ಸ್ಕಾಟ್ ಮೊರಿಸನ್ 
ವಿದೇಶ

ನುರಿತ ವಲಸಿಗರು, ವಿದೇಶಿ ವಿದ್ಯಾರ್ಥಿಗಳಿಗೆ ಆದ್ಯತೆ; 2022 ವರೆಗೆ ಪ್ರವಾಸಿಗರಿಗೆ ಇಲ್ಲ ಆಸ್ಟ್ರೇಲಿಯಾ ಪ್ರವಾಸ

ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲು ಯೋಜಿಸುತ್ತಿರುವ ಪ್ರವಾಸಿಗರಿಗೆ 2022 ವರೆಗೆ ಪ್ರವೇಶ ನೀಡಲಾಗುವುದಿಲ್ಲ ಎಂದು ಅಲ್ಲಿನ ಪ್ರಧಾನಿ ತಿಳಿಸಿದ್ದಾರೆ. 

ಕ್ಯಾನ್ಬೆರ್ರಾ: ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲು ಯೋಜಿಸುತ್ತಿರುವ ಪ್ರವಾಸಿಗರಿಗೆ 2022 ವರೆಗೆ ಪ್ರವೇಶ ನೀಡಲಾಗುವುದಿಲ್ಲ ಎಂದು ಅಲ್ಲಿನ ಪ್ರಧಾನಿ ತಿಳಿಸಿದ್ದಾರೆ. 

ಆದರೆ ಉದ್ಯೋಗಕ್ಕೆ ಸಂಬಂಧಿಸಿದಂತೆ ನುರಿತ ವಲಸಿಗರಿಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಸ್ಕಾಟ್ ಮೊರಿಸ್ಸನ್ ತಿಳಿಸಿದ್ದಾರೆ. 

16 ಹಾಗೂ ಮೇಲ್ಪಟ್ಟ ವಯಸ್ಸಿನ ಜನಸಂಖ್ಯೆಯ ಶೇ.80 ರಷ್ಟು ಮಂದಿಗೆ ಕೋವಿಡ್-19 ಲಸಿಕೆ ನೀಡಲಾಗಿದ್ದು, ಆಸ್ಟ್ರೇಲಿಯಾದಲ್ಲಿ ಕೋವಿಡ್-19 ನಿರ್ಬಂಧಗಳನ್ನು ಕ್ರಮೇಣ ಸಡಿಲಿಕೆ ಮಾಡಲಾಗುತ್ತಿದೆ.

ಲಸಿಕೆ ಪಡೆದ ಪ್ರಜೆಗಳು ಹಾಗೂ ಶಾಶ್ವತ ನಿವಾಸಿಗಳಿಗೆ ನವೆಂಬರ್ ನಿಂದ ವಿದೇಶಕ್ಕೆ ತೆರಳುವುದಕ್ಕೆ ಅನುವು ಮಾಡಿಕೊಡುವ ಯೋಜನೆಯನ್ನು ಆಸ್ಟ್ರೇಲಿಯಾ ಸರ್ಕಾರ ಕಳೆದ ವಾರ ಪ್ರಕಟಿಸಿತ್ತು.

ಆಸ್ಟ್ರೇಲಿಯನ್ನರ ನಂತರದ ಆದ್ಯತೆ ವಿದೇಶದಿಂದ ಆಸ್ಟ್ರೇಲಿಯಾಗೆ ಬರುವ ಉದ್ಯೋಗಗಳಲ್ಲಿ ನುರಿತ ವಲಸಿಗರು ಹಾಗೂ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಇರಲಿದೆ. 2022 ವರೆಗೆ ಪ್ರವಾಸಿಗರಿಗೆ ಆಸ್ಟ್ರೇಲಿಯಾಗೆ ಪ್ರವೇಶ ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ. 

ಕೋವಿಡ್-19 ಕಾರಣದಿಂದಾಗಿ ಆಸ್ಟ್ರೇಲಿಯಾಗೆ ವಲಸಿ ಬರುವವರ ಸಂಖ್ಯೆ 2ನೇ ವಿಶ್ವಯುದ್ಧದ ಬಳಿಕ ಇದೇ ಮೊದಲ ಬಾರಿಗೆ ಕುಸಿತ ಕಂಡಿತ್ತು. ಕೋವಿಡ್-19 ಸಾಂಕ್ರಾಮಿಕ ಆಸ್ಟ್ರೇಲಿಯಾ ವಿವಿಗಳ ಮೇಲೆಯೂ ತೀವ್ರವಾದ ಪರಿಣಾಮಗಳನ್ನು ಬೀರಿತ್ತು.

ಆಸ್ಟ್ರೇಲಿಯಾಗೆ ವಿದೇಶಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡದೇ ಇದ್ದಲ್ಲಿ ಬೇರೆ ದೇಶಗಳಲ್ಲಿ ಪ್ರವೇಶ ಪಡೆಯುವ ಸಾಧ್ಯತೆ ಇದೆ ಎಂದು ಅಲ್ಲಿನ ಶಿಕ್ಷಣ ಕ್ಷೇತ್ರ ಆತಂಕ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಉದ್ಯೋಗಿಗಳ ನಂತರದ ಆದ್ಯತೆಯನ್ನು ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT