ರಮೀಜ್ ರಾಜಾ 
ವಿದೇಶ

ಭಾರತ ಮನಸ್ಸು ಮಾಡಿದರೆ ಪಾಕ್‌ ಕ್ರಿಕೆಟ್‌ ಮಂಡಳಿ ಬೀದಿಪಾಲು: ಪಿಸಿಬಿ ಮುಖ್ಯಸ್ಥ ರಮೀಜ್ ರಾಜಾ

ಭಾರತ ಮನಸ್ಸು ಮಾಡಿದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) "ಬೀದಿ ಪಾಲಾಗಬಹುದು". ಏಕೆಂದರೆ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಗೆ ಶೇಕಡಾ 90 ರಷ್ಟು ಧನಸಹಾಯ ಭಾರತದಿಂದ ಬರುತ್ತದೆ.

ಕರಾಚಿ: ಭಾರತ ಮನಸ್ಸು ಮಾಡಿದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) "ಬೀದಿಪಾಲಾಗಬಹುದು". ಏಕೆಂದರೆ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಗೆ ಶೇಕಡಾ 90 ರಷ್ಟು ಧನಸಹಾಯ ಭಾರತದಿಂದ ಬರುತ್ತದೆ. ಇದರ್ಥ ಇಲ್ಲಿ ಕ್ರೀಡೆಯನ್ನು "ಭಾರತದ ವ್ಯಾಪಾರ ಸಂಸ್ಥೆಗಳು" ನಡೆಸುತ್ತಿವೆ ಎಂದು ಪಿಸಿಬಿ ಮುಖ್ಯಸ್ಥ ರಮೀಜ್ ರಾಜಾ ಅವರು ಹೇಳಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ಗುರುವಾರ ಅಂತರ ಪ್ರಾಂತೀಯ ವ್ಯವಹಾರಗಳ ಸೆನೆಟ್ ಸ್ಥಾಯಿ ಸಮಿತಿಯ ಮುಂದೆ ಹಾಜರಾದ ರಮೀಜ್, ಐಸಿಸಿಯಿಂದ ಹಣಕಾಸಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ಸ್ಥಳೀಯ ಮಾರುಕಟ್ಟೆಯನ್ನು ಟ್ಯಾಪ್ ಮಾಡಲು ಪಿಸಿಬಿಗೆ ಇದು ಸರಿಯಾದ ಸಮಯ ಎಂದಿದ್ದಾರೆ.

ಭಾರತದಿಂದಲೇ ಐಸಿಸಿಗೆ ಶೇಕಡ 90 ರಷ್ಟು ಧನಸಹಾಯವಾಗುತ್ತಿದೆ. ಈ ಹಣದಿಂದಲೇ ಪಾಕಿಸ್ತಾನದಲ್ಲಿ ನಡೆಯುವ ಟೂರ್ನಿಗಳಿಗೆ ಐಸಿಸಿ ಹಣ ನೀಡುತ್ತಿದೆ ರಮೀಜ್ ರಾಜಾ ಅವರು ಹೇಳಿದ್ದಾರೆ.

ಐಸಿಸಿ ನೀಡುವ ಹಣದಿಂದಲೇ ಪಾಕಿಸ್ತಾನದಲ್ಲಿ ಕ್ರಿಕೆಟ್ ಟೂರ್ನಿಗಳು ನಡೆಯುತ್ತಿವೆ. ಪಾಕಿಸ್ತಾನದಲ್ಲಿ ನಡೆಯುವ ಕ್ರಿಕೆಟ್ ಟೂರ್ನಿಗಳಿಗೆ ಐಸಿಸಿ ಶೇ. 50 ರಷ್ಟು ಧನಸಹಾಯ ಮಾಡುತ್ತಿದೆ. ಒಂದು ವೇಳೆ ಭಾರತದ ಪ್ರಧಾನಿ, ನಾವು ಪಾಕಿಸ್ತಾನಕ್ಕೆ ಫಂಡಿಂಗ್ ಮಾಡುವುದಿಲ್ಲವೆಂದರೆ ಪಾಕ್‌ ಕ್ರಿಕೆಟ್ ಮಂಡಳಿ ಮುಚ್ಚಿ ಹೋಗಬಹುದು. ಹೀಗಾಗಿ ನಾವು ಆತ್ಮನಿರ್ಭರತೆಯನ್ನು ಸಾಧಿಸಬೇಕು ಎಂದು ರಮೀಜ್‌ ರಾಜಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?