ಮಹಾತ್ಮಾ ಗಾಂಧಿ(ಸಂಗ್ರಹ ಚಿತ್ರ) 
ವಿದೇಶ

ಆಸ್ಟ್ರೇಲಿಯಾದಲ್ಲಿ ಅನಾವರಣಗೊಂಡ ಕೆಲವೇ ಗಂಟೆಗಳಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ: ಇದು 'ಅವಮಾನಕರ' ಎಂದ ಆಸೀಸ್ ಪ್ರಧಾನಿ

ಭಾರತ ಸರ್ಕಾರ ಉಡುಗೊರೆಯಾಗಿ ನೀಡಿದ್ದ ಮತ್ತು ಇತ್ತೀಚಿಗಷ್ಟೇ ಅನಾವರಣಗೊಂಡಿದ್ದ ಮಹಾತ್ಮ ಗಾಂಧಿಯವರ ಬೃಹತ್ ಕಂಚಿನ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದ್ದು, ಘಟನೆಯನ್ನು ಆಸೀಸ್ ಪ್ರಧಾನಿ ಸ್ಕಾಟ್ ಮಾರಿಸನ್ ಬಲವಾಗಿ ಖಂಡಿಸಿದ್ದಾರೆ.

ಮೆಲ್ಬೋರ್ನ್: ಭಾರತ ಸರ್ಕಾರ ಉಡುಗೊರೆಯಾಗಿ ನೀಡಿದ್ದ ಮತ್ತು ಇತ್ತೀಚಿಗಷ್ಟೇ ಅನಾವರಣಗೊಂಡಿದ್ದ ಮಹಾತ್ಮ ಗಾಂಧಿಯವರ ಬೃಹತ್ ಕಂಚಿನ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದ್ದು, ಘಟನೆಯನ್ನು ಬಲವಾಗಿ ಖಂಡಿಸಿದ ಆಸೀಸ್ ಪ್ರಧಾನಿ ಸ್ಕಾಟ್ ಮಾರಿಸನ್ ಅವರು ಇದು "ಅವಮಾನಕರ" ಎಂದಿದ್ದಾರೆ. ಅಲ್ಲದೆ ಈ ಘಟನೆಯಿಂದ ಭಾರತೀಯ-ಆಸ್ಟ್ರೇಲಿಯನ್ ಸಮುದಾಯದಲ್ಲಿ ಆಘಾತ ಮತ್ತು ನಿರಾಶೆಯನ್ನು ಉಂಟುಮಾಡಿದೆ ಎಂದು ಹೇಳಿದ್ದಾರೆ.

ಭಾರತದ 75ನೇ ವರ್ಷದ ಸ್ವಾತಂತ್ರ್ಯ ಆಚರಣೆಯ ಅಂಗವಾಗಿ ಆಸ್ಟ್ರೇಲಿಯಾ ಪ್ರಧಾನಿ ಮಾರಿಸನ್ ಅವರು ಭಾರತದ ರಾಯಭಾರಿ ರಾಜ್ ಕುಮಾರ್ ಮತ್ತು ಇತರ ಆಸ್ಟ್ರೇಲಿಯಾದ ನಾಯಕರೊಂದಿಗೆ ಕಳೆದ ಶುಕ್ರವಾರ ರೌವಿಲ್ಲೆಯಲ್ಲಿರುವ ಆಸ್ಟ್ರೇಲಿಯಾದ ಭಾರತೀಯ ಸಮುದಾಯ ಕೇಂದ್ರದಲ್ಲಿ ಪ್ರತಿಮೆಯನ್ನು ಅನಾವರಣಗೊಳಿಸಲಾಗಿತ್ತು. ಆದರೆ ಅನಾವರಣಗೊಂಡ ಕೆಲವೇ ಗಂಟೆಗಳಲ್ಲಿ ಈ ಘಟನೆ ನಡೆದಿದೆ ಎಂದು ದಿ ಏಜ್ ಪತ್ರಿಕೆ ವರದಿ ಮಾಡಿದೆ.

"ಈ ಮಟ್ಟದ ಅಗೌರವವನ್ನು ನೋಡುವುದು ಅವಮಾನಕರ ಮತ್ತು ಅತ್ಯಂತ ನಿರಾಶಾದಾಯಕವಾಗಿದೆ" ಎಂದು ಮಾರಿಸನ್ ಹೇಳಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ವಿಶ್ವದಲ್ಲೇ ಅತ್ಯಂತ ಯಶಸ್ವಿ ಬಹುಸಂಸ್ಕೃತಿ ಮತ್ತು ವಲಸೆ ರಾಷ್ಟ್ರವಾಗಿರುವ ದೇಶದಲ್ಲಿ ಸಾಂಸ್ಕೃತಿಕ ಸ್ಮಾರಕಗಳ ಮೇಲಿನ ದಾಳಿಯನ್ನು ಸಹಿಸಲಾಗುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

ಈ ಬೃಹತ್ ಪ್ರತಿಮೆಯನ್ನು ಭಾರತ ಸರ್ಕಾರ ಆಸ್ಟ್ರೇಲಿಯಾಗೆ ಉಡುಗೊರೆಯಾಗಿ ನೀಡಿದೆ.

ಎಬಿಸಿ ನ್ಯೂಸ್ ಪ್ರಕಾರ, ಶುಕ್ರವಾರ ಸಂಜೆ 5.30 ರಿಂದ ಶನಿವಾರ ಸಂಜೆ 5.30 ರ ನಡುವೆ ದುಷ್ಕರ್ಮಿಗಳು ಪ್ರತಿಮೆಯ ಶಿರಚ್ಛೇದ ಮಾಡಲು ವಿದ್ಯುತ್ ಉಪಕರಣವನ್ನು ಬಳಸಿದ್ದಾರೆ ಎಂದು ವಿಕ್ಟೋರಿಯಾ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ