ಜೇಕ್ ಸುಲಿವನ್ - ಜೈಶಂಕರ್ 
ವಿದೇಶ

ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ - ಜೈಶಂಕರ್ ಭೇಟಿ: ಪರಸ್ಪರ ಸಹಕಾರ, ಹವಾಮಾನ ಬದಲಾವಣೆ ಕುರಿತು ಚರ್ಚೆ

ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಗುರುವಾರ ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲಿವನ್ ಅವರನ್ನು ಭೇಟಿ ಮಾಡಿದರು. 

ವಾಷಿಂಗ್ಟನ್: ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಗುರುವಾರ ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲಿವನ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಪರಸ್ಪರ ಸಹಕಾರ ಸೇರಿದಂತೆ ಹಲವು ವಿಷಗಳ ಕುರಿತು ಚರ್ಚೆ ನಡೆಸಿದರು. ಈ ಸಭೆ ಅಮೆರಿಕ-ಭಾರತ ನಡುವಿನ ಸಂಬಂಧ ವೃದ್ಧಿಗೆ ಅಡಿಪಾಯ ಎಂದು ಉಭಯ ನಾಯಕರು ಒಪ್ಪಿಕೊಂಡಿದ್ದಾರೆ.

ಸಾಂಕ್ರಾಮಿಕ ಅಂತ್ಯಕ್ಕೆ ಸಹಕಾರ, ಇಂಡೋ-ಪೆಸಿಫಿಕ್ ಅನ್ನು ಮುಕ್ತವಾಗಿ ಬೆಂಬಲಿಸುವುದು ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಜಾಗತಿಕ ನಾಯಕತ್ವವನ್ನು ಒದಗಿಸುವ ಕುರಿತು ಉಭಯ ನಾಯಕರು ಚರ್ಚಿಸಿದರು.

ಜೋ ಬಿಡನ್ ಅವರು ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಅಮೆರಿಕಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಸಚಿವ ಜೈಶಂಕರ್ ಅವರು ಗುರುವಾರ ಸುಲಿವನ್ ಅವರನ್ನು ಭೇಟಿಯಾದರು.

"ಜೇಕ್ ಸುಲಿವನ್ ಅವರನ್ನು ಭೇಟಿ ಮಾಡಿ ಸಂತೋಷವಾಯಿತು. ಇಂಡೋ-ಪೆಸಿಫಿಕ್ ಮತ್ತು ಅಫ್ಘಾನಿಸ್ತಾನ ಸೇರಿದಂತೆ ಹಲವು ವಿಷಗಳ ಬಗ್ಗೆ ಚರ್ಚಿಸಿದೆವು. ಕೋವಿಡ್ ಸವಾಲನ್ನು ಎದುರಿಸುವಲ್ಲಿ ಅಮೆರಿಕದ ಒಗ್ಗಟ್ಟಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ಜೈಶಂಕರ್ ಅವರು ಟ್ವೀಟ್ ಮಾಡಿದ್ದಾರೆ.

ಭಾರತ-ಅಮೆರಿಕ ಲಸಿಕೆ ಸಹಭಾಗಿತ್ವವು ನಿಜವಾದ ಬದಲಾವಣೆಯನ್ನು ತರಬಲ್ಲದು ಎಂದು ಜೈಶಂಕರ್ ಸಭೆಯ ನಂತರ ಮಾಡಿದ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

"ನಮ್ಮ ಜನರಿಂದ ಜನರ ಸಂಬಂಧಗಳು ಮತ್ತು ನಮ್ಮ ಮೌಲ್ಯಗಳು ಅಮೆರಿಕ-ಭಾರತ ಸಹಭಾಗಿತ್ವದ ಅಡಿಪಾಯವಾಗಿದ್ದು, ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸಲು, ಹವಾಮಾನ ಬದಲಾವಣೆ ಮುನ್ನಡೆಸಲು ಮತ್ತು ಮುಕ್ತವಾಗಿ ಇಂಡೋ-ಪೆಸಿಫಿಕ್ ಅನ್ನು ಬೆಂಬಲಿಸಲು ನಮಗೆ ಸಹಾಯ ಮಾಡುತ್ತದೆ" ಎಂದು ಸುಲಿವನ್ ಅವರು ಸಭೆಯ ನಂತರ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT