ಗೊಟಬಯ ರಾಜಪಕ್ಸ 
ವಿದೇಶ

ಆಹಾರ ತುರ್ತು ಪರಿಸ್ಥಿತಿ ಘೋಷಿಸಿದ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ

ಶ್ರೀಲಂಕಾದಲ್ಲಿ ಅಕ್ಕಿ, ನೀರುಳ್ಳಿ, ಆಲೂಗಡ್ಡೆ ಸೇರಿದಂತೆ ಹಲವು ದಿನಸಿ ಸಾಮಗ್ರಿ ಬೆಲೆ ಗಗನಕ್ಕೇರುತ್ತಲೇ ಇದೆ. ಅಲ್ಲದೆ ಹಾಲಿನ ಪುಡಿ, ಸೀಮೆ ಎಣ್ಣೆ, ಅಡುಗೆ ಅನಿಲ ಖರೀದಿಗೆ ಗ್ರಾಹಕರು ಅಂಗಡಿ ಮುಂದೆ ಸರದಿ ನಿಲ್ಲುತ್ತಿದ್ದಾರೆ.

ಕೊಲಂಬೊ: ಶ್ರೀಲಂಕಾದ ಖಾಸಗಿ ಬ್ಯಾಂಕುಗಳಲ್ಲಿ ವಿದೇಶಿ ವಿನಿಮಯ ಖಾಲಿಯಾದ ಪರಿಣಾಮ ಆಮದು ಪ್ರಕ್ರಿಯೆಗೆ ತಡೆ ಬಿದ್ದಿದ್ದು ಅದರ ಬೆನ್ನಲ್ಲೇ ಶ್ರೀಲಂಕಾ ಆಹಾರ ತುರ್ತುಪರಿಸ್ಥಿತಿ ಘೋಷಣೆ ಮಾಡಿದೆ. 

ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಆಹಾರ ಅಭದ್ರತೆ ತೋರಿರುವುದರಿಂದ ಸಕ್ಕರೆ, ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳ ದಾಸ್ತಾನಿನ ವಿರುದ್ಧ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಈ ಬಗ್ಗೆ ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಹಿತಿ ನೀಡಿದ್ದಾರೆ. 

ಇದೇ ಸಂಬಂಧ ಅಕ್ಕಿ ಹಾಗೂ ಅಗತ್ಯ ವಸ್ತುಗಳ ಪೂರೈಕೆ ಪ್ರಕ್ರಿಯೆ ನಿರ್ವಹಣೆಗಾಗಿ ಉನ್ನತ ಸೇನಾಧಿಕಾರಿಯನ್ನು ರಾಜಪಕ್ಸ ಅವರು ನೇಮಕ ಮಾಡಿದ್ದಾರೆ.

ಶ್ರೀಲಂಕಾದಲ್ಲಿ ಅಕ್ಕಿ, ನೀರುಳ್ಳಿ, ಆಲೂಗಡ್ಡೆ ಸೇರಿದಂತೆ ಹಲವು ದಿನಸಿ ಸಾಮಗ್ರಿ ಬೆಲೆ ಗಗನಕ್ಕೇರುತ್ತಲೇ ಇದೆ. ಅಲ್ಲದೆ ಹಾಲಿನ ಪುಡಿ, ಸೀಮೆ ಎಣ್ಣೆ, ಅಡುಗೆ ಅನಿಲ ಖರೀದಿಗೆ ಗ್ರಾಹಕರು ಅಂಗಡಿ ಮುಂದೆ ಸರದಿ ನಿಲ್ಲುತ್ತಿದ್ದಾರೆ.

2020ರಲ್ಲಿ ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಕುಂಠಿತಗೊಂಡಿತ್ತು. ಅಲ್ಲದೆ ವಿದೇಶಿ ವಿನಿಮಯ ಉಳಿಸುವ ಉದ್ದೇಶದಿಂದ ಹಲವು ಅಗತ್ಯ ವಸ್ತುಗಳ ಆಮದಿನ ಮೇಲೆ ಸರ್ಕಾರ ನಿಷೇಧ ಹೇರಿತ್ತು. ಇವೆಲ್ಲದರಿಂದಾಗಿ ಆಹಾರ ಅಭದ್ರತೆ ತಲೆದೋರಿದೆ ಎಂದು ತಜ್ನರು ಅಭಿಪ್ರಾಯಪಟ್ಟಿದ್ದಾರೆ. 

ಇಂಧನ ಸಚಿವ ಉದಯ ಗಮನ್ ಪಿಲ ಅವರು ಇಂಧನವನ್ನು ಎಚ್ಚರಿಕೆಯಿಂದ ಬಳಸುವಂತೆ ನಾಗರಿಕರಿಗೆ ಮನವಿ ಮಾಡಿದ್ದರು ಎನ್ನುವುದು ಗಮನಾರ್ಹ. ಇಂಧನ ಬಳಕೆ ಕಡಿಮೆಯಾಗದಿದ್ದಲ್ಲಿ ಈ ವರ್ಷಾಂತ್ಯ ಶ್ರೀಲಂಕಾ ಸರ್ಕಾರ ಇಂಧನ ಖರಿದೀಗೆ ರೇಷನ್ ವ್ಯವಸ್ಥೆ ಜಾರಿಗೆ ತರಲಿದೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT