ಜಿ-20 ಶೃಂಗಸಭೆ ಆರಂಭ 
ವಿದೇಶ

ಬಡ ದೇಶಗಳಿಗೆ ಹೆಚ್ಚಿನ ಕೋವಿಡ್ ಲಸಿಕೆ ಪೂರೈಕೆ ಕರೆಯೊಂದಿಗೆ ಜಿ-20 ಶೃಂಗಸಭೆ ಆರಂಭ

ಇಟಲಿ ಪ್ರಧಾನಿ ಮಾರಿಯೋ ಡ್ರಾಗಿ ಅವರು ಬಡ ದೇಶಗಳು ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಪಡೆಯುವಂತಾಗಬೇಕು ಎಂದು ಕರೆ ನೀಡುವ ಮೂಲಕ ವಿಶ್ವದ ಶಕ್ತಿಶಾಲಿ ಆರ್ಥಿಕತೆ ಸಮ್ಮೇಳನ ಜಿ-20 ಶೃಂಗಸಭೆಗೆ ಚಾಲನೆ...

ರೋಮ್: ಇಟಲಿ ಪ್ರಧಾನಿ ಮಾರಿಯೋ ಡ್ರಾಗಿ ಅವರು ಬಡ ದೇಶಗಳು ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಪಡೆಯುವಂತಾಗಬೇಕು ಎಂದು ಕರೆ ನೀಡುವ ಮೂಲಕ ವಿಶ್ವದ ಶಕ್ತಿಶಾಲಿ ಆರ್ಥಿಕತೆ ಸಮ್ಮೇಳನ ಜಿ-20 ಶೃಂಗಸಭೆಗೆ ಚಾಲನೆ ನೀಡಿದರು.

ಜಾಗತಿಕವಾಗಿ ಕೋವಿಡ್ ಲಸಿಕೆ ಅಂತರ "ನೈತಿಕವಾಗಿ ಸ್ವೀಕಾರಾರ್ಹವಲ್ಲ" ಎಂದಿರುವ ಡ್ರಾಗಿ ಅವರು, ವಿಶ್ವದ ಬಡ ದೇಶಗಳಲ್ಲಿ ಕೇವಲ ಶೇ. 3 ರಷ್ಟು ಜನರು ಮಾತ್ರ ಲಸಿಕೆ ಹಾಕಿಸಿಕೊಂಡಿದ್ದಾರೆ. ಆದರೆ ಶ್ರೀಮಂತ ರಾಷ್ಟ್ರಗಳಲ್ಲಿ ಶೇ. 70 ಜನ ಕನಿಷ್ಠ ಒಂದು ಡೋಸ್ ಲಸಿಕೆ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಕಡಿಮೆ-ಆದಾಯದ ದೇಶಗಳಿಗೆ ಹೆಚ್ಚಿನ ಲಸಿಕೆ ಪೂರೈಸಲು ಸಾಮೂಹಿಕ ಸಹಾಯಕ್ಕಾಗಿ ಶೃಂಗಸಭೆಯ ಮೂಲಕ ಡ್ರಾಗಿ ಕರೆ ನೀಡಿದರು. ಡ್ರಾಗಿ ಅವರು ರೋಮ್‌ನಲ್ಲಿ ನಡೆಯುತ್ತಿರುವ ಎರಡು ದಿನಗಳ ಜಿ- 20 ಶೃಂಗಸಭೆಯ ಆತಿಥ್ಯ ವಹಿಸಿದ್ದಾರೆ.

ಇಂದಿನ ಶೃಂಗಸಭೆಯಲ್ಲಿ ಹವಾಮಾನ ಬದಲಾವಣೆ, ಜಾಗತಿಕ ಕನಿಷ್ಠ ಕಾರ್ಪೋರೇಟ್ ತೆರಿಗೆ ದರ, ಕೊವಿಡ್​ 19 ಸಾಂಕ್ರಾಮಿಕದಿಂದ ಆರೋಗ್ಯದಲ್ಲಿ ಚೇತರಿಕೆ, ಜಾಗತಿಕ ಅಭಿವೃದ್ಧಿ ಇತ್ಯಾದಿ ವಿಚಾರಗಳನ್ನು ಇಂದು ನಾಯಕರು ವ್ಯಾಪಕವಾಗಿ ಚರ್ಚಿಸಲಿದ್ದಾರೆ. 

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ ಜಿ-20 ನಾಯಕರ ಫೋಟೋವನ್ನು ಶೇರ್ ಮಾಡಿಕೊಂಡಿದೆ. ಜಾಗತಿಕ ಒಳಿತಿಗಾಗಿ ಇರುವ ಅತಿಮುಖ್ಯವಾದ ವೇದಿಕೆಯಾದ ಜಿ-20 ಸಂಘಟನೆಯ ನಾಯಕರು ಇಂದು ರೋಮ್​​ನಲ್ಲಿ ಭೇಟಿಯಾದರು ಎಂದು ಹೇಳಿದೆ. ಈ ಫೋಟೋದಲ್ಲಿ ಜರ್ಮನಿಯ ಚಾನ್ಸೆಲರ್ ಏಂಜೆಲಾ ಮರ್ಕೆಲ್, ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು ಯುಕೆ ಪಿಎಂ ಬೋರಿಸ್ ಜಾನ್ಸನ್ ಇತರ ಪ್ರಮುಖ ನಾಯಕರು ಇದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"no friendship only business; ತೈಲ ಬೇಕಾದರೆ..: ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ

ಮಧ್ಯಪ್ರಾಚ್ಯ ಯುದ್ಧ: ಅಡುಗೆ ಅನಿಲದ ಬೆನ್ನಲ್ಲೆ ಏರ್ ಇಂಡಿಯಾ ಸಮೂಹದಿಂದ ಬೆಲೆ ಏರಿಕೆ ಶಾಕ್! fuel surcharge ಏರಿಕೆ ಘೋಷಣೆ

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

SCROLL FOR NEXT