ದಾಳಿಗೊಳಗಾದ ಸುರಂಗದ ದೃಶ್ಯ 
ವಿದೇಶ

ಪ್ರತಿಕಾರದ ದಾಳಿ: ಏರ್ ಸ್ಟ್ರೈಕ್ ಮೂಲಕ ಗಾಜಾದ ಸುರಂಗಗಳನ್ನು ಧ್ವಂಸ ಮಾಡಿದ ಇಸ್ರೇಲ್

ಗಾಜಾ ಪ್ರದೇಶದಲ್ಲಿ ಏರ್ ಸ್ಟ್ರೈಕ್ ನಡೆಸಿ 15 ಕಿಲೋಮೀಟರ್ (ಒಂಬತ್ತು ಮೈಲಿ) ಉದ್ದದ ಉಗ್ರ ಸುರಂಗಗಳು ಮತ್ತು ಒಂಬತ್ತು ಹಮಾಸ್ ಕಮಾಂಡರ್ಗಳ ಮನೆಗಳನ್ನು ಇಸ್ರೇಲ್ ಸೇನೆ ನಾಶಪಡಿಸಿದೆ. 

ಗಾಜಾ ಸಿಟಿ: ಗಾಜಾ ಪ್ರದೇಶದಲ್ಲಿ ಏರ್ ಸ್ಟ್ರೈಕ್ ನಡೆಸಿ 15 ಕಿಲೋಮೀಟರ್(ಒಂಬತ್ತು ಮೈಲಿ) ಉದ್ದದ ಉಗ್ರ ಸುರಂಗಗಳು ಮತ್ತು ಒಂಬತ್ತು ಹಮಾಸ್ ಕಮಾಂಡರ್ಗಳ ಮನೆಗಳನ್ನು ಇಸ್ರೇಲ್ ಸೇನೆ ನಾಶಪಡಿಸಿದೆ. 

ಇಸ್ರೇಲ್ ಮತ್ತು ಹಮಾಸ್ ಬಂಡುಕೋರರ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು ಇಸ್ರೇಲ್ ಸೇನೆ ಕಳೆದ ಒಂದು ವಾರದಿಂದ ಗಾಜಾ ಸಿಟಿ ಮೇಲೆ ನಿಂತರ ದಾಳಿ ನಡೆಸುತ್ತಿದೆ. ಇಸ್ರೇಲಿ ಮಿಲಿಟರಿ ಹಮಾಸ್‌ನ ಉಗ್ರಗಾಮಿಗಳ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ನೂರಾರು ವೈಮಾನಿಕ ದಾಳಿಗಳನ್ನು ನಡೆಸಿದೆ.

ಈ ಹಿಂದಿನ ದಾಳಿಯಲ್ಲಿ 42 ಮಂದಿ ಮೃತಪಟ್ಟಿದ್ದು ಮೂರು ಕಟ್ಟಡಗಳು ನೆಲಸಮಗೊಂಡಿವೆ. ಬೆಳಗ್ಗಿನ ಸ್ಟ್ರೈಕ್‌ ನಿಂದ ಮೃತಪಟ್ಟವರ ಬಗ್ಗೆ ತಕ್ಷಣದ ಮಾಹಿತಿ ಇಲ್ಲ. ಗಾಜಾ ನಗರದಲ್ಲಿ ಮೂರು ಅಂತಸ್ತಿನ ಕಟ್ಟಡವು ಹೆಚ್ಚು ಹಾನಿಗೊಳಗಾಗಿದೆ. ಏರ್ ಸ್ಟ್ರೈಕ್ ಗೂ ಮುನ್ನ 10 ನಿಮಿಷಗಳ ಮೊದಲು ಮಿಲಿಟರಿ ಎಚ್ಚರಿಕೆ ನೀಡಿತು. ಹೀಗಾಗಿ ಎಲ್ಲರೂ ಜಾಗ ಖಾಲಿ ಮಾಡಿದ್ದರು ಎಂದು ನಿವಾಸಿಗಳು ಹೇಳಿದ್ದಾರೆ. 

ಗಾಜಾ ಮೇಯರ್ ಯಾಹ್ಯಾ ಸರ್ರಾಜ್ ಅಲ್-ಜಜೀರಾ ಟಿವಿಗೆ ವೈಮಾನಿಕ ದಾಳಿಯು ರಸ್ತೆಗಳು ಮತ್ತು ಇತರ ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿಯನ್ನುಂಟು ಮಾಡಿದೆ ಎಂದು ಹೇಳಿದರು. "ಸಂಘರ್ಷ ಹೀಗೆ ಮುಂದುವರಿದರೆ ಪರಿಸ್ಥಿತಿಗಳು ಹದಗೆಡುತ್ತವೆ ಎಂದು ಅವರು ಹೇಳಿದರು.

ಗಾಜಾದ ಏಕೈಕ ವಿದ್ಯುತ್ ಕೇಂದ್ರವು ಇಂಧನದ ಕೊರತೆಯಿಂದಾಗಿ ಸ್ಥಬ್ಧಗೊಳ್ಳಲಿದೆ ಯು.ಎನ್. ಭೂಪ್ರದೇಶವು ಈಗಾಗಲೇ 8-12 ಗಂಟೆಗಳ ದೈನಂದಿನ ವಿದ್ಯುತ್ ಕಡಿತವನ್ನು ಅನುಭವಿಸುತ್ತದೆ. ಇನ್ನು ನೀರಿನ ಸರಬರಾಜು ಕಡಿಮೆಯಾಗಿದೆ ಎಂದರು.  

ಗಾಜಾದ ಪ್ಯಾಲೇಸ್ಟಿನಿಯನ್ ಉಗ್ರರು ಇಸ್ರೇಲ್‌ ಮೇಲೆ 3,100 ಕ್ಕೂ ಹೆಚ್ಚು ರಾಕೆಟ್‌ಗಳನ್ನು ಹಾರಿಸಿದ್ದಾರೆ. ಗಾಜಾದಲ್ಲಿ ನೂರಾರು ವೈಮಾನಿಕ ದಾಳಿಯಲ್ಲಿ ಕನಿಷ್ಠ 188 ಪ್ಯಾಲೆಸ್ಟೀನಿಯಾದ ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ 55 ಮಕ್ಕಳು ಮತ್ತು 33 ಮಹಿಳೆಯರು ಸೇರಿದ್ದಾರೆ, 1,230 ಜನರು ಗಾಯಗೊಂಡಿದ್ದಾರೆ. ಇತ್ತ ಇಸ್ರೇಲ್ ಕಡೆ 5 ವರ್ಷದ ಬಾಲಕ ಮತ್ತು ಯೋಧ ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT