ಸಾಂದರ್ಭಿಕ ಚಿತ್ರ 
ವಿದೇಶ

ಸೌದಿ ಸರ್ಕಾರದಿಂದ ತಬ್ಲಿಘಿ ಜಮಾತ್ ನಿಷೇಧ: ನಮಾಜ್ ವೇಳೆ ತಬ್ಲಿಘಿಯ ದುಷ್ಪರಿಣಾಮ ಕುರಿತು ತಿಳಿ ಹೇಳುವಂತೆ ಮಸೀದಿಗಳಿಗೆ ಸೂಚನೆ 

ತಬ್ಲಿಘಿ ಜಮಾತ್ ಸಂಘಟನೆ ಭಯೋತ್ಪಾದನೆಯ ಪ್ರವೇಶದ್ವಾರವಾಗುವ ಸಾಧ್ಯತೆ ಇದೆಯೆಂದು ಸೌದಿ ಅರೇಬಿಯಾ ಸರ್ಕಾರ ಅಭಿಪ್ರಾಯಪಟ್ಟಿದೆ.

ರಿಯಾದ್: ಪ್ರಮುಖ ಇಸ್ಲಾಂ ರಾಷ್ಟ್ರವಾಗಿರುವ ಸೌದಿ ಅರೇಬಿಯಾ ತಬ್ಲಿಘಿ ಜಮಾತ್ ಸಂಘಟನೆಗೆ ನಿಷೇಧ ಹೇರಿದೆ. ತಬ್ಲಿಘಿ ಜಮಾತ್ ಸಂಘಟನೆ ಭಯೋತ್ಪಾದನೆಯ ಪ್ರವೇಶದ್ವಾರವಾಗುವ ಸಾಧ್ಯತೆ ಇದೆಯೆಂದು ಸೌದಿ ಅರೇಬಿಯಾ ಸರ್ಕಾರ ಅಭಿಪ್ರಾಯಪಟ್ಟಿದೆ. ಆ ಕಾರಣಕ್ಕೆ ತಾನು ಸಂಘಟನೆಯನ್ನು ಬ್ಯಾನ್ ಮಾಡಿರುವುದಾಗಿ ತಿಳಿಸಿದೆ. ಮುಂದಿನ ಶುಕ್ರವಾರ ನಮಾಜ್ ವೇಳೆ ತಬ್ಲಿಘಿ ಜಮಾತ್ ನಿಂದ ದೇಶಕ್ಕಾಗುವ ಹಾನಿಯ ಬಗ್ಗೆ ಜನರಿಗೆ ತಿಳಿಹೇಳಬೇಕು ಎಂದು ಮಸೀದಿಗಳಿಗೆ ಸರ್ಕಾರ ಸೂಚನೆ ನೀಡಿದೆ. 

ಸಚಿವ ಅಬ್ದುಲ್ ಅತಿಫ್ ಅಲ್ ಶೇಖ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, “ತಬ್ಲಿಘಿ ಮತ್ತು ದಾವಾ ಸಂಘಟನೆಯಿಂದ ದಾರಿತಪ್ಪಿಸುವ ಕೆಲಸ ಆಗುತ್ತಿದೆ. ಅದರಿಂಡ ಸಮಾಜಕ್ಕೆ ಅಪಾಯವಿದೆ. ಈ ಗುಂಪುಗಳೊಂದಿಗೆ ಸಂಬಂಧ ಇರಿಸಿಕೊಳ್ಳುವುದನ್ನು ಸೌದಿ ಸರ್ಕಾರ ನಿರ್ಬಂಧಿಸುತ್ತದೆ ಎಂದು ಅವರು ಹೇಳಿದ್ದಾರೆ. 

ಸೌದಿ ಸರ್ಕಾರದ ಪ್ರಕಾರ, ತಬ್ಲಿಘಿ ಜಮಾತ್ ಜನರಲ್ಲಿ ತಪ್ಪು ಸಂದೇಶಗಳನ್ನು ನೀಡುತ್ತಾ ಹೋದಂತೆ ಅದರ ಮೌಲ್ಯ ಕಡಿಮೆಯಾಗುತ್ತಲೇ ಹೋಗುತ್ತದೆ. ಅಲ್ಲದೆ, ಸೌದಿ ಅರೇಬಿಯಾ ಸರ್ಕಾರ ಕೈಗೊಂಡಿರುವ ಈ ಕಠಿಣ ನಿರ್ಧಾರದಿಂದಾಗಿ ತಬ್ಲಿಘಿ ಜಮಾತ್ ಗೆ ಭಾರೀ ಹಿನ್ನೆಡೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT