ಡೊಮೆನಿಕಾ ಪ್ರಧಾನಿ 
ವಿದೇಶ

'ನಾನ್ಸೆನ್ಸ್': ಚೋಕ್ಸಿ ಅಪಹರಣ ಸಂಚಿನಲ್ಲಿ ಸರ್ಕಾರ ಭಾಗಿ; ಆರೋಪ ತಳ್ಳಿ ಹಾಕಿದ ಡೊಮಿನಿಕಾ ಪ್ರಧಾನಿ

ಭಾರತ ಮೂಲದ ಉಧ್ಯಮಿ ಮೆಹುಲ್ ಚೋಕ್ಸಿ ಅಪಹರಣದಲ್ಲಿ ಡೊಮಿನಿಕಾ ಸರ್ಕಾರದ ಕೈವಾಡವಿದೆ ಎಂಬ ಆರೋಪವನ್ನು ಡೊಮೆನಿಕಾ ಪ್ರಧಾನಿ ರೂಸ್‌ವೆಲ್ಟ್‌ ಸ್ಕೆರ‍್ರಿಟ್ ತೀವ್ರವಾಗಿ ಖಂಡಿಸಿದ್ದಾರೆ.

ನವದೆಹಲಿ: ಭಾರತ ಮೂಲದ ಉಧ್ಯಮಿ ಮೆಹುಲ್ ಚೋಕ್ಸಿ ಅಪಹರಣದಲ್ಲಿ ಡೊಮಿನಿಕಾ ಸರ್ಕಾರದ ಕೈವಾಡವಿದೆ ಎಂಬ ಆರೋಪವನ್ನು ಡೊಮೆನಿಕಾ ಪ್ರಧಾನಿ ರೂಸ್‌ವೆಲ್ಟ್‌ ಸ್ಕೆರ‍್ರಿಟ್ ತೀವ್ರವಾಗಿ ಖಂಡಿಸಿದ್ದಾರೆ.

ಪಿಎನ್ ಬಿ ಬಹುಕೋಟಿ ಹಗರಣದ ಆರೋಪಿ, ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಆಂಟಿಗುವಾದಿಂದ ಬಾರ್ಬುಡಾಗೆ ಅಪಹರಿಸುವಲ್ಲಿ ಡೊಮಿನಿಕಾ ಸರ್ಕಾರದ ಕೈವಾಡವಿದೆ ಎಂಬ ಆರೋಪವನ್ನು ಅಲ್ಲಗಳೆದಿರುವ ಡೊಮಿನಿಕಾ ಪ್ರಧಾನಿ‌, ‘ಇದೊಂದು ಅಸಂಬಂದ್ಧ’ ಆರೋಪ ಎಂದು ತಳ್ಳಿ ಹಾಕಿದ್ದಾರೆ.

ಈ ಕುರಿತಂತೆ ಡೊಮಿನಿಕಾ ನ್ಯೂಸ್ ಆನ್‌ಲೈನ್ ವರದಿ ಮಾಡಿದ್ದು, ಸುದ್ದಿಸಂಸ್ಥೆಗೆ ನೀಡಿರುವ ಪ್ರತಿಕ್ರಿಯೆಲ್ಲಿ, 'ಮೆಹುಲ್ ಚೋಕ್ಸಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ತನ್ನ ಕಾನೂನು ಪ್ರಕ್ರಿಯೆ ನಡೆಸಲು ನಮ್ಮ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈ ಸಂದರ್ಭದಲ್ಲಿ ಚೋಕ್ಸಿಯ ಹಕ್ಕುಗಳು  ಮತ್ತು ಆಕ್ಷೇಪಗಳನ್ನೂ ಗೌರವಿಸಲಾಗುವುದು ಎಂದು ಹೇಳಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. 

ಆಂಟಿಗುವಾದಿಂದ ಬಾರ್ಬುಡಾಕ್ಕೆ ಚೋಕ್ಸಿಯನ್ನು ಅಪಹರಿಸಲು ಭಾರತ ಮತ್ತು ಡೊಮಿನಿಕಾ ಸರ್ಕಾರಗಳು ಸಂಚು ರೂಪಿಸಿದ್ದವು ಎಂಬ ಆರೋಪಗಳನ್ನು ಸಹ ಅವರು ಅಲ್ಲಗಳೆದಿದ್ದಾರೆ. 'ಡೊಮಿನಿಕಾ ಸರ್ಕಾರ ಮತ್ತು ಆಂಟಿಗುವಾ ಸರ್ಕಾರವು ಭಾರತದೊಂದಿಗೆ ಯಾವುದೇ ರೀತಿಯಲ್ಲಿ ತನಿಖೆಯಲ್ಲಿ ಒಗ್ಗೂಡಿಸಿ  ಕೊಂಡಿವೆ. ಇಂತಹ ಆರೋಪಗಳು ಸಂಪೂರ್ಣ ಅಸಂಬದ್ಧ. ನಾವು ಆ ರೀತಿಯ ಚಟುವಟಿಕೆಗಳಲ್ಲಿ, ಆ ಅಭ್ಯಾಸಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳುವುದಿಲ್ಲ. ನನ್ನ ಪ್ರಕಾರ ಅದು ಅಸಂಬದ್ಧ ಮತ್ತು ನಾವು ಅದನ್ನು ತಿರಸ್ಕರಿಸುತ್ತೇವೆ ಮತ್ತು ನ್ಯಾಯಾಲಯಗಳ ಮುಂದೆ ಇರುವ ಒಬ್ಬ ಸಂಭಾವಿತ ವ್ಯಕ್ತಿಯಿಂದ ಈ ರೀತಿ  ಆಧಾರರಹಿತ ಹಕ್ಕನ್ನು ಪ್ರಚಾರ ಮಾಡಲು ಯಾರಾದರೂ ಬಯಸುವುದು ದುರದೃಷ್ಟಕರ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT