ಸನಾ ರಾಮಚಂದ್ 
ವಿದೇಶ

ಇದೇ ಮೊದಲು: ಪಾಕಿಸ್ತಾನದ ಪ್ರತಿಷ್ಠಿತ ಸಿಎಸ್ಎಸ್ ಪರೀಕ್ಷೆಯಲ್ಲಿ ಹಿಂದೂ ಮಹಿಳೆ ಪಾಸ್!

ಪಾಕಿಸ್ತಾನದಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಪ್ರತಿಷ್ಠಿತ ಕೇಂದ್ರಿಯ ಸುಪೀರಿಯರ್ ಸರ್ವೀಸಸ್ (ಸಿಎಸ್ಎಸ್) ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಆ ಮೂಲಕ ಪಾಕಿಸ್ತಾನ ಆಡಳಿತ ಸೇವೆಗೆ ( ಪಿಎಎಸ್) ಆಯ್ಕೆಯಾಗಿದ್ದಾರೆ.

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಪ್ರತಿಷ್ಠಿತ ಕೇಂದ್ರಿಯ ಸುಪೀರಿಯರ್ ಸರ್ವೀಸಸ್ (ಸಿಎಸ್ಎಸ್) ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಆ ಮೂಲಕ ಪಾಕಿಸ್ತಾನ ಆಡಳಿತ ಸೇವೆಗೆ (ಪಿಎಎಸ್) ಆಯ್ಕೆಯಾಗಿದ್ದಾರೆ.

ಎಂಬಿಬಿಎಸ್ ಡಾಕ್ಟರ್ ಸನಾ ರಾಮಚಂದ್ ಸಿಎಸ್ಎಸ್ ಪರೀಕ್ಷೆ ಪಾಸ್ ಮಾಡಿದ ಹಿಂದೂ ಮಹಿಳೆ. ಇವರು ಅತಿ ಹೆಚ್ಚು ಹಿಂದೂ ಜನಸಂಖ್ಯೆಯನ್ನು ಹೊಂದಿರುವ ಸಿಂಧ್ ಪ್ರಾಂತ್ಯದ ಶಿಕರ್ ಪುರ ಜಿಲ್ಲೆಯ ಗ್ರಾಮೀಣ ಪ್ರದೇಶದಿಂದ ಬಂದವರಾಗಿದ್ದಾರೆ.

ಲಿಖಿತ ಪರೀಕ್ಷೆಗೆ ಹಾಜರಾಗಿದ್ದ 18,553 ಅಭ್ಯರ್ಥಿಗಳ ಪೈಕಿ 221 ಮಂದಿ ಅಭ್ಯರ್ಥಿಗಳು ಸಿಎಸ್ಎಸ್ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ. ಅವರಲ್ಲಿ ಸನಾ ರಾಮಚಂದ್ ಕೂಡಾ ಒಬ್ಬರಾಗಿದ್ದಾರೆ. ವಿಸ್ತಾರವಾದ ವೈದ್ಯಕೀಯ , ಮಾನಸಿಕ ಮತ್ತು ಮೌಖಿಕ ಪರೀಕ್ಷೆ ನಂತರ ಅಂತಿಮ ಆಯ್ಕೆ ಮಾಡಲಾಗುತ್ತದೆ. 

ಫಲಿತಾಂಶದ ನಂತರ ಟ್ವೀಟ್ ಮಾಡಿರುವ ಸನಾ ರಾಮಚಂದ್, ವಹೇಗುರು ಜಿ ಕಾ ಖಲ್ಸಾ ವಹೇ ಗುರು ಜಿಕಿ ಫತೇಹ್, ಸರ್ವಶಕ್ತನಾದ ಅಲ್ಲಾಹನ ಕೃಪೆಯಿಂದ ನಾನು ಸಿಎಸ್ ಎಸ್ 2020ನ್ನು ಪೂರ್ಣಗೊಳಿಸಿದ್ದೇನೆ. ಪಿಎಸ್ ಎಸ್ ಹುದ್ದೆಗೆ ನೇಮಕವಾಗಿದ್ದೇನೆ ಎಂದು ಹೇಳಿಕೊಳ್ಳಲು ನನಗೆ ಸಂತೋಷವಾಗಿದೆ. ಇದರ ಎಲ್ಲಾ ಕ್ರೆಡಿಟ್ ನನ್ನ ಪೋಷಕರಿಗೆ ಹೋಗುತ್ತದೆ ಎಂದು ಬರೆದುಕೊಂಡಿದ್ದಾರೆ.

ಪಿಎಎಸ್ ಉನ್ನತ ಶ್ರೇಣಿಯಾಗಿದ್ದು, ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಸಹಾಯಕ ಆಯುಕ್ತರನ್ನಾಗಿ ನಿಯೋಜಿಸಲಾಗುತ್ತದೆ ನಂತರ ಜಿಲ್ಲಾಧಿಕಾರಿಯಾಗಿ ಬಡ್ತಿ ನೀಡಲಾಗುತ್ತದೆ. ಸನಾ ರಾಮಚಂದ್ ಪಿಎಎಸ್ ಹುದ್ದೆಗೇರಿದ ಪ್ರಥಮ ಹಿಂದೂ ಮಹಿಳೆಯಾಗಿದ್ದಾರೆ ಎಂದು ಬಿಬಿಸಿ ಉರ್ದು ವರದಿ ಮಾಡಿದೆ.

ಪಾಕಿಸ್ತಾನದಲ್ಲಿ ಹಿಂದೂ ಸಮುದಾಯಕ್ಕೆ ಸನಾ ರಾಮಚಂದ್ ಹೆಮ್ಮೆಯನ್ನುಂಟು ಮಾಡಿದ್ದಾರೆ ಎಂದು ಪಿಪಿಪಿ ಹಿರಿಯ ಮುಖಂಡ 
ಫರ್ಹತುಲ್ಲಾ ಬಾಬರ್ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT