ಹಸುವಿನ ಸಗಣಿ 
ವಿದೇಶ

ಯುಎಸ್ ಗೆ ಆಗಮಿಸಿದ ಭಾರತೀಯ ಪ್ರಯಾಣಿಕನ ಲಗೇಜ್ ನಲ್ಲಿ ಹಸುವಿನ ಸೆಗಣಿ ಪತ್ತೆ!

ಯುಸ್ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ ಏಜೆಂಟರು ವಾಷಿಂಗ್ಟನ್ ಡಿಸಿಯ ಉಪನಗರದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಭಾರತದ ಪ್ರಯಾಣಿಕರ ಲಗೇಜ್ ಬ್ಯಾಗ್ ನಲ್ಲಿ ಹಸುವಿನ ಸೆಗಣಿ ಪತ್ತೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾಷಿಂಗ್ಟನ್: ಯುಸ್ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ ಏಜೆಂಟರು ವಾಷಿಂಗ್ಟನ್ ಡಿಸಿಯ ಉಪನಗರದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಭಾರತದ ಪ್ರಯಾಣಿಕರ ಲಗೇಜ್ ಬ್ಯಾಗ್ ನಲ್ಲಿ ಹಸುವಿನ ಸೆಗಣಿ ಪತ್ತೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಸುವಿನ ಸಗಣಿಯನ್ನು ಯುಎಸ್ ನಲ್ಲಿ ನಿಷೇಧಿಸಲಾಗಿದೆ ಏಕೆಂದರೆ ಅವುಗಳು ಹೆಚ್ಚು ಸಾಂಕ್ರಾಮಿಕ ರೋಗ ಅಥವಾ ಕಾಲುಬಾಯಿರೋಗದ ಸಂಭಾವ್ಯ ವಾಹಕಗಳಾಗಿವೆ.

"ಇದು ಸುಳ್ಳು ಪ್ರಕಟಣೆಯಲ್ಲ. ಏರ್ ಇಂಡಿಯಾ ವಿಮಾನದ ಪ್ರಯಾಣಿಕ ಸಿಬಿಪಿಯ ತಪಾಸಣೆ ಕೇಂದ್ರಕ್ಕೆ ತಲುಪಿದ ನಂತರ ಸಿಬಿಪಿ ಕೃಷಿ ತಜ್ಞರು ಸೂಟ್ ಕೇಸ್ ನಲ್ಲಿ ಎರಡು ಹಸುವಿನ ಸಗಣಿ ಉಂಡೆಯನ್ನು ಕಂಡುಕೊಂಡಿದ್ದಾರೆ" ಎಂದು ಮಾಧ್ಯಮ ಪ್ರಕಟಣೆ ಸೋಮವಾರ ತಿಳಿಸಿದೆ.

"ಕಾಲುಬಾಯಿ ರೋಗವು ಜಾನುವಾರು ಮಾಲೀಕರು ಹೆಚ್ಚು ಭಯಪಡುವ, ಗಂಭೀರ ಕಾಯಿಲೆಗಳಲ್ಲಿ ಒಂದಾಗಿದೆ, ಮತ್ತು ಇದು ಕಸ್ಟಮ್ಸ್ ಮತ್ತು ಗಡಿ ಸಂರಕ್ಷಣೆಯ ಕೃಷಿ ಸಂರಕ್ಷಣಾ ಕಾರ್ಯಾಚರಣೆಯ ಮಹತ್ವದ ಕಾರ್ಯಾಚರಣೆಯಾಗಿದೆ" ಎಂದು ಬಾಲ್ಟಿಮೋರ್ ಫೀಲ್ಡ್ ಆಫೀಸ್ ಸಿಬಿಪಿಯ ಕ್ಷೇತ್ರ ಕಾರ್ಯಾಚರಣೆಗಳ ನಿರ್ದೇಶಕ ಕೀತ್ ಫ್ಲೆಮಿಂಗ್ ಹೇಳಿದರು.

ಹಸುವಿನ ಸಗಣಿ ವಿಶ್ವದ ಕೆಲವು ಭಾಗಗಳಲ್ಲಿ ಪ್ರಮುಖ ಶಕ್ತಿ ಮತ್ತು ಅಡುಗೆ ಮೂಲವಾಗಿದೆ ಎಂದು ತಿಳಿದಿದ್ದರೂ ಹಸುವಿನ ಚರ್ಮವನ್ನು ಡಿಟಾಕ್ಸಿಫೈಯರ್, ಆಂಟಿಮೈಕ್ರೊಬಿಯಲ್ ಮತ್ತು ರಸಗೊಬ್ಬರವಾಗಿ ಬಳಸಲಾಗುತ್ತದೆ ಎಂದು ವರದಿಯಾಗಿದೆ. ಈ ಪ್ರಯೋಜನಗಳ ಹೊರತಾಗಿಯೂ, ಕಾಲುಬಾಯಿ ರೋಗದ ಸಂಭಾವ್ಯ ಕಾರಣಗಳಿಂದಾಗಿ ಗೋವಿನ ಸಗಣಿ ನಿಷೇಧಿಸಲಾಗಿದೆ ಎಂದು ಸಿಬಿಪಿ ಹೇಳಿದೆ.

ಯು.ಎಸ್. ಕೃಷಿ ಇಲಾಖೆಯ ಪ್ರಕಾರ, ಕಾಲುಬಾಯಿ ರೋಗವು ವಿಶ್ವಾದ್ಯಂತದ ಜಾನುವಾರುಗಳಿಗೆ ತೊಂದರೆ ತರುವ ರೋಗವಾಗಿದ್ದು ಇದು ವ್ಯಾಪಕವಾಗಿ ಮತ್ತು ವೇಗವಾಗಿ ಹರಡಬಹುದು ಮತ್ತು ಜಾನುವಾರುಗಳ ಸಂಖ್ಯೆಗೆ ಗಮನಾರ್ಹ ನಷ್ಟವನ್ನು ತರಬಲ್ಲದು. 1929ರಿಂದ ಯುಎಸ್ ಕಾಲುಬಾಯಿ ರೋಗದಿಂದ ಮುಕ್ತವಾಗಿದೆ ಎಂದು ಹೇಳಿಕೆಯೊಂದರಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂದೇ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ: ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ

ಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದು BMTC ಕಂಡಕ್ಟರ್ ಅಟ್ಟಹಾಸ; Video ನೋಡಿ ನೆಟ್ಟಿಗರಿಂದ ತೀವ್ರ ಆಕ್ರೋಶ!

ಮಂಡ್ಯ: ಕಾರು ಅಪಘಾತದಲ್ಲಿ ಯುವತಿ ಅನುಮಾನಾಸ್ಪದ ಸಾವು; ಬರ್ತ್‌ಡೇ ಪಾರ್ಟಿಗೆ ಕರೆದು ರೇಪ್‌ಗೆ ಯತ್ನಿಸಿ, ಕೊಲೆ ಆರೋಪ!

ಸರ್ಕಾರಿ ಸ್ವಾಮ್ಯದ LIC ಸಂಸ್ಥೆಯಲ್ಲಿ ಶೇ.6.5 ರಷ್ಟು ಪಾಲು ಮಾರಾಟ; $3.3 ಬಿಲಿಯನ್ ಸಂಗ್ರಹ ಗುರಿ; ಪ್ರತಿ ಷೇರಿನ ಬೆಲೆ ಎಷ್ಟು ಗೊತ್ತೆ?

‘CM ಡಿಕೆ ಶಿವಕುಮಾರ್ ಸೂಚನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ, ಆದ್ರೂ...’: ರಾಜೀನಾಮೆ ಬಗ್ಗೆ ಹೊರಟ್ಟಿ ಹೇಳಿದ್ದೇನು?