ಡಾ. ವಿವೇಕ್ ಮೂರ್ತಿ 
ವಿದೇಶ

ಭಾರತದಲ್ಲಿ ಎರಡನೇ ಅಲೆ ಒಂದು ದುರಂತ: ಅಮೆರಿಕದ ಸರ್ಜನ್ ಜನರಲ್ ಡಾ. ವಿವೇಕ್ ಮೂರ್ತಿ

ಭಾರತದಲ್ಲಿನ ಕೋವಿಡ್-19 ಎರಡನೇ ಅಲೆ ಒಂದು ದುರಂತ ಎಂದು ಹೇಳಿರುವ ಅಮೆರಿಕದ ಸರ್ಜನ್ ಜನರಲ್ ಡಾ. ವಿವೇಕ್ ಮೂರ್ತಿ, ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶಗಳು ಪರಸ್ಪರ ಸಹಾಯ ಮಾಡುವ ಅವಶ್ಯಕತೆಯಿದೆ ಎಂದು ಒತ್ತಿ ಹೇಳಿದ್ದಾರೆ.

ವಾಷಿಂಗ್ಟನ್:  ಭಾರತದಲ್ಲಿನ ಕೋವಿಡ್-19 ಎರಡನೇ ಅಲೆ ಒಂದು ದುರಂತ ಎಂದು ಹೇಳಿರುವ ಅಮೆರಿಕದ ಸರ್ಜನ್
ಜನರಲ್ ಡಾ.ವಿವೇಕ್ ಮೂರ್ತಿ, ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶಗಳು ಪರಸ್ಪರ ಸಹಾಯ ಮಾಡುವ ಅವಶ್ಯಕತೆಯಿದೆ ಎಂದು
ಒತ್ತಿ ಹೇಳಿದ್ದಾರೆ.

ಕೋವಿಡ್ -19 ನಮಗೆ ಏನನ್ನಾದರೂ ಕಲಿಸಿದ್ದರೆ, ಅದು ಪರಸ್ಪರ ಸಹಕಾರದ ಅಗತ್ಯತೆಯಿಂದ ಸಾಂಕ್ರಾಮಿಕದಿಂದ 
ಹೊರಬರುವುದಾಗಿದೆ. ಒಂದು ವಿಶ್ವವಾಗಿ ನೋಡಿದಾಗ ರಾಷ್ಟ್ರಗಳು ಸೂಕ್ತ ಲಸಿಕೆ ಪೂರೈಕೆ ಮಾಡುವ ಮೂಲಕ ಜನರಿಗೆ
ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಬೇಕಾಗಿದೆ. ಪಿಪಿಇ ಪೂರೈಸಬೇಕಾಗಿದೆ. ಏಕೆಂದರೆ, ಕೋವಿಡ್ ವಿಶ್ವದ ಎಲ್ಲ ರಾಷ್ಟ್ರಗಳಿಗೂ
ಹೊಡೆತ ನೀಡಿದೆ ಎಂದು ನ್ಯೂಸ್ ಚಾನೆಲ್ ವೊಂದರ ಸಂದರ್ಶನದಲ್ಲಿ ಭಾರತೀಯ-ಅಮೆರಿಕನ್ ಪ್ರಜೆ ಡಾ. ವಿವೇಕ್ ಮೂರ್ತಿ
ಹೇಳಿದ್ದಾರೆ.

ಪ್ರಸ್ತುತ ಭಾರತ ಎದುರಿಸುತ್ತಿರುವ ಸಮಸ್ಯೆ ಅಮೆರಿಕಕ್ಕೂ ಎದುರಾಗಲಿದ್ದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಡಾ.ಮೂರ್ತಿ, ಅಂತಹ
ಸಮಸ್ಯೆ ಎಂದಿಗೂ ಎದುರಾಗದು,ಆದರೆ ಇದು ಯಾವಾಗಲೂ ಒಂದು ಸಾಧ್ಯತೆಯಾಗಿದೆ ಮತ್ತು ನಾವು ಎಚ್ಚರದಿಂದಿರಬೇಕು. 
ವಿಶೇಷವಾಗಿ ನಾವು ವ್ಯಾಕ್ಸಿನೇಷನ್ ಅಭಿಯಾನದಲ್ಲಿ  ನಮ್ಮ ಪ್ರಯತ್ನಗಳನ್ನು ಮುಂದುವರಿಸಿದರೆ,ಅಮೆರಿಕಾದಲ್ಲಿ ನಾವು ಉತ್ತಮ
ರೀತಿಯಲ್ಲಿ ಕಾರ್ಯನಿರ್ವಹಿಸುತ್ತೇವೆ ಎಂದರು.

ಭಾರತದಲ್ಲಿ ಉಂಟಾಗಿರುವುದು ಒಂದು ದುರಂತವಾಗಿದೆ. ಭಾರತ ಎರಡು ಸವಾಲುಗಳನ್ನು ಎದುರಿಸುತ್ತಿದೆ. ಆದರೆ,ಅಲ್ಲಿ ಕಾಣಿಸಿಕೊಂಡಿರುವ ಬಿ1117 ರೂಪಾಂತರಿಯನ್ನು ಕಳೆದ ವರ್ಷ ಅಮೆರಿಕದಲ್ಲಿ ಸರಿಯಾಗಿ ನಿರ್ವಹಿಸಲಾಗಿತ್ತು. 617 ರೂಪಾಂತರಿ ಮಾರಕ ವೈರಸ್ ಆಗಿದ್ದು,  ಇದು ಹೆಚ್ಚು ಹರಡುವ ಸಾಧ್ಯತೆಯಿದೆ. ಡಾಕ್ಟರ್ ಅದರ ಬಗ್ಗೆ ಇನ್ನೂ ಅಧ್ಯಯನ ನಡೆಸುತ್ತಿದ್ದಾರೆ ಎಂದು ಮಂಡ್ಯ ಮೂಲದ ಅಮೆರಿಕದ ಸರ್ಜನ್ ಜನರಲ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT