳಿಗೆ ತಾಲಿಬಾನ್‌ ಗಳು  ಹೊಸದಾಗಿ ಎಚ್ಚರಿಕೆ ನೀಡಿದ್ದಾರೆ.   

ಕಾಬೂಲ್‌: ಅಫ್ಘಾನಿಸ್ತಾನದಿಂದ ಸೇನಾ ಪಡೆಗಳನ್ನು ಹಿಂಪಡೆದುಕೊಳ್ಳಲು ಹೆಚ್ಚುವರಿ ಸಮಯ ಕೋರಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೆರಿಕಾ ಹಾಗೂ ಬ್ರಿಟನ್ ದೇಶಗಳಿಗೆ ತಾಲಿಬಾನ್‌ ಗಳು  ಹೊಸದಾಗಿ ಎಚ್ಚರಿಕೆ ನೀಡಿದ್ದಾರೆ.   

ಸೇನಾ ಪಡೆಗಳನ್ನು ಹಿಂಪಡೆಯುವುದಕ್ಕೆ ಆಗಸ್ಟ್‌  31ರ  ಅಂತಿಮ ಗಡುವು ವಿಸ್ತರಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿವೆ.

ಆಗಸ್ಟ್‌  31ವೇಳೆಗೆ ಸೇನಾ ಪಡೆಗಳ ವಾಪಸಾತಿ ಪೂರ್ಣಗೊಳಿಸಲಿದ್ದೇವೆ ಎಂದು ಅಮೆರಿಕಾ ಅಧ್ಯಕ್ಷ  ಬೈಡನ್‌  ಅವರೇ  ಖುದ್ದು ಘೋಷಿಸಿದ್ದರು. ಈ ಗಡುವನ್ನು ಅಮೆರಿಕವಾಗಲಿ, ಬ್ರಿಟನ್‌ ಆಗಲಿ ವಿಸ್ತರಿಸಿದ್ದೇ ಆದರೆ,     ಅವರು ಅಫ್ಘಾನಿಸ್ತಾನದಲ್ಲಿ ಮತ್ತಷ್ಟು ಸಮಯ ಉಳಿಯಲು  ನಿರ್ಣಯಿಸದಂತೆ ಎಂದು ಭಾವಿಸಿದಂತಾಗುತ್ತದೆ.
 
ಅವರು ತಮ್ಮ ನಿರ್ಣಯಗಳಿಗೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು  ತಾಲಿಬಾನ್‌  ವಕ್ತಾರ  ಸುಹೇಲ್‌ ಶಾಹಿನ್‌ ಎಚ್ಚರಿಕೆ ನೀಡಿದ್ದಾರೆ.

ಗಡುವು ವಿಸ್ತರಣೆ ಕೇಳಿದಲ್ಲಿ ಅದು ನಮ್ಮ ನಡುವೆ ಅಪನಂಬಿಕೆ ಉಂಟುಮಾಡಲಿದ್ದು ಪ್ರತಿಕ್ರಿಯೆಯನ್ನು ಪ್ರಚೋದಿಸಲಿದೆ ಎಂದು ತಾಲೀಬಾನ್ ವಕ್ತಾರರು ಹೇಳಿದ್ದಾರೆ.

ತಾಲಿಬಾನ್ ನಿಯಂತ್ರಣದಲ್ಲಿರುವ ಅಫ್ಘಾನಿಸ್ತಾನದಿಂದ ವಿದೇಶಿ ಪ್ರಜೆಗಳನ್ನು ವಾಪಸ್ ಕರೆಸಿಕೊಳ್ಳುವುದಕ್ಕೂ ಹಾಗೂ ಆ.31 ರ ಗಡುವಿಗೂ ಅಂತರ ಕಡಿಮೆ ಇರುವುದರಿಂದ ಅಮೆರಿಕಾದ ಮೇಲೆ ಆ.31 ರ ಗಡುವು ವಿಸ್ತರಿಸಿಕೊಳ್ಳಬೇಕೆಂಬ ಒತ್ತಡ ಜಾಗತಿಕ ಸಮುದಾಯದಿಂದ ಹೆಚ್ಚಾಗುತ್ತಿದೆ. ಈ ನಡುವೆ ಅಫ್ಘಾನಿಸ್ತಾನದ ಬೆಳವಣಿಗೆ ಸಂಬಂಧ ಬ್ರಿಟನ್ ಪ್ರಧಾನಿ ತುರ್ತಾಗಿ ಜಿ-7 ಸಭೆಯನ್ನು ನಡೆಸಲು ಮುಂದಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT