ಸಾಂದರ್ಭಿಕ ಚಿತ್ರ 
ವಿದೇಶ

ತೈಲ ಖರೀದಿಗೆ ಭಾರತದ ಬಳಿ 3,749 ಕೋಟಿ ರೂ. ಸಾಲದ ನೆರವು ಕೇಳಿದ ಶ್ರೀಲಂಕಾ

ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ದೇಶ ಇಂಧನ ಕೊರತೆ ಎದುರಿಸುತ್ತಿದೆ. ಹೀಗಾಗಿ ಭಾರತದ ನೆರವು ಕೋರಿದೆ ಎಂದು ಶ್ರೀಲಂಕಾ ಇಂಧನ ಸಚಿವ ಉದಯ ಗಮನ್ ಪಿಲಾ ಹೇಳಿದ್ದಾರೆ.

ಕೊಲಂಬೊ: ಇಂಧನ ಅಭಾವವನ್ನು ಎದುರಿಸುತ್ತಿರುವ ಶ್ರೀಲಂಕಾ ತೈಲ ಪೂರೈಕೆ ಸ್ಥಗಿತ ತಡೆಗಟ್ಟಲು ಭಾರತದ ಬಳಿ 3,749 ಕೋಟಿ ರೂ. ಸಾಲ ಪಡೆಯುವ ಪ್ರಕ್ರಿಯೆ ಜಾರಿಯಲ್ಲಿದೆ. ಈ ಬಗ್ಗೆ ಭಾರತ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂಡು ಶ್ರೀಲಂಕಾ ತಿಳಿಸಿದೆ. 

ಮುಂದಿನ ವರ್ಷ ಜನವರಿ ತನಕ ಶ್ರೀಲಂಕಾಗೆ ತೈಲ ಪೂರೈಕೆ ನಡೆಯಲಿದೆ. ಜನವರಿ ನಂತರ ತೈಲ ಪೂರೈಕೆ ಎಂದಿನಂತೆ ನಡೆಯಬೇಕೆಂದರೆ ಓಮನ್ ಗೆ ಇಂಧನ ಶುಲ್ಕ ಪಾವತಿಸಬೇಕಿದೆ. ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ದೇಶ ಇಂಧನ ಶುಲ್ಕ ಭರಿಸಲು ಅಶಕ್ತವಾಗಿದೆ. ಹೀಗಾಗಿ ಭಾರತದ ನೆರವು ಕೋರಿದೆ ಎಂದು  ಶ್ರೀಲಂಕಾ ಇಂಧನ ಸಚಿವ ಉದಯ ಗಮನ್ ಪಿಲಾ ಹೇಳಿದ್ದಾರೆ.

ಭಾರತದ ಇಂಡೀಯನ್ ಆಯಿಲ್ ಸಂಸ್ಥೆಯ ಅಧೀನದಲ್ಲಿರುವ ಅಲ್ಲಿನ ಲಂಕಾ ಐಒಸಿ 1 ಲೀ. ಪೆಟ್ರೋಲ್ ಹಗೂ ಡೀಸೆಲ್ ಬೆಲೆಯನ್ನು 5 ರೂ.ಗಳಿಂದ ಏರಿಸಿತ್ತು. ಸರ್ಕಾರಿ ಸ್ವಾಮ್ಯದ ಸಿಲೋನ್ ಪೆಟ್ರೋಲಿಯಂ ಸಂಸ್ಥೆ ಮುಂದಿನ ದಿನಗಳಲ್ಲಿ ತೈಲ ದರ ಏರಿಸಲು ಚಿಂತನೆ ನಡೆಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT