ಸ್ಫೋಟ ದೃಶ್ಯ 
ವಿದೇಶ

ಪಾಕಿಸ್ತಾನ: ಕರಾಚಿಯಲ್ಲಿ ಅವಳಿ ಬಾಂಬ್ ಸ್ಫೋಟ; 12 ಮಂದಿ ಸಾವು

ಪಾಕಿಸ್ತಾನದಲ್ಲಿ ಸಂಭವಿಸಿದ ಸ್ಫೋಟದಲ್ಲಿ ರಕ್ತದೋಕುಳಿಯೇ ಹರಿದಿದೆ. ಪಾಕ್ ನ ಆರ್ಥಿಕ ಬೆನ್ನೆಲಬಾದ ಕರಾಚಿಯಲ್ಲಿ ಎರಡು ಸ್ಫೋಟಗಳು ಸಂಭವಿಸಿವೆ. ಇದುವರೆಗೆ 12 ಮಂದಿ ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ.

ಕರಾಚಿ: ಪಾಕಿಸ್ತಾನದಲ್ಲಿ ಸಂಭವಿಸಿದ ಸ್ಫೋಟದಲ್ಲಿ ರಕ್ತದೋಕುಳಿಯೇ ಹರಿದಿದೆ. ಪಾಕ್ ನ ಆರ್ಥಿಕ ಬೆನ್ನೆಲಬಾದ ಕರಾಚಿಯಲ್ಲಿ ಎರಡು ಸ್ಫೋಟಗಳು ಸಂಭವಿಸಿವೆ. ಇದುವರೆಗೆ 12 ಮಂದಿ ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ.

ಆರ್ಥಿಕ ರಾಜಧಾನಿಯಾಗಿರುವ ಕರಾಚಿಯಲ್ಲಿ ಸ್ಫೋಟದ ಹೊಡೆತಕ್ಕೆ ಹಲವು ಮಂದಿ ಗಾಯಗೊಂಡಿದ್ದು, ಅವಶೇಷಗಳಡಿ ಸಿಲುಕಿರುವ ಜನರನ್ನು ರಕ್ಷಣೆ ಮಾಡಲಾಗುತ್ತಿದೆ. ಪೊಲೀಸರೊಂದಿಗೆ ಇದಿ ಫೌಂಡೇಷನ್ ಸದಸ್ಯರು ಗಾಯಾಳುಗಳನ್ನು ರಕ್ಷಣೆ ಮಾಡುವ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಪಾಕಿಸ್ತಾನದ ರೇಂಜರ್ ಗಳು ಮತ್ತು ಪೊಲೀಸರು ಕೂಡ ಸ್ಥಳದಲ್ಲಿ ಬೀಡುಬಿಟ್ಟಿದ್ದು, ಗಾಯಾಳುಗಳನ್ನು ಜಿನ್ನಾ ಸ್ನಾತಕೋತ್ತರ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಪಾಕಿಸ್ತಾನದ ಮಾಧ್ಯಮ ವರದಿಗಳ ಪ್ರಕಾರ, ಕರಾಚಿಯ ಶೇರ್ಷಾ ಪ್ರದೇಶದ ಪರಚಾ ಚೌಕ್ ಬಳಿ ಮಧ್ಯಾಹ್ನ 1:30ಕ್ಕೆ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಖಾಸಗಿ ಬ್ಯಾಂಕ್‌ನ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಹೆಚ್ಚಿನ ಭಾಗ ಚರಂಡಿಯಲ್ಲಿ ಹೂತು ಹೋಗಿದೆ. ರಕ್ಷಣಾ ಕಾರ್ಯಾಚರಣೆ ವೇಳೆ ಎರಡನೇ ಸ್ಫೋಟ ಸಂಭವಿಸಿದೆ. ಆದಾಗ್ಯೂ, ಅದರ ಸಾಮರ್ಥ್ಯ ಮೊದಲನೆಯ ಸ್ಫೋಟದಷ್ಟು ಇರಲಿಲ್ಲ. ಬ್ಲಾಸ್ಟ್ ಗೆ ಕಟ್ಟಡದ ಬಳಿ ನಿಲ್ಲಿಸಿದ್ದ ವಾಹನಗಳು ತೀವ್ರವಾಗಿ ಹಾನಿಗೀಡಾಗಿವೆ. ಜೆಸಿಬಿ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಅಕ್ರಮವಾಗಿ ಚರಂಡಿ ಮೇಲೆ ನಿರ್ಮಿಸಲಾಗಿತ್ತು ಕಟ್ಟಡ!
ಕರಾಚಿ ದಕ್ಷಿಣ ವಲಯದ ಡಿಐಜಿ ಶಾರ್ಜೀಲ್ ಖರಾಲ್, ಕಾಲುವೆ ಮೇಲೆ ನಿರ್ಮಿಸಲಾದ ಬ್ಯಾಂಕ್ ಕಟ್ಟಡದಲ್ಲಿ ಸ್ಫೋಟ ಸಂಭವಿಸಿ, ಅನಿಲ ಸೋರಿಕೆಯಾಗಿರುವ ಸಾಧ್ಯತೆಯನ್ನು ವ್ಯಕ್ತಪಡಿಸಿದ್ದಾರೆ. ಸ್ಫೋಟದಲ್ಲಿ ಕುಸಿದು ಬಿದ್ದಿರುವ ಬ್ಯಾಂಕ್ ಕಟ್ಟಡವನ್ನು ಅಕ್ರಮವಾಗಿ ನಿರ್ಮಿಸಲಾಗಿತ್ತು ಎಂದು ಹೇಳಿದ್ದಾರೆ. ಚರಂಡಿ ಸ್ವಚ್ಛಗೊಳಿಸುವ ಸಂಬಂಧ ಬ್ಯಾಂಕ್‌ಗೆ ಕಟ್ಟಡ ತೆರವು ಮಾಡುವಂತೆ ಹಲವು ಬಾರಿ ನೋಟಿಸ್‌ ನೀಡಿದ್ದರೂ ಬ್ಯಾಂಕ್‌ ಸಿಬ್ಬಂದಿ ಕಟ್ಟಡ ತೆರವು ಮಾಡಿಲ್ಲ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT