ತಾಲಿಬಾನ್ ಮುಖಂಡರು 
ವಿದೇಶ

ಮುಂದಿನ ಆಫ್ಘಾನಿಸ್ತಾನ ಸರ್ಕಾರಕ್ಕೆ ಧಾರ್ಮಿಕ ವಿದ್ವಾಂಸರ ನಾಯಕತ್ವ: ತಾಲಿಬಾನ್

ವಾರದ ಹಿಂದೆ ಉಗ್ರ ಸಂಘಟನೆ ತಾಲಿಬಾನ್ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನನ್ನು ವಶಕ್ಕೆ ಪಡೆದ ನಂತರ ಅಲ್ಲಿನ ಸರ್ಕಾರ ಪತನಗೊಂಡು ಅರಾಜಕತೆ, ಅಸ್ಥಿರತೆ ಉಂಟಾಗಿರುವಂತೆಯೇ, ಮುಂಬರುವ ಸರ್ಕಾರವನ್ನು ಧಾರ್ಮಿಕ ವಿದ್ವಾಂಸರು ಮುನ್ನಡೆಸಲಿದ್ದಾರೆ ಎಂದು ತಾಲಿಬಾನ್ ಹೇಳಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

ಕಾಬೂಲ್: ವಾರದ ಹಿಂದೆ ಉಗ್ರ ಸಂಘಟನೆ ತಾಲಿಬಾನ್ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನನ್ನು ವಶಕ್ಕೆ ಪಡೆದ ನಂತರ ಅಲ್ಲಿನ ಸರ್ಕಾರ ಪತನಗೊಂಡು ಅರಾಜಕತೆ, ಅಸ್ಥಿರತೆ ಉಂಟಾಗಿರುವಂತೆಯೇ, ಮುಂಬರುವ ಸರ್ಕಾರವನ್ನು ಧಾರ್ಮಿಕ ವಿದ್ವಾಂಸರು ಮುನ್ನಡೆಸಲಿದ್ದಾರೆ ಎಂದು ತಾಲಿಬಾನ್ ಹೇಳಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

ಕಾಬೂಲ್ ನಲ್ಲಿ ನೆರೆದಿದ್ದ ಜನರನ್ನುದ್ದೇಶಿಸಿ ಮಾತನಾಡಿದ ತಾಲಿಬಾನ್ ಮುಖಂಡರು, ನಮ್ಮ 20 ವರ್ಷಗಳ ಹೋರಾಟ ವ್ಯರ್ಥವಾಗಬಾರದು, ಧಾರ್ಮಿಕ ವಿದ್ವಾಂಸರು ನಾಯಕತ್ವ ತೆಗೆದುಕೊಳ್ಳಬೇಕು ಮತ್ತು ಮುಂಬರುವ ಅಫ್ಘಾನಿಸ್ತಾನ ಸರ್ಕಾರವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ಅಲ್ಲದೇ, ನೆರೆದಿದ್ದವರಲ್ಲಿ ಹತ್ತು ಮಂದಿ ಧಾರ್ಮಿಕ ವಿದ್ವಾಂಸರನ್ನು ಆಹ್ವಾನಿಸಿದ ಉಗ್ರ ಸಂಘಟನೆ, ರಾಜಕೀಯ ವ್ಯವಸ್ಥೆ ರೂಪಿಸಲು ಹಾಗೂ ಮುಂದಿನ ಸರ್ಕಾರಕ್ಕೆ ಜನರ ಬೆಂಬಲ ಕೋರಲು ಸಹಕಾರವನ್ನು ಕೇಳಿದರು ಎಂದು ಅಫ್ಘಾನಿಸ್ತಾನದ ಖಾಮ ಪ್ರೆಸ್ ಹೇಳಿದೆ.ಎಲ್ಲರನ್ನೊಳಗೊಂಡ ಸರ್ಕಾರವನ್ನು ರಚಿಸಲಾಗುವುದು, ಎಲ್ಲಾ ಜನರ ಹಕ್ಕುಗಳನ್ನು ಸಂರಕ್ಷಿಸಲಾಗುವುದು ಎಂದು ತಾಲಿಬಾನ್ ವಕ್ತಾರ ಜುಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ.

ಪಕ್ಷಪಾತ, ಭಾಷಿಕ ಮತ್ತು ಪಂಥೀಯ ಮೌಲ್ಯಗಳ ಹೊರತಾಗಿಯೂ, ಜನರು ಒಗ್ಗೂಡಿ ಅಫ್ಘಾನಿಸ್ತಾನದ ಅಭಿವೃದ್ಧಿಗಾಗಿ ಕೆಲಸ ಮಾಡಬೇಕು ಎಂದು ಅವರು ಹೇಳಿರುವುದಾಗಿ ಖಾಮ ಉಲ್ಲೇಖಿಸಿದೆ. ಸರ್ಕಾರ ರಚನೆಯ ಭಾಗವಾಗಿ ಆಫ್ಘನ್ ದೇಶದೊಳಗಿನ ಮುಖಂಡರೊಂದಿಗೆ ತಾಲಿಬಾನ್ ಮಾತುಕತೆ ನಡೆಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT