ಮೆಹುಲ್ ಚೋಕ್ಸಿ 
ವಿದೇಶ

ಪಿಎನ್ ಬಿ ಪ್ರಕರಣ: ನಾಪತ್ತೆಯಾಗಿದ್ದ ಮೆಹುಲ್ ಚೋಕ್ಸಿ ಡೊಮಿನಿಕಾದಲ್ಲಿ ಬಂಧನ

ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ಸಾವಿರಾರು ಕೋಟಿ ರೂ ವಂಚಿಸಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ಸಾವಿರಾರು ಕೋಟಿ ರೂ ವಂಚಿಸಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಹಿಂದೆ ಆ್ಯಂಟಿಗುವಾ ಮತ್ತು ಬಾರ್ಬುಡಾದಿಂದಲೂ ಚೋಕ್ಸಿ ದಿಢೀರ್ ನಾಪತ್ತೆಯಾಗಿದ್ದ. ಚೋಕ್ಸಿ ವಿರುದ್ಧ ಇಂಟರ್‌ಪೋಲ್‌ ಯೆಲ್ಲೋ ನೋಟಿಸ್‌ ಜಾರಿಗೊಳಿಸಿತ್ತು. ಈತನ ಪತ್ತೆಗೆ ಪೊಲೀಸರು ಶೋಧ ಆರಂಭಿಸಿದ್ದರು. ಇದೀಗ ಮಂಗಳವಾರ ರಾತ್ರಿ ಚೋಕ್ಸಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಬೋಟ್  ನಲ್ಲಿ ಪರಾರಿಯಾಗುವ ವೇಳೆ ಪೊಲೀಸರು ಚೋಕ್ಸಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ. 

ಆಂಟಿಗುವಾ ಮತ್ತು ಬಾರ್ಬುಡಾದ ಪೌರತ್ವ ಪಡೆದಿರುವ ಚೋಕ್ಸಿ 2018 ರಿಂದ ಅಲ್ಲಿಯೇ ವಾಸ್ತವ್ಯ ಹೂಡಿದ್ದ. ದ್ವೀಪದ ದಕ್ಷಿಣ ಪ್ರದೇಶದಲ್ಲಿ ಭಾನುವಾರ ತನ್ನ ವಾಹನದಲ್ಲಿ ಕಾಣಿಸಿಕೊಂಡಿದ್ದ. ನಂತರ, ಆತನ ವಾಹನ ಮಾತ್ರ ಪತ್ತೆಯಾಗಿತ್ತು. ಭಾನುವಾರದಿಂದ ಚೋಕ್ಸಿ ಸುಳಿವು ಸಿಕ್ಕಿರಲಿಲ್ಲ ಎಂದು ಅವರ ವಕೀಲ  ವಿಜಯ್‌ ಅಗರ್ವಾಲ್‌ ದೃಢಪಡಿಸಿದ್ದರು.

ಇನ್ನು ಪಿಎನ್ ಬಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಚೋಕ್ಸಿಯನ್ನು ಭಾರತಕ್ಕೆ ಗಡಿಪಾರು ಮಾಡುವಂತೆ ಆ್ಯಂಟಿಗುವಾ ಸರ್ಕಾರವನ್ನು ಕೇಳಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಭಾನುವಾರ ಸಂಜೆ ಚೋಕ್ಸಿ ಕಾರಿನಲ್ಲಿ ತೆರಳಿ ನಿಗೂಢ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ. ಇದೀಗ  ಚೋಕ್ಸಿಯನ್ನು ಬಂಧಿಸಿರುವ ಸ್ಥಳೀಯ ಪೊಲೀಸರು ಆಂಟಿಗುವಾ ಮತ್ತು ಬಾರ್ಬುಡಾದ ರಾಯಲ್ ಪೊಲೀಸ್ ಪಡೆಗೆ ಚೋಕ್ಸಿಯನ್ನು ಹಸ್ತಾಂತರಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT