ಜಪಾನ್ ನಲ್ಲಿ ಕೋವಿಡ್ ಸೋಂಕು 
ವಿದೇಶ

ಜಪಾನ್ ನಲ್ಲಿ ಕೋವಿಡ್ ಸೋಂಕು ಹೆಚ್ಚಳ; ರಾಜಧಾನಿ ಟೋಕಿಯೊ ಸೇರಿದಂತೆ ಹಲವೆಡೆ ತುರ್ತು ಪರಿಸ್ಥಿತಿ ಘೋಷಣೆ

ಜಪಾನ್ ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾದ ಹಿನ್ನಲೆಯಲ್ಲಿ ಜಪಾನ್ ಸರ್ಕಾರ ರಾಜಧಾನಿ ಟೋಕಿಯೋ ಸೇರಿದಂತೆ ಆರು ನಗರಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.

ಟೋಕಿಯೊ: ಜಪಾನ್ ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾದ ಹಿನ್ನಲೆಯಲ್ಲಿ ಜಪಾನ್ ಸರ್ಕಾರ ರಾಜಧಾನಿ ಟೋಕಿಯೋ ಸೇರಿದಂತೆ ಆರು ನಗರಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.

ಜಪಾನ್ ನ ಟೋಕಿಯೊ, ಸೈತಮಾ, ಚಿಬಾ, ಕನಗವಾ, ಒಸಾಕಾ ಮತ್ತು ಒಕಿನಾವಾ ಪ್ರಾಂತ್ಯಗಳಿಗೆ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದ್ದು, ನೆರೆಯ ಹೊಕ್ಕೈಡೊ, ಇಶಿಕಾವಾ, ಕ್ಯೋಟೋ, ಹ್ಯೋಗೊ ಮತ್ತು ಫುಕುವೊಕಾ ಪ್ರಾಂತ್ಯಗಳಿಗೆ ರೋಗ ಹರಡುವುದನ್ನು ತಡೆಯುವಂತೆ ಸ್ಥಳೀಯ ಆಡಳಿತಗಳಿಗೆ  ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.

ಈ ಕುರಿತು ಮಾತನಾಡಿರುವ ಜಪಾನ್ ಪ್ರಧಾನಿ ಯೋಶಿಹಿದೆ ಸುಗಾ ಅವರು, ಕೋವಿಡ್ ಸೋಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚಳವಾದ ಹಿನ್ನಲೆಯಲ್ಲಿ ಟೋಕಿಯೊ, ಸೈತಮಾ, ಚಿಬಾ, ಕನಗವಾ, ಒಸಾಕಾ ಮತ್ತು ಒಕಿನಾವಾ ಪ್ರಾಂತ್ಯಗಳಿಗೆ ತುರ್ತು ಪರಿಸ್ಥಿತಿ ಹೇರಲು ಮತ್ತು ಆದ್ಯತೆಯ ಕ್ರಮಗಳನ್ನು  ಅನ್ವಯಿಸಲು ನಾವು ನಿರ್ಧರಿಸಿದ್ದೇವೆ. ಹೊಕ್ಕೈಡೊ, ಇಶಿಕಾವಾ, ಕ್ಯೋಟೋ, ಹ್ಯೋಗೊ ಮತ್ತು ಫುಕುವೊಕಾ ಪ್ರಾಂತ್ಯಗಳಿಗೆ ರೋಗ ಹರಡುವುದನ್ನು ಕೂಡಲೇ ತಡೆಯಬೇಕಿದೆ ಎಂದು ಹೇಳಿದ್ದಾರೆ.

ಅಂತೆಯೇ ಜನರು ಅನಿವಾರ್ಯವಲ್ಲದ, ತುರ್ತು ಅಲ್ಲದ ಕಾರಣಗಳಿಗಾಗಿ ಹೊರಗೆ ಹೋಗುವುದನ್ನು ಅಥವಾ ಪ್ರಯಾಣಿಸುವುದನ್ನು ತಡೆಯಬೇಕು. ಇತರ ಪ್ರಯಾಣದ ಸಮಯದಲ್ಲಿ ತಮ್ಮ ಊರುಗಳಿಗೆ ಹಿಂದಿರುಗುವ ಬಗ್ಗೆ ಸಾಧ್ಯವಾದಷ್ಟು ಎಚ್ಚರಿಕೆಯಿಂದ ಮತ್ತು ಸಂಯಮದಿಂದ ಇರಬೇಕೆಂದು ವಿನಂತಿಸಿದ್ದಾರೆ.

ಅಲ್ಲದೆ ಇಂದಿನಿಂದ, ನಾವು ಯುವ ಪೀಳಿಗೆಯ ಜನರಿಗೆ ಅಂದರೆ ಯುವಕರಿಗೆ ಲಸಿಕೆಗಳನ್ನು ನೀಡುವುದರ ಮೇಲೆ ಗಮನ ಹರಿಸುತ್ತೇವೆ, ಆಗಸ್ಟ್ ಕೊನೆಯವಾರದ ವೇಳೆ ಶೇ.40 ಸಾರ್ವಜನಿಕರಿಗೆ ಎರಡನೇ ಡೋಸ್ ಲಸಿಕೆ ನೀಡುವ ಗುರಿ ಹೊಂದಿದ್ದೇವೆ ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT