ಕುಲಭೂಷಣ್ ಜಾದವ್ 
ವಿದೇಶ

ಕುಲಭೂಷಣ್ ಯಾದವ್ ಪ್ರಕರಣ: ವಕೀಲರನ್ನು ನೇಮಿಸಲು ಭಾರತಕ್ಕೆ ಪಾಕ್ ಉಚ್ಛ ನ್ಯಾಯಾಲಯ ಕಾಲಾವಕಾಶ

ಕುಲಭೂಷಣ್ ಜಾದವ್ ಅವರಿಗೆ ಯಾವುದೇ ಬಗೆಯ ರಾಜತಾಂತ್ರಿಕ ನೆರವನ್ನು ನೀಡಲು ಪಾಕ್ ಸಮ್ಮತಿ ಸೂಚಿಸಿಲ್ಲ ಹಾಗೂ ಮರಣದಂಡನೆ ತೀರ್ಪು ಪ್ರಶ್ನಾರ್ಹ ಎಂದು ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದಿಸಿತ್ತು.

ಇಸ್ಲಾಮಾಬಾದ್: ಭಾರತದ ಪರ ಗೂಢಚಾರ ನಡೆಸಿರುವ ಆರೋಪಕ್ಕೊಳಗಾಗಿ ಪಾಕಿಸ್ತಾನ ಜೈಲಿನಲ್ಲಿರುವ ಕುಲಭೂಷಣ್ ಜಾದವ್ ನ್ಯಾಯಾಲಯ ವಿಚಾರಣೆಗೆ ಸಂಬಂಧಿಸಿದಂತೆ ವಕೀಲರನ್ನು ನೇಮಿಸಲು ಭಾರತಕ್ಕೆ ಪಾಕ್ ಉಚ್ಛನ್ಯಾಯಾಲಯ ಕಾಲಾವಕಾಶ ನೀಡಿದೆ.

51 ವರ್ಷದ ನಿವೃತ್ತ ನೌಕಾದಳ ಅಧಿಕಾರಿಯಾಗಿರುವ ಕುಲಭೂಷಣ್ ಜಾದವ್ ಅವರಿಗೆ ಈ ಹಿಂದೆ ಪಾಕ್ ಸೇನಾ ನ್ಯಾಯಾಲಯ ಬೇಹುಗಾರಿಕೆ ಮತ್ತು ಭಯೋತ್ಪಾದನಾ ಚಟುವಟಿಕೆ ನಡೆಸಿದ ಆರೋಪದಡಿ 2017ರಲ್ಲಿ ಮರಣದಂಡನೆ ಸಜೆ ವಿಧಿಸಿತ್ತು.

ಪಾಕ್ ಸೇನಾ ನ್ಯಾಯಾಲಯದ ತೀರ್ಪಿನ ವಿರುದ್ಧ ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರಿತ್ತು. ಕುಲಭೂಷಣ್ ಜಾದವ್ ಅವರಿಗೆ ಯಾವುದೇ ಬಗೆಯ ರಾಜತಾಂತ್ರಿಕ ನೆರವನ್ನು ನೀಡಲು ಪಾಕ್ ಸಮ್ಮತಿ ಸೂಚಿಸಿಲ್ಲ ಹಾಗೂ ಮರಣದಂಡನೆ ತೀರ್ಪು ಪ್ರಶ್ನಾರ್ಹ ಎಂದು ಭಾರತ ವಾದಿಸಿತ್ತು.

ಇತ್ತಂಡಗಳ ವಾದ ಆಲಿಸಿದ ಅಂತಾರಾಷ್ಟ್ರೀಯ ನ್ಯಾಯಾಲಯ ಜಾದವ್ ಅವರಿಗೆ ರಾಜತಾಂತ್ರಿಕ ನೆರವನ್ನು ನೀಡಬೇಕು ಹಾಗೂ ಮರಣದಂಡನೆ ತೀರ್ಪನ್ನು ಪುನರ್ ಪರಿಶೀಲಿಸಬೇಕು ಎಂದು ನಿರ್ದೇಶನ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT