ಸಾಂದರ್ಭಿಕ ಚಿತ್ರ 
ವಿದೇಶ

ಇಮ್ರಾನ್ ಖಾನ್ ಸರ್ಕಾರದೊಡನೆ ಕದನವಿರಾಮ ಅಂತ್ಯ: ಪಾಕ್ ತಾಲಿಬಾನ್ ಘಟಕ ತೆಹ್ರೀಕ್ ಇ ತಾಲಿಬಾನ್ ಘೋಷಣೆ

ಕದನವಿರಾಮ ಒಪ್ಪಂದ ಮುರಿದುಬೀಳಲು ಸಂಘಟನೆಯ ಬೇಡಿಕೆಗಳನ್ನು ಸರ್ಕಾರ ಈಡೇರಿಸದೇ ಇರುವುದೇ ಕಾರಣ ಎನ್ನಲಾಗಿದೆ. ಪಾಕ್ ನಲ್ಲಿ ವಿಧ್ವಂಸಕ ಕೃತ್ಯ ಮುಂದುವರಿಸಲು ಉಗ್ರನಾಯಕ ಕರೆ.

ಕರಾಚಿ: ತಾಲಿಬಾನ್ ಉಗ್ರಸಂಘಟನೆಯ ಪಾಕಿಸ್ತಾನ ಘಟಕ ತೆಹ್ರೀಕ್ ಇ ತಾಲಿಬಾನ್ ಪಾಕ್ ಸರ್ಕಾರದ ಜೊತೆ ಇದುವರೆಗೂ ಚಾಲ್ತಿಯಲ್ಲಿದ್ದ ಕದನವಿರಾಮಕ್ಕೆ ಅಂತ್ಯ ಹಾಡಲು ನಿರ್ಧರಿಸಿರುವುದಾಗಿ ಘೋಷಿಸಿದೆ. 

ದೇಶದಲ್ಲಿ ಶಾಂತಿ ಸ್ಥಾಪನೆ ಸಲುವಾಗಿ ಶ್ರಮಿಸುತ್ತಿರುವ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಇದರಿಂದ ಹಿನ್ನಡೆ ಉಂಟಾಗಿದೆ. ಕಳೆದ 14 ವರ್ಷಗಳಲ್ಲಿ ಪಾಕ್ ನಲ್ಲಿ ನಡೆದ  ಹಲವು ದಾಳಿ ಘಟನೆಗಳ ಹಿಂದೆ ತೆಹ್ರೀಕ್ ಇ ತಾಲಿಬಾನ್ ಕೈವಾಡ ಇರುವುದಾಗಿ ಆರೋಪ ಕೇಳಿಬಂದಿತ್ತು. 

ನವೆಂಬರ್ 1 ರಿಂದ ಪಾಕ್ ಸರ್ಕಾರ ಮತ್ತು ತೆಹ್ರೀಕ್ ಇ ತಾಲಿಬಾನ್ ನಡುವೆ ಕದನವಿರಾಮ ಏರ್ಪಟ್ಟಿತ್ತು. ಈ ಕದನವಿರಾಮ ಒಪ್ಪಂದ ಮುರಿದುಬೀಳಲು ಸಂಘಟನೆಯ ಬೇಡಿಕೆಗಳನ್ನು ಸರ್ಕಾರ ಈಡೇರಿಸದೇ ಇರುವುದೇ ಕಾರಣ ಎನ್ನಲಾಗಿದೆ. ಪಾಕ್ ನಲ್ಲಿ ವಿಧ್ವಂಸಕ ಕೃತ್ಯ ಮುಂದುವರಿಸಲು ಉಗ್ರನಾಯಕ ಕರೆ ನೀಡಿರುವ ಧ್ವನಿಸುರುಳಿ ವೈರಲ್ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT