ಸಾಂದರ್ಭಿಕ ಚಿತ್ರ 
ವಿದೇಶ

ಮೀನುಗಾರಿಕೆ ಆರೋಪ: 43 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಪಡೆ

ಶ್ರೀಲಂಕಾಕ್ಕೆ ಸೇರಿದ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪದಲ್ಲಿ 43 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದ್ದು,  ಆರು ದೋಣಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಶ್ರೀಲಂಕಾ ನೌಕಪಡೆ ಭಾನುವಾರ ತಿಳಿಸಿದೆ.

ಕೊಲಂಬೊ: ಶ್ರೀಲಂಕಾಕ್ಕೆ ಸೇರಿದ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪದಲ್ಲಿ 43 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದ್ದು,  ಆರು ದೋಣಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಶ್ರೀಲಂಕಾ ನೌಕಪಡೆ ಭಾನುವಾರ ತಿಳಿಸಿದೆ. ಶನಿವಾರ ಜಾಫ್ನಾದಲ್ಲಿರುವ ಡೆಲ್ಫ್ಟ್ ದ್ವೀಪದ ಆಗ್ನೇಯ ಸಮುದ್ರದಲ್ಲಿ ನೌಕಾಪಡೆ ಮೀನುಗಾರರನ್ನು ಬಂಧಿಸಿದೆ.

ಶನಿವಾರ ರಾತ್ರಿ  ಜಾಫ್ನಾದಲ್ಲಿರುವ ಡೆಲ್ಫ್ಟ್ ದ್ವೀಪದ ಆಗ್ನೇಯ ಸಮುದ್ರದಲ್ಲಿ ವಿಶೇಷ ಕಾರ್ಯಾಚರಣೆಯೊಂದನ್ನು ನಡೆಸಿದ ನೌಕಪಡೆ, ಶ್ರೀಲಂಕಾ ಕಡಲಿನಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದ 43 ಭಾರತೀಯ ಮೀನುಗಾರರೊಂದಿಗೆ ಆರು ಭಾರತೀಯ ದೋಣಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಶ್ರೀಲಂಕಾ ನೌಕಪಡೆ ಹೇಳಿಕೆಯಲ್ಲಿ ತಿಳಿಸಿದೆ.

ಉತ್ತರ ನೌಕ ಕಮಾಂಡ್ ಗೆ ಹೊಂದಿಕೊಂಡ 4ಎಫ್ ಎ ಎಫ್ ನೌಕೆ ಮೂಲಕ ಕೋವಿಡ್ ಶಿಷ್ಠಾಚಾರ ಪಾಲನೆಯೊಂದಿಗೆ ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ. ಬಂಧಿತರಿಗೆ ರಾಪಿಡ್ ಆಂಟಿಜೆನ್ ಪರೀಕ್ಷೆ ನಂತರ ಕಾನೂನು ಕ್ರಮಕ್ಕಾಗಿ ಸಂಬಂಧಿತ ಅಧಿಕಾರಿಗಳ ವಶಕ್ಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT