ಜಪಾನ್ ನಲ್ಲಿ ಕೋವಿಡ್ ಸೋಂಕು 
ವಿದೇಶ

ಜಪಾನ್ ನಲ್ಲಿ ಕೋವಿಡ್ ಸೋಂಕು ಹೆಚ್ಚಳ; ರಾಜಧಾನಿ ಟೋಕಿಯೊ ಸೇರಿದಂತೆ ಹಲವೆಡೆ ತುರ್ತು ಪರಿಸ್ಥಿತಿ ಘೋಷಣೆ

ಜಪಾನ್ ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾದ ಹಿನ್ನಲೆಯಲ್ಲಿ ಜಪಾನ್ ಸರ್ಕಾರ ರಾಜಧಾನಿ ಟೋಕಿಯೋ ಸೇರಿದಂತೆ ಆರು ನಗರಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.

ಟೋಕಿಯೊ: ಜಪಾನ್ ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾದ ಹಿನ್ನಲೆಯಲ್ಲಿ ಜಪಾನ್ ಸರ್ಕಾರ ರಾಜಧಾನಿ ಟೋಕಿಯೋ ಸೇರಿದಂತೆ ಆರು ನಗರಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.

ಜಪಾನ್ ನ ಟೋಕಿಯೊ, ಸೈತಮಾ, ಚಿಬಾ, ಕನಗವಾ, ಒಸಾಕಾ ಮತ್ತು ಒಕಿನಾವಾ ಪ್ರಾಂತ್ಯಗಳಿಗೆ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದ್ದು, ನೆರೆಯ ಹೊಕ್ಕೈಡೊ, ಇಶಿಕಾವಾ, ಕ್ಯೋಟೋ, ಹ್ಯೋಗೊ ಮತ್ತು ಫುಕುವೊಕಾ ಪ್ರಾಂತ್ಯಗಳಿಗೆ ರೋಗ ಹರಡುವುದನ್ನು ತಡೆಯುವಂತೆ ಸ್ಥಳೀಯ ಆಡಳಿತಗಳಿಗೆ  ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.

ಈ ಕುರಿತು ಮಾತನಾಡಿರುವ ಜಪಾನ್ ಪ್ರಧಾನಿ ಯೋಶಿಹಿದೆ ಸುಗಾ ಅವರು, ಕೋವಿಡ್ ಸೋಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚಳವಾದ ಹಿನ್ನಲೆಯಲ್ಲಿ ಟೋಕಿಯೊ, ಸೈತಮಾ, ಚಿಬಾ, ಕನಗವಾ, ಒಸಾಕಾ ಮತ್ತು ಒಕಿನಾವಾ ಪ್ರಾಂತ್ಯಗಳಿಗೆ ತುರ್ತು ಪರಿಸ್ಥಿತಿ ಹೇರಲು ಮತ್ತು ಆದ್ಯತೆಯ ಕ್ರಮಗಳನ್ನು  ಅನ್ವಯಿಸಲು ನಾವು ನಿರ್ಧರಿಸಿದ್ದೇವೆ. ಹೊಕ್ಕೈಡೊ, ಇಶಿಕಾವಾ, ಕ್ಯೋಟೋ, ಹ್ಯೋಗೊ ಮತ್ತು ಫುಕುವೊಕಾ ಪ್ರಾಂತ್ಯಗಳಿಗೆ ರೋಗ ಹರಡುವುದನ್ನು ಕೂಡಲೇ ತಡೆಯಬೇಕಿದೆ ಎಂದು ಹೇಳಿದ್ದಾರೆ.

ಅಂತೆಯೇ ಜನರು ಅನಿವಾರ್ಯವಲ್ಲದ, ತುರ್ತು ಅಲ್ಲದ ಕಾರಣಗಳಿಗಾಗಿ ಹೊರಗೆ ಹೋಗುವುದನ್ನು ಅಥವಾ ಪ್ರಯಾಣಿಸುವುದನ್ನು ತಡೆಯಬೇಕು. ಇತರ ಪ್ರಯಾಣದ ಸಮಯದಲ್ಲಿ ತಮ್ಮ ಊರುಗಳಿಗೆ ಹಿಂದಿರುಗುವ ಬಗ್ಗೆ ಸಾಧ್ಯವಾದಷ್ಟು ಎಚ್ಚರಿಕೆಯಿಂದ ಮತ್ತು ಸಂಯಮದಿಂದ ಇರಬೇಕೆಂದು ವಿನಂತಿಸಿದ್ದಾರೆ.

ಅಲ್ಲದೆ ಇಂದಿನಿಂದ, ನಾವು ಯುವ ಪೀಳಿಗೆಯ ಜನರಿಗೆ ಅಂದರೆ ಯುವಕರಿಗೆ ಲಸಿಕೆಗಳನ್ನು ನೀಡುವುದರ ಮೇಲೆ ಗಮನ ಹರಿಸುತ್ತೇವೆ, ಆಗಸ್ಟ್ ಕೊನೆಯವಾರದ ವೇಳೆ ಶೇ.40 ಸಾರ್ವಜನಿಕರಿಗೆ ಎರಡನೇ ಡೋಸ್ ಲಸಿಕೆ ನೀಡುವ ಗುರಿ ಹೊಂದಿದ್ದೇವೆ ಎಂದು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT