ತಾಲೀಬಾನ್ ಉಗ್ರರು 
ವಿದೇಶ

ತಾಲಿಬಾನ್ ಭಾರತದೊಂದಿಗೆ ಉತ್ತಮ ಬಾಂಧವ್ಯ, ಸಂಬಂಧವನ್ನು ಬಯಸುತ್ತದೆ: ವಕ್ತಾರ

ಭಾರತದೊಂದಿಗೆ ಉತ್ತಮ ಬಾಂಧವ್ಯ-ಸಂಬಂಧವನ್ನು ಬಯಸುವುದಾಗಿ ತಾಲೀಬಾನ್ ವಕ್ತಾರ ಝಬಿ-ಉಲ್ಲಾಹ್ ಮುಜಾಹಿದ್ ಹೇಳಿದ್ದಾರೆ.

ಕಾಬೂಲ್: ಭಾರತದೊಂದಿಗೆ ಉತ್ತಮ ಬಾಂಧವ್ಯ-ಸಂಬಂಧವನ್ನು ಬಯಸುವುದಾಗಿ ತಾಲೀಬಾನ್ ವಕ್ತಾರ ಝಬಿ-ಉಲ್ಲಾಹ್ ಮುಜಾಹಿದ್ ಹೇಳಿದ್ದಾರೆ.

ಪಾಕಿಸ್ತಾನದ ಎಆರ್ ವೈ ಸುದ್ದಿ ವಾಹಿನಿ ಈ ಹೇಳಿಕೆಯನ್ನು ವರದಿ ಮಾಡಿದ್ದು, ಆಫ್ಘಾನಿಸ್ತಾನದಲ್ಲಿ ಈಗ ಆಡಳಿತ ನಡೆಸುತ್ತಿರುವ ತಾಲೀಬಾನ್ ಭಾರತವನ್ನು ಈ ಪ್ರದೇಶದಲ್ಲಿ ಪ್ರಮುಖ ಭಾಗ ಎಂದು ಗುರುತಿಸುವುದಾಗಿ ಹೇಳಿಕೊಂಡಿದೆ.

"ಭಾರತವೂ ಸೇರಿದಂತೆ ಎಲ್ಲಾ ದೇಶಗಳೊಂದಿಗೂ ನಾವು ಉತ್ತಮ ಬಾಂಧವ್ಯದಲ್ಲಿರುವುದನ್ನು ಬಯಸುತ್ತೇವೆ. ಆದ್ದರಿಂದ ಭಾರತ ಆಫ್ಘಾನ್ ಜನರ ಹಿತಾಸಕ್ತಿಯ ದೃಷ್ಟಿಯಿಂದ ತನ್ನ ನೀತಿಯನ್ನು ರೂಪಿಸಲಿ ಎಂಬುದು ನಮ್ಮ ಆಶಯವಾಗಿದೆ" ಎಂದು ಮುಜಾಹಿದ್ ಹೇಳಿದ್ದಾರೆ.

ಆ.15 ರಂದು ಆಫ್ಘಾನಿಸ್ತಾನದಲ್ಲಿ ಪ್ರಜಾಪ್ರಭುತ್ವ ರೀತಿಯಲ್ಲಿ ಸ್ಥಾಪಿತವಾದ ಸರ್ಕಾರದಿಂದ ಅಧಿಕಾರವನ್ನು ಕಸಿದುಕೊಂಡು ತಾಲೀಬಾನ್ ಆ ರಾಷ್ಟ್ರವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು.

ನಾವು ನಮ್ಮ ನೆಲವನ್ನು ಬೇರೆ ರಾಷ್ಟ್ರದ ವಿರುದ್ಧ ಬಳಕೆ ಮಾಡಲು ಬಿಡುವುದಿಲ್ಲ ಎಂದು ಈ ಹಿಂದೆಯೂ ಹೇಳಿದ್ದೆವು. ನಮ್ಮ ನೀತಿ ಸ್ಪಷ್ಟವಾಗಿದೆ ಎಂದು ಮುಜಾಹಿದ್ ತಿಳಿಸಿದ್ದಾರೆ.

ಇದೇ ವೇಳೆ ಭಾರತ-ಪಾಕ್ ಸಂಬಂಧಗಳ ಬಗ್ಗೆಯೂ ಮಾತನಾಡಿರುವ ಮುಜಾಹಿದ್, ಉಭಯ ದೇಶಗಳೂ ನೆರೆ ರಾಷ್ಟ್ರಗಳಾಗಿದ್ದು, ಹಿತಾಸಕ್ತಿಗಳು ಪರಸ್ಪರ ಸಂಬಂಧಿಸಿದ್ದಾಗಿರುತ್ತದೆ ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

SCROLL FOR NEXT