ಕೋವಿಡ್-19 ಎಚ್ಚರಿಕೆ ಫಲಕದ ಮುಂದೆ ನಿಂತಿರುವ ಆಸ್ಟ್ರೇಲಿಯಾ ಮಹಿಳೆ 
ವಿದೇಶ

ಭಾರತದಿಂದ ಬರುವವರಿಗೆ ಆಸ್ಟ್ರೇಲಿಯಾದಲ್ಲಿ ತಾತ್ಕಾಲಿಕ ನಿಷೇಧ: ನಿಯಮ ಉಲ್ಲಂಘಿಸಿದವರಿಗೆ ದಂಡ, 5 ವರ್ಷ ಜೈಲು ಶಿಕ್ಷೆ 

ಭಾರತದಿಂದ ವಾಪಸ್ಸಾಗುವ ಆಸ್ಟ್ರೇಲಿಯಾ ನಾಗರಿಕರಿಗೆ ಆಸ್ಟ್ರೇಲಿಯಾ ಸರ್ಕಾರ ನಿರ್ಬಂಧ ವಿಧಿಸಿದ್ದು, ನಿಯಮ ಉಲ್ಲಂಘನೆ ಮಾಡಿದವರಿಗೆ ಜೈಲು ಶಿಕ್ಷೆ ಹಾಗೂ ದಂಡದ ಎಚ್ಚರಿಕೆಯನ್ನು ನೀಡಿದೆ. 

ಮೆಲ್ಬೋರ್ನ್: ಭಾರತದಿಂದ ವಾಪಸ್ಸಾಗುವ ಆಸ್ಟ್ರೇಲಿಯಾ ನಾಗರಿಕರಿಗೆ ಆಸ್ಟ್ರೇಲಿಯಾ ಸರ್ಕಾರ ನಿರ್ಬಂಧ ವಿಧಿಸಿದ್ದು, ನಿಯಮ ಉಲ್ಲಂಘನೆ ಮಾಡಿದವರಿಗೆ ಜೈಲು ಶಿಕ್ಷೆ ಹಾಗೂ ದಂಡದ ಎಚ್ಚರಿಕೆಯನ್ನು ನೀಡಿದೆ. ಭಾರತದಲ್ಲಿ ಕೋವಿಡ್-19 ಹೆಚ್ಚಳವಾಗುತ್ತಿರುವ ಕಾರಣದಿಂದ ಈ ಕ್ರಮ ಕೈಗೊಳ್ಳುತ್ತಿರುವುದಾಗಿ ಆಸ್ಟ್ರೇಲ್ಪಿಯಾ ಹೇಳಿದೆ. 

ನಿಯಮಗಳನ್ನು ಉಲ್ಲಂಘಿಸಿ ಆಸ್ಟ್ರೇಲಿಯಾ ಪ್ರವೇಶಿಸಿದರೆ ಅಂತಹವರಿಗೆ 66,000 ಆಸ್ಟ್ರೇಲಿಯನ್ ಡಾಲರ್ ಗಳ ದಂಡ ಹಾಗೂ 5 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ. 

ಸೋಮವಾರದಿಂದ ಈ ತಾತ್ಕಾಲಿಕವಾಗಿ ಜಾರಿಗೆ ಬರಲಿದ್ದು, ಭಾರತಕ್ಕೆ 14 ದಿನಗಳಲ್ಲಿ ಭೇಟಿ ನೀಡಿ, ಆಸ್ಟ್ರೇಲಿಯಾಗೆ ವಾಪಸ್ಸಾಗಬೇಕೆಂದುಕೊಂಡವರಿಗೂ ಈ ಆದೇಶ ಅನ್ವಯವಾಗಲಿದೆ. ಭಾರತದಲ್ಲಿ ಅಂದಾಜು 9,000 ಆಸ್ಟ್ರೇಲಿಯನ್ನರಿದ್ದು, ಈ ಪೈಕಿ 600 ಮಂದಿಯನ್ನು ಕೋವಿಡ್-19 ಸೋಂಕಿಗೆ ದುರ್ಬಲರು ಎಂದು ಗುರುತಿಸಲಾಗಿದೆ 

ಶುಕ್ರವಾರದಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಆರೋಗ್ಯ ಸಚಿವಾಲಯ ಈ ತಾತ್ಕಾಲಿಕ ನಿಷೇಧದ ನಿರ್ಧಾರವನ್ನು ಪ್ರಕಟಿಸಿದೆ. ಈ ಆದೇಶಕ್ಕೂ ತೀವ್ರ ಟೀಕೆಗಳು ಆಸ್ಟ್ರೇಲಿಯಾದಲ್ಲಿ ವ್ಯಕ್ತವಾಗತೊಡಗಿದ್ದು, ತನ್ನದೇ ನಾಗರಿಕರು ಸಂಕಷ್ಟಕ್ಕೆ ಸಿಲುಕಿದಾಗಲೂ ಆಸ್ಟ್ರೇಲಿಯಾ ಸರ್ಕಾರ ಈ ರೀತಿಯ ನಿರ್ಬಂಧ ವಿಧಿಸುವುದು ತಪ್ಪು ಹಾಗೂ ಸರ್ಕಾರಕ್ಕೆ ಕ್ವಾರಂಟೈನ್ ನಲ್ಲಿ ನಂಬಿಕೆ ಇಲ್ಲದಂತಾಗಿದೆ ಎಂಬ ಟೀಕೆ ವ್ಯಕ್ತವಾಗತೊಡಗಿದೆ. ಆದರೆ ಸರ್ಕಾರ ಮಾತ್ರ ಈ ಆದೇಶವನ್ನು ಮೇ.15 ರ ನಂತರವಷ್ಟೇ ಮರುಪರಿಶೀಲನೆ ಮಾಡಲಾಗುತ್ತದೆ ಎಂದು ಹೇಳಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT