ಆಫ್ಘಾನಿಸ್ತಾನ-ಪಾಕಿಸ್ತಾನ 
ವಿದೇಶ

ರಾಯಭಾರಿ ಮಗಳ ಅಪರಹಣ: ಜಾಗತಿಕ ಮಟ್ಟದಲ್ಲಿ ಪಾಕ್ ಗೆ ಮುಖಭಂಗ; ರಾಯಭಾರಿ, ಹಿರಿಯ ಅಧಿಕಾರಿಗಳ ವಾಪಸ್ ಕರೆಸಿಕೊಂಡ ಆಫ್ಘಾನ್ ಸರ್ಕಾರ

ಆಫ್ಘಾನಿಸ್ತಾನ ರಾಯಭಾರಿ ಮಗಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪಾಕಿಸ್ತಾನ ಸರ್ಕಾರ ಜಾಗತಿಕವಾಗಿ ತೀವ್ರ ಮುಖಭಂಗ ಅನುಭವಿಸುವಂತಾಗಿದ್ದು, ಆಫ್ಘಾನಿಸ್ತಾನ ಸರ್ಕಾರ ಪಾಕ್ ನಲ್ಲಿನ ತನ್ನ ರಾಯಭಾರಿ ಮತ್ತು ಹಿರಿಯ ಅಧಿಕಾರಿಗಳನ್ನು ವಾಪಸ್ ಕರೆಸಿಕೊಂಡಿದೆ.

ಇಸ್ಲಾಮಾಬಾದ್: ಆಫ್ಘಾನಿಸ್ತಾನ ರಾಯಭಾರಿ ಮಗಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪಾಕಿಸ್ತಾನ ಸರ್ಕಾರ ಜಾಗತಿಕವಾಗಿ ತೀವ್ರ ಮುಖಭಂಗ ಅನುಭವಿಸುವಂತಾಗಿದ್ದು, ಆಫ್ಘಾನಿಸ್ತಾನ ಸರ್ಕಾರ ಪಾಕ್ ನಲ್ಲಿನ ತನ್ನ ರಾಯಭಾರಿ ಮತ್ತು ಹಿರಿಯ ಅಧಿಕಾರಿಗಳನ್ನು ವಾಪಸ್ ಕರೆಸಿಕೊಂಡಿದೆ.

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಎದುರಾಗಿದ್ದು, ತನ್ನ ರಾಯಭಾರಿಯ ಮಗಳನ್ನು ಅಪಹರಿಸಿ ಹಿಂಸಿಸಿದ ನಂತರ ಇಸ್ಲಾಮಾಬಾದ್‌ನಿಂದ ರಾಯಭಾರಿ ಮತ್ತು ಇತರ ಹಿರಿಯ ಸಿಬ್ಬಂದಿಯನ್ನು ಹಿಂತೆಗೆದುಕೊಳ್ಳುವುದಾಗಿ ಆಫ್ಘಾನಿಸ್ತಾನ ಸರ್ಕಾರ ಘೋಷಿಸಿದೆ. 

'ಪಾಕಿಸ್ತಾನದಲ್ಲಿ ಅಫ್ಘಾನ್ ರಾಯಭಾರಿಯ ಮಗಳನ್ನು ಅಪಹರಿಸಿದ ನಂತರ, ಅಪಹರಣದ ದುಷ್ಕರ್ಮಿಗಳ ಬಂಧನ ಮತ್ತು ವಿಚಾರಣೆ ಸೇರಿದಂತೆ ಎಲ್ಲಾ ಭದ್ರತಾ ಬೆದರಿಕೆಗಳನ್ನು ಪರಿಹರಿಸುವವರೆಗೆ ಆಫ್ಘಾನಿಸ್ತಾನದ ರಾಯಭಾರಿ ಮತ್ತು ಪಾಕಿಸ್ತಾನದ ಹಿರಿಯ ರಾಜತಾಂತ್ರಿಕರನ್ನು ಆಫ್ಘನ್ ಸರ್ಕಾರ ವಾಪಸ್ ಕರೆಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅಫ್ಘಾನ್ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಅಂತೆಯೇ ಪಾಕಿಸ್ತಾನಕ್ಕೆ ಅಫ್ಘನ್ ನಿಯೋಗವು ಶೀಘ್ರದಲ್ಲೇ ಭೇಟಿ ನೀಡಲಿದ್ದು, ಈ ಪ್ರಕರಣ ಮತ್ತು ಎಲ್ಲಾ ಸಂಬಂಧಿತ ಸಮಸ್ಯೆಗಳನ್ನು' ನಿರ್ಣಯಿಸಲು ಮತ್ತು ಅನುಸರಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದೆ.

'ಇಸ್ಲಾಮಾಬಾದ್‌ನಲ್ಲಿ ಶುಕ್ರವಾರ ಅಂದರೆ ಜುಲೈ 16ರಂದು ಅಫ್ಘಾನಿಸ್ತಾನದ ರಾಯಭಾರಿಯ ಮಗಳಾದ ಸಿಲ್‌ಸಿಲಾ ಅಲಿಖಿಲ್ ಅವರನ್ನು ಅಪಹರಣ ಮಾಡಲಾಗಿದೆ. ಅವರು ಬಾಡಿಗೆ ವಾಹನದಲ್ಲಿ ತಮ್ಮ ಮನೆಗೆ ತೆರಳುತ್ತಿದ್ದ ಮಾರ್ಗಮಧ್ಯೆ ಅಪರಿಚಿತರಿಂದ ಕೆಲ ಗಂಟೆಗಳ ಕಾಲ ಅಪಹರಣಕ್ಕೊಳಗಾಗಿದ್ದಾರೆ. ನಂತರ ಸಿಲ್‌ಸಿಲಾ ಅವರಿಗೆ ತೀವ್ರತರನಾದ ಚಿತ್ರಹಿಂಸೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಆದರೆ, ಅಪಹರಣದ ವಿವರಗಳನ್ನು ಹಂಚಿಕೊಂಡಿಲ್ಲ. ಅಪಹರಣಕಾರರಿಂದ ಬಿಡುಗಡೆ ಹೊಂದಿದ ಬಳಿಕ ಸಿಲ್‌ಸಿಲಾ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT