ತಾಲೀಬಾನ್ ಉಗ್ರರು 
ವಿದೇಶ

ತಾಲಿಬಾನ್ ಭಾರತದೊಂದಿಗೆ ಉತ್ತಮ ಬಾಂಧವ್ಯ, ಸಂಬಂಧವನ್ನು ಬಯಸುತ್ತದೆ: ವಕ್ತಾರ

ಭಾರತದೊಂದಿಗೆ ಉತ್ತಮ ಬಾಂಧವ್ಯ-ಸಂಬಂಧವನ್ನು ಬಯಸುವುದಾಗಿ ತಾಲೀಬಾನ್ ವಕ್ತಾರ ಝಬಿ-ಉಲ್ಲಾಹ್ ಮುಜಾಹಿದ್ ಹೇಳಿದ್ದಾರೆ.

ಕಾಬೂಲ್: ಭಾರತದೊಂದಿಗೆ ಉತ್ತಮ ಬಾಂಧವ್ಯ-ಸಂಬಂಧವನ್ನು ಬಯಸುವುದಾಗಿ ತಾಲೀಬಾನ್ ವಕ್ತಾರ ಝಬಿ-ಉಲ್ಲಾಹ್ ಮುಜಾಹಿದ್ ಹೇಳಿದ್ದಾರೆ.

ಪಾಕಿಸ್ತಾನದ ಎಆರ್ ವೈ ಸುದ್ದಿ ವಾಹಿನಿ ಈ ಹೇಳಿಕೆಯನ್ನು ವರದಿ ಮಾಡಿದ್ದು, ಆಫ್ಘಾನಿಸ್ತಾನದಲ್ಲಿ ಈಗ ಆಡಳಿತ ನಡೆಸುತ್ತಿರುವ ತಾಲೀಬಾನ್ ಭಾರತವನ್ನು ಈ ಪ್ರದೇಶದಲ್ಲಿ ಪ್ರಮುಖ ಭಾಗ ಎಂದು ಗುರುತಿಸುವುದಾಗಿ ಹೇಳಿಕೊಂಡಿದೆ.

"ಭಾರತವೂ ಸೇರಿದಂತೆ ಎಲ್ಲಾ ದೇಶಗಳೊಂದಿಗೂ ನಾವು ಉತ್ತಮ ಬಾಂಧವ್ಯದಲ್ಲಿರುವುದನ್ನು ಬಯಸುತ್ತೇವೆ. ಆದ್ದರಿಂದ ಭಾರತ ಆಫ್ಘಾನ್ ಜನರ ಹಿತಾಸಕ್ತಿಯ ದೃಷ್ಟಿಯಿಂದ ತನ್ನ ನೀತಿಯನ್ನು ರೂಪಿಸಲಿ ಎಂಬುದು ನಮ್ಮ ಆಶಯವಾಗಿದೆ" ಎಂದು ಮುಜಾಹಿದ್ ಹೇಳಿದ್ದಾರೆ.

ಆ.15 ರಂದು ಆಫ್ಘಾನಿಸ್ತಾನದಲ್ಲಿ ಪ್ರಜಾಪ್ರಭುತ್ವ ರೀತಿಯಲ್ಲಿ ಸ್ಥಾಪಿತವಾದ ಸರ್ಕಾರದಿಂದ ಅಧಿಕಾರವನ್ನು ಕಸಿದುಕೊಂಡು ತಾಲೀಬಾನ್ ಆ ರಾಷ್ಟ್ರವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು.

ನಾವು ನಮ್ಮ ನೆಲವನ್ನು ಬೇರೆ ರಾಷ್ಟ್ರದ ವಿರುದ್ಧ ಬಳಕೆ ಮಾಡಲು ಬಿಡುವುದಿಲ್ಲ ಎಂದು ಈ ಹಿಂದೆಯೂ ಹೇಳಿದ್ದೆವು. ನಮ್ಮ ನೀತಿ ಸ್ಪಷ್ಟವಾಗಿದೆ ಎಂದು ಮುಜಾಹಿದ್ ತಿಳಿಸಿದ್ದಾರೆ.

ಇದೇ ವೇಳೆ ಭಾರತ-ಪಾಕ್ ಸಂಬಂಧಗಳ ಬಗ್ಗೆಯೂ ಮಾತನಾಡಿರುವ ಮುಜಾಹಿದ್, ಉಭಯ ದೇಶಗಳೂ ನೆರೆ ರಾಷ್ಟ್ರಗಳಾಗಿದ್ದು, ಹಿತಾಸಕ್ತಿಗಳು ಪರಸ್ಪರ ಸಂಬಂಧಿಸಿದ್ದಾಗಿರುತ್ತದೆ ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT