ಸಂಗ್ರಹ ಚಿತ್ರ 
ವಿದೇಶ

ವರ್ಕ್ ಫ್ರಮ್ ಹೋಂ ಮಾಡುವಾಗ ಹಾಸಿಗೆಯಿಂದ ಬಿದ್ದ ವ್ಯಕ್ತಿ: ವಿಮಾ ಕಂಪನಿಗೆ ಕೋರ್ಟ್ ಹೇಳಿದ್ದೇನು?

ವರ್ಕ್ ಫ್ರಮ್ ಮಾಡುತ್ತಿದ್ದಾಗ ಅಚಾನಕ್ಕಾಗಿ ಕೆಳಗೆ ಬಿದ್ದು ಬೆನ್ನು ಮೂಳೆ ಮುರಿದಕೊಂಡ ಉದ್ಯೋಗಿಯ ಬೆನ್ನಿಗೆ ಜರ್ಮನಿ ಕೋರ್ಟ್ ನಿಂತಿದೆ. ಅಲ್ಲದೆ ವಿಮಾ ಕಂಪನಿಗೆ ಪರಿಹಾರ ನೀಡುವಂತೆ ಆದೇಶಿಸಿದೆ.

ಜರ್ಮನಿ: ವರ್ಕ್ ಫ್ರಮ್ ಮಾಡುತ್ತಿದ್ದಾಗ ಅಚಾನಕ್ಕಾಗಿ ಕೆಳಗೆ ಬಿದ್ದು ಬೆನ್ನು ಮೂಳೆ ಮುರಿದಕೊಂಡ ಉದ್ಯೋಗಿಯ ಬೆನ್ನಿಗೆ ಜರ್ಮನಿ ಕೋರ್ಟ್ ನಿಂತಿದೆ. ಅಲ್ಲದೆ ವಿಮಾ ಕಂಪನಿಗೆ ಪರಿಹಾರ ನೀಡುವಂತೆ ಆದೇಶಿಸಿದೆ.

ಕೋರ್ಟ್ ಮಧ್ಯಪ್ರವೇಶಿಸಲು ಕಾರಣವೇನು?
ಜರ್ಮನಿಯಲ್ಲಿ ವರ್ಕ್ ಫ್ರಾಮ್ ಹೋಮ್ ಉದ್ಯೋಗಿಯೊಬ್ಬರು ಹಾಸಿಗೆಯಿಂದ ಎದ್ದು ಕಂಪ್ಯೂಟರ್ ಮೇಜಿನ ಬಳಿಗೆ ಹೋಗುವಾಗ ಜಾರಿ ಬಿದ್ದಿದ್ದರು. ಇದರಿಂದ ಉದ್ಯೋಗಿಯ ಬೆನ್ನುಹುರಿ ಮುರಿದಿತ್ತು. ಆದರೆ, ವಿಮಾ ಕಂಪನಿ ಪರಿಹಾರ ನೀಡಲು ನಿರಾಕರಿಸಿತ್ತು. ಉದ್ಯೋಗಿ ಕೆಲಸಕ್ಕೆ ಹೋಗುವಾಗ ಅಪಘಾತ ನಡೆದಿಲ್ಲ ಎಂದು ವಾದಿಸಿತ್ತು.

ವಿಮಾ ಕಂಪನಿಯ ನಿರ್ಧಾರದಿಂದ ಬೇಸತ್ತಿದ್ದ ಉದ್ಯೋಗಿ ಕೋರ್ಟ್ ನಲ್ಲಿ ಪ್ರಶ್ನೆ ಮಾಡಿದ್ದರು. ಆದರೆ ಜರ್ಮನಿಯ ಎರಡು ಕೆಳಹಂತದ ನ್ಯಾಯಾಲಯಗಳು ಉದ್ಯೋಗಿಯ ಹಕ್ಕನ್ನು ತಿರಸ್ಕರಿಸಿದ್ದವು. ಆದರೆ ಸಾಮಾಜಿಕ ಭದ್ರತಾ ವ್ಯವಹಾರಗಳ ಫೆಡರಲ್ ನ್ಯಾಯಾಲಯವು ಉದ್ಯೋಗಿಯ ಪರವಾಗಿ ತೀರ್ಪು ನೀಡಿದೆ.

ವರ್ಕ್ ಫ್ರಾಮ್ ವೇಳೆ ಹಾಸಿಗೆಯಿಂದ ಕೆಲಸಕ್ಕೆ ಹೋಗುವುದನ್ನು ವಿಮೆಯ ವ್ಯಾಪ್ತಿಯೊಳಗೆ ಬರಲಿದೆ ಅಂತಾ ಫೆಡರಲ್ ನ್ಯಾಯಾಲಯವು ಅಭಿಪ್ರಾಯಪಟ್ಟಿತು. ಕೆಲಸದ ವೇಳೆ ನೌಕರ,  ಹಾಸಿಗೆಯಿಂದ ಉಪಾಹಾರ ಸೇವಿಸದೆ ಟೇಬಲ್ ಮೇಲಿದ್ದ ದ ಕಂಪ್ಯೂಟರ್ ಕಡೆಗೆ ಹೋಗುತ್ತಿದ್ದನು ಎಂದು ಹೇಳಿದ ನ್ಯಾಯಾಲಯ, ಈ ವೇಳೆ ಉದ್ಯೋಗಿ ಗಾಯಗೊಂಡಿದ್ದಾರೆ. ಆದ್ದರಿಂದ ವಿಮಾನ ಕಂಪನಿ ನೌಕನಿಗೆ ಪರಿಹಾರ ಪಾವತಿಸಬೇಕೆಂದು ತೀರ್ಪು ನೀಡಿತು.

ಜರ್ಮನ್ ಫೆಡರಲ್ ಕೋರ್ಟ್ ಉದ್ಯೋಗಿಯ ಪರವಾಗಿ ತೀರ್ಪು ನೀಡುವಾಗ, ಉದ್ಯೋಗಿ ಕೆಲಸ ಮಾಡುವ ಸ್ಥಳದಲ್ಲಿ ಟೆಲಿವರ್ಕಿಂಗ್ ಅನ್ನು ಸಹ ಕಚೇರಿಯ ಎಂದು ಪರಿಗಣಿಸಲಾಗುತ್ತದೆ. ಟೆಲಿವರ್ಕಿಂಗ್ ಅಂದರೆ ಮನೆಯಿಂದ ಕೆಲಸ ಮಾಡುವುದು ಕಂಪನಿಯಿಂದ ಪಡೆದ ಒಪ್ಪಿಗೆಯಾಗಿರುತ್ತದೆ. ಇಂತಹ ಅಪಘಾತದ ಸಂದರ್ಭದಲ್ಲಿ, ಉದ್ಯೋಗಿ ವಿಮಾ ಪ್ರಯೋಜನವನ್ನು ಪಡೆಯಬೇಕು ಎಂದು ಕೋರ್ಟ್ ತೀರ್ಪು ನೀಡಿ, ವಿಮಾ ಕಂಪನಿಯ ವಾದವನ್ನು ತಿರಸ್ಕರಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT