ತಾಲಿಬಾನ್ ಮುಖಂಡರು 
ವಿದೇಶ

ಮುಂದಿನ ಆಫ್ಘಾನಿಸ್ತಾನ ಸರ್ಕಾರಕ್ಕೆ ಧಾರ್ಮಿಕ ವಿದ್ವಾಂಸರ ನಾಯಕತ್ವ: ತಾಲಿಬಾನ್

ವಾರದ ಹಿಂದೆ ಉಗ್ರ ಸಂಘಟನೆ ತಾಲಿಬಾನ್ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನನ್ನು ವಶಕ್ಕೆ ಪಡೆದ ನಂತರ ಅಲ್ಲಿನ ಸರ್ಕಾರ ಪತನಗೊಂಡು ಅರಾಜಕತೆ, ಅಸ್ಥಿರತೆ ಉಂಟಾಗಿರುವಂತೆಯೇ, ಮುಂಬರುವ ಸರ್ಕಾರವನ್ನು ಧಾರ್ಮಿಕ ವಿದ್ವಾಂಸರು ಮುನ್ನಡೆಸಲಿದ್ದಾರೆ ಎಂದು ತಾಲಿಬಾನ್ ಹೇಳಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

ಕಾಬೂಲ್: ವಾರದ ಹಿಂದೆ ಉಗ್ರ ಸಂಘಟನೆ ತಾಲಿಬಾನ್ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನನ್ನು ವಶಕ್ಕೆ ಪಡೆದ ನಂತರ ಅಲ್ಲಿನ ಸರ್ಕಾರ ಪತನಗೊಂಡು ಅರಾಜಕತೆ, ಅಸ್ಥಿರತೆ ಉಂಟಾಗಿರುವಂತೆಯೇ, ಮುಂಬರುವ ಸರ್ಕಾರವನ್ನು ಧಾರ್ಮಿಕ ವಿದ್ವಾಂಸರು ಮುನ್ನಡೆಸಲಿದ್ದಾರೆ ಎಂದು ತಾಲಿಬಾನ್ ಹೇಳಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

ಕಾಬೂಲ್ ನಲ್ಲಿ ನೆರೆದಿದ್ದ ಜನರನ್ನುದ್ದೇಶಿಸಿ ಮಾತನಾಡಿದ ತಾಲಿಬಾನ್ ಮುಖಂಡರು, ನಮ್ಮ 20 ವರ್ಷಗಳ ಹೋರಾಟ ವ್ಯರ್ಥವಾಗಬಾರದು, ಧಾರ್ಮಿಕ ವಿದ್ವಾಂಸರು ನಾಯಕತ್ವ ತೆಗೆದುಕೊಳ್ಳಬೇಕು ಮತ್ತು ಮುಂಬರುವ ಅಫ್ಘಾನಿಸ್ತಾನ ಸರ್ಕಾರವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ಅಲ್ಲದೇ, ನೆರೆದಿದ್ದವರಲ್ಲಿ ಹತ್ತು ಮಂದಿ ಧಾರ್ಮಿಕ ವಿದ್ವಾಂಸರನ್ನು ಆಹ್ವಾನಿಸಿದ ಉಗ್ರ ಸಂಘಟನೆ, ರಾಜಕೀಯ ವ್ಯವಸ್ಥೆ ರೂಪಿಸಲು ಹಾಗೂ ಮುಂದಿನ ಸರ್ಕಾರಕ್ಕೆ ಜನರ ಬೆಂಬಲ ಕೋರಲು ಸಹಕಾರವನ್ನು ಕೇಳಿದರು ಎಂದು ಅಫ್ಘಾನಿಸ್ತಾನದ ಖಾಮ ಪ್ರೆಸ್ ಹೇಳಿದೆ.ಎಲ್ಲರನ್ನೊಳಗೊಂಡ ಸರ್ಕಾರವನ್ನು ರಚಿಸಲಾಗುವುದು, ಎಲ್ಲಾ ಜನರ ಹಕ್ಕುಗಳನ್ನು ಸಂರಕ್ಷಿಸಲಾಗುವುದು ಎಂದು ತಾಲಿಬಾನ್ ವಕ್ತಾರ ಜುಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ.

ಪಕ್ಷಪಾತ, ಭಾಷಿಕ ಮತ್ತು ಪಂಥೀಯ ಮೌಲ್ಯಗಳ ಹೊರತಾಗಿಯೂ, ಜನರು ಒಗ್ಗೂಡಿ ಅಫ್ಘಾನಿಸ್ತಾನದ ಅಭಿವೃದ್ಧಿಗಾಗಿ ಕೆಲಸ ಮಾಡಬೇಕು ಎಂದು ಅವರು ಹೇಳಿರುವುದಾಗಿ ಖಾಮ ಉಲ್ಲೇಖಿಸಿದೆ. ಸರ್ಕಾರ ರಚನೆಯ ಭಾಗವಾಗಿ ಆಫ್ಘನ್ ದೇಶದೊಳಗಿನ ಮುಖಂಡರೊಂದಿಗೆ ತಾಲಿಬಾನ್ ಮಾತುಕತೆ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT