ಸಾಂದರ್ಭಿಕ ಚಿತ್ರ 
ವಿದೇಶ

ಪಾಕಿಸ್ತಾನ: ಮೃತ ಶ್ರೀಲಂಕಾ ಪ್ರಜೆಯ ಬಹುತೇಕ ಮೂಳೆಗಳು ಮುರಿತ: ಪ್ರಧಾನಿ ಇಮ್ರಾನ್ ಖಾನ್ ನ್ಯಾಯದ ಭರವಸೆ

ಕಟ್ಟರ್ ಇಸ್ಲಾಮಿಸ್ಟ್ ಪಕ್ಷ 'ತೆಹ್ರೀಕ್ ಇ ಲಬ್ಬೈಕ್- ಪಾಕಿಸ್ತಾನ್' ಕಾರ್ಯಕರ್ತರು ಲಾಹೋರ್ ನಲ್ಲಿನ ಗಾರ್ಮೆಂಟ್ ಕಾರ್ಖಾನೆ ಮೇಲೆ ದಾಳಿ ನಡೆಸಿ ಅದರ ಮ್ಯಾನೇಜರ್ ಶ್ರೀಲಂಕಾ ಪ್ರಜೆ ದಿಯವದನ ಎಂಬುವವರ ಮೇಲೆ ಹಲ್ಲೆ ನಡೆಸಿದ್ದರು.

ಕರಾಚಿ: ಕಟ್ಟರ್ ಇಸ್ಲಾಮಿಸ್ಟ್ ಪಕ್ಷ 'ತೆಹ್ರೀಕ್ ಇ ಲಬ್ಬೈಕ್- ಪಾಕಿಸ್ತಾನ್' ಕಾರ್ಯಕರ್ತರು ಲಾಹೋರ್ ನಲ್ಲಿನ ಗಾರ್ಮೆಂಟ್ಸ್ ಕಾರ್ಖಾನೆ ಮೇಲೆ ದಾಳಿ ನಡೆಸಿ ಅದರ ಮ್ಯಾನೇಜರ್ ಶ್ರೀಲಂಕಾ ಪ್ರಜೆ ದಿಯವದನ ಎಂಬುವವರ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆಯಿಂದಾಗಿ ಆತ ಮೃತಪಟ್ಟಿದ್ದರು.

ದೇಹದ ಎಲ್ಲಾ ಭಾಗಗಳ ಮೂಳೆಗಳು ಮುರಿದಿರುವ ಮಾಹಿತಿ ಮರಣೋತ್ತರ ವರದಿಯಿಂದ ಬಹಿರಂಗವಾಗಿದೆ. ತಲೆಬುರುಡೆ ಮತ್ತು ದವಡೆ ಮೂಳೆಗಳು ಮುರಿತಕ್ಕೊಳಗಾಗಿದ್ದೇ ಸಾವಿಗೆ ಕಾರಣ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. 

ಹಲ್ಲೆ ನಡೆಸಿದ ಬಳಿಕ ದುಷ್ಕರ್ಮಿಗಳು ಶ್ರೀಲಂಕಾ ಪ್ರಜೆ ಮೈಮೇಲೆ ಬೆಂಕಿ ಹಚ್ಚಿದ್ದರು. ಅದರ ಪರಿಣಾಮ ದೇಹದ ಶೇ.99 ಭಾಗ ಸುಟ್ಟು ಹೋಗಿತ್ತು. 

ಮೃತರ ಸಂಬಂಧಿಕರು ಹತ್ಯೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಜರುಗಿಸಬೇಕಾಗಿ ಆಗಹಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ನ್ಯಾಯ ದೊರಕಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT