ಎಸ್ 400 
ವಿದೇಶ

ಎಸ್400 ಒಪ್ಪಂದ: ಭಾರತಕ್ಕೆ ಕಾಟ್ಸಾದಿಂದ ವಿನಾಯಿತಿ ನೀಡುವ ಕುರಿತು ಇನ್ನೂ ನಿರ್ಧರಿಸಿಲ್ಲ; ಅಮೆರಿಕಾ

ಭಾರತವು ರಷ್ಯಾದಿಂದ S-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಅಮೆರಿಕ ವಿರೋಧಿ ನಡೆ ಅನುಸರಿಸುವ ರಾಷ್ಟ್ರಗಳ ಮೇಲೆ ವಿಧಿಸುವ CAATSA ಅಥವಾ ಕಾಟ್ಸಾ ಕಾಯ್ದೆಯನ್ನು ಭಾರತಕ್ಕೆ ವಿಧಿಸದಿರಲು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಅಮೆರಿಕ ಸ್ಪಷ್ಟನೆ ನೀಡಿದೆ.

ವಾಷಿಂಗ್ಟನ್: ಭಾರತವು ರಷ್ಯಾದಿಂದ S-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಅಮೆರಿಕ ವಿರೋಧಿ ನಡೆ ಅನುಸರಿಸುವ ರಾಷ್ಟ್ರಗಳ ಮೇಲೆ ವಿಧಿಸುವ CAATSA ಅಥವಾ ಕಾಟ್ಸಾ ಕಾಯ್ದೆಯನ್ನು ಭಾರತಕ್ಕೆ ವಿಧಿಸದಿರಲು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಅಮೆರಿಕ ಸ್ಪಷ್ಟನೆ ನೀಡಿದೆ.

ಭಾರತವು ರಷ್ಯಾದಿಂದ S-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಸ್ವೀಕರಿಸಲು ಪ್ರಾರಂಭಿಸಿದ ಒಂದು ವಾರದ ನಂತರ ಅಮೆರಿಕಾದಿಂದ ಈ ಹೇಳಿಕೆ ಬಂದಿದೆ.  ಭಾರತದ ಮೇಲೆ ಕಾಟ್ಸಾ ನಿರ್ಬಂಧಗಳನ್ನು ವಿಧಿಸದಂತೆ ಅಮೆರಿಕ ರಿಪಬ್ಲಿಕನ್ ಮತ್ತು ಡೆಮಾಕ್ರಟಿಕ್ ಸಂಸದರು ಬೈಡನ್ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ಈ ಬೆನ್ನಲ್ಲೇ ಅಮೆರಿಕದ ವಿದೇಶಾಂಗ ಇಲಾಖೆ ಈ ರೀತಿಯ ಹೇಳಿಕೆ ನೀಡಿದೆ.

ರಷ್ಯಾದೊಂದಿಗೆ ನಮ್ಮ ಪಾಲುದಾರ ದೇಶಗಳು ಯಾವುದೇ ವಹಿವಾಟು ನಡೆಸದಂತೆ ನಾವು ನಿರ್ಬಂಧ ಹೇರಿದ್ದೇವೆ. ಭಾರತದ ವಿಚಾರದಲ್ಲಿ ಎಸ್ ​- 400 ವಿಚಾರಕ್ಕೆ ಬರುವುದಾದರೆ ನಾವಿನ್ನೂ ಸ್ಪಷ್ಟವಾಗಿದ್ದೇವೆ. ಭಾರತದ ಮೇಲೆ ನಿರ್ಬಂಧ ವಿಧಿಸುವ CAATSA ಕಾಯ್ದೆಯನ್ನು ಭಾರತದ ವಿಚಾರದಲ್ಲಿ ಮನ್ನಾ ಮಾಡಲು ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ಹೇಳಿದ್ದಾರೆ.

ಯುಎಸ್ ನ ಸಂಸತ್​ನ ಹಲವು ಸದಸ್ಯರು ಈ ಬಗ್ಗೆ ಕಾಳಜಿ ವಹಿಸಿದ್ದಾರೆ. ನಾವು ಭಾರತದೊಂದಿಗಿನ ಪಾಲುದಾರಿಕೆಯನ್ನು ಖಂಡಿತವಾಗಿಯೂ ಗೌರವಿಸುತ್ತೇವೆ. ಆಗಸ್ಟ್‌ನಲ್ಲಿ ವಿದೇಶಾಂಗ ಮಂತ್ರಿ ಜೈಶಂಕರ್ ಅವರೊಂದಿಗೆ ಚರ್ಚೆ ನಡೆಸಿದ್ದೇವೆ. ಕೆಲವು ವಿಚಾರಗಳ ಬಗ್ಗೆ ನೇರವಾಗಿ ಚರ್ಚೆ ನಡೆಸಲಾಗಿದೆ ಎಂದು ನೆಡ್ ಪ್ರೈಸ್ ಸ್ಪಷ್ಟನೆ ನೀಡಿದ್ದಾರೆ.

ಭಾರತದೊಂದಿಗೆ ತನ್ನ 'ಕಾರ್ಯತಂತ್ರದ ಪಾಲುದಾರಿಕೆ'ಯನ್ನು ಅಮೆರಿಕಾ ಗೌರವಿಸುತ್ತದೆ ಎಂದು ವಿದೇಶಾಂಗ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆಫ್ರಿಕಾದಲ್ಲಿ ಮತ್ತೊಂದು ದಂಗೆ: ಬೆನಿನ್ ಅಧ್ಯಕ್ಷನ ಪದಚ್ಯುತಿ, ಆಡಳಿತ ಮಿಲಿಟರಿ ವಶಕ್ಕೆ, TV ಯಲ್ಲಿ ಕಾಣಿಸಿಕೊಂಡ ಸೈನಿಕರು ಮಾಡಿದ್ದೇನು?

Goa Nightclub Tragedy: ನೈಟ್‌ಕ್ಲಬ್‌ ಮ್ಯಾನೇಜರ್‌ ಬಂಧನ, ಮಾಲೀಕನ ವಿರುದ್ಧ ವಾರಂಟ್‌ ಜಾರಿ

ಕಲಬುರಗಿ: ಅನ್ನದಾತರ ಸಮಸ್ಯೆ ಮುಂದಿಟ್ಟು,'ಪ್ರಿಯಾಂಕ್ ಖರ್ಗೆ ತವರಿ'ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ರೈತರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ; ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಾಲ್‌ಗೆ ಹೆಚ್ಚಳ

RCB ಫ್ಯಾನ್ಸ್ ಗೆ ಗುಡ್ ನ್ಯೂಸ್: ಚಿನ್ನಸ್ವಾಮಿಯಿಂದ IPL ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ; ಡಿ.ಕೆ. ಶಿವಕುಮಾರ್

SCROLL FOR NEXT