ಡ್ರೋನ್ ಕ್ಷಿಪಣಿ ಮೇಲೆ ಹುತಾತ್ಮ ಯೋಧರ ಹೆಸರು 
ವಿದೇಶ

ಕ್ಷಿಪಣಿ ಮೇಲೆ ಹುತಾತ್ಮ ಯೋಧರ ಹೆಸರು ಬರೆದು ಇಸಿಸ್-ಕೆ ಉಗ್ರರ ವಿರುದ್ಧ ಸೇಡು ತೀರಿಸಿಕೊಂಡ ಅಮೆರಿಕ ಸೇನೆ

ಇಸಿಸ್ ಕೆ ಉಗ್ರರ ವಿರುದ್ಧ ಡ್ರೋನ್ ದಾಳಿ ನಡೆಸಿ ಸೇಡು ತೀರಿಸಿಕೊಂಡಿದ್ದ ಅಮೆರಿಕ ಸೇನೆ, ದಾಳಿಗೂ ಮುನ್ನ ಕ್ಷಿಪಣಿ ಮೇಲೆ ಹುತಾತ್ಮ ಯೋಧರ ಹೆಸರುಗಳನ್ನು ಬರೆದಿತ್ತು ಎಂದು ತಿಳಿದು ಬಂದಿದೆ.

ಕಾಬೂಲ್: ಇಸಿಸ್ ಕೆ ಉಗ್ರರ ವಿರುದ್ಧ ಡ್ರೋನ್ ದಾಳಿ ನಡೆಸಿ ಸೇಡು ತೀರಿಸಿಕೊಂಡಿದ್ದ ಅಮೆರಿಕ ಸೇನೆ, ದಾಳಿಗೂ ಮುನ್ನ ಕ್ಷಿಪಣಿ ಮೇಲೆ ಹುತಾತ್ಮ ಯೋಧರ ಹೆಸರುಗಳನ್ನು ಬರೆದಿತ್ತು ಎಂದು ತಿಳಿದು ಬಂದಿದೆ.

ಆಫ್ಗಾನಿಸ್ತಾನವನ್ನು ತಾಲಿಬಾನ್ ಪಡೆಗಳು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕ ಸೇನೆ ಆ ದೇಶದಲ್ಲಿರುವ ತನ್ನ ಪ್ರಜೆಗಳಿಗಾಗಿ ಏರ್ ಲಿಫ್ಟ್ ಕಾರ್ಯಾಚರಣೆ ನಡೆಸುತ್ತಿದ್ದು, ಇದರ ಬೆನ್ನಲ್ಲೇ ಅಮೆರಿಕ ಸೇನೆಯನ್ನು ಗುರಿಯಾಗಿಸಿಕೊಂಡು ಇಸಿಸ್-ಕೆ ಉಗ್ರರು ಆತ್ಮಾಹುತಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 13 ಮಂದಿ ಅಮೆರಿಕ ಸೈನಿಕರು ಸೇರಿದಂತೆ 170 ಮಂದಿ ಸಾವನ್ನಪ್ಪಿದ್ದರು. 

ಈ ದಾಳಿಗೆ ಪ್ರತಿಯಾಗಿ ಅಮೆರಿಕ ಸೇನೆ ಕೂಡ ಇಸ್ಲಾಮಿಕ್ ಸ್ಟೇಟ್ ಅಡಗುದಾಣಗಳ ಮೇಲೆ ಡ್ರೋನ್ ದಾಳಿ ನಡೆಸಿತ್ತು. ಈ ವೇಳೆ ಇಸಿಸ್ ನ ಇಬ್ಬರು ಪ್ರಮುಖ ಕಮಾಂಡರ್ ಗಳು ಸಾವನ್ನಪ್ಪಿದ್ದರು. ಇವರೇ ಆತ್ಮಾಹುತಿ ದಾಳಿಯ ರೂವಾರಿಗಳು ಎಂದು ಅಮೆರಿಕ ಹೇಳಿತ್ತು.

ಇನ್ನು ಈ ಘಟನೆ ನಡೆದ ಕೆಲವೇ ದಿನಗಳ ಅಂತರದಲ್ಲಿ ಇದೀಗ ಮತ್ತೊಂದು ಮಹತ್ವದ ವಿಚಾರ ಬಹಿರಂಗಗೊಂಡಿದೆ. ಅದೇನೆಂದರೆ ಉಗ್ರರ ವಿರುದ್ಧದ ಕಾರ್ಯಾಚರಣೆಗೆ ಬಳಸಲಾಗಿದ್ದ ಕ್ಷಿಪಣಿ ಮೇಲೆ ಹುತಾತ್ಮ ಯೋಧರ ಹೆಸರು ಬರೆದು ಸೇಡು ತೀರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹುತಾತ್ಮ ಯೋಧರ ಹೆಸರು ಬರೆದ ಕ್ಷಿಪಣಿಯನ್ನೇ ಉಗ್ರರ ಅಡಗುದಾಣಗಳ ಮೇಲೆ ಸ್ಫೋಟಿಸಲಾಗಿತ್ತು. ಆ ಮೂಲಕ ಅಮೆರಿಕ ತನ್ನ ಸೈನಿಕರ ಸಾವಿನ ಸೇಡು ತೀರಿಸಿಕೊಂಡಿದೆ.

ಈ ದಾಳಿ ಬಳಿಕ ಅಮೆರಿಕ ಅಧ್ಯಕ್ಷ ಜೋ ಬೈಡನ್, ಹುತಾತ್ಮ ಸೈನಿಕರ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT