ದೇವಿ ಮಾ' ದೇಗುಲ 
ವಿದೇಶ

ದೀಪಾವಳಿಗೂ ಮುನ್ನ ಹೀನ ಕೃತ್ಯ - ಪಾಕ್ ನಲ್ಲಿ ಹಿಂದೂ ದೇವಾಲಯ ದರೋಡೆ!

ಪಾಕಿಸ್ತಾನದಲ್ಲಿ ಅಲ್ಪ ಸಂಖ್ಯಾತರ ಮೇಲೆ ಹೀನ ಕೃತ್ಯಗಳು ಮುಂದುವರಿದಿವೆ. ಈ ಮಧ್ಯೆ ಹಿಂದೂ ದೇವಸ್ಥಾನಕ್ಕೆ ಕನ್ನ ಹಾಕಿರೋ ದರೋಡೆಕೋರರು ನಗದು, ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ.

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಅಲ್ಪ ಸಂಖ್ಯಾತರ ಮೇಲೆ ಹೀನ ಕೃತ್ಯಗಳು ಮುಂದುವರಿದಿವೆ. ಈ ಮಧ್ಯೆ ಹಿಂದೂ ದೇವಸ್ಥಾನಕ್ಕೆ ಕನ್ನ ಹಾಕಿರೋ ದರೋಡೆಕೋರರು ನಗದು, ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ. ಭಕ್ತರು ಕಾಣಿಕೆಯಾಗಿ ನೀಡಿದ್ದ 3 ಬೆಳ್ಳಿ ಸರ ಹಾಗೂ ನಗದು ದೋಚಿದ್ದಾರೆ.

ಇನ್ನೇನು ಕೆಲವೇ ದಿನಗಳಲ್ಲಿ ಹಿಂದೂಗಳ ಪಾಲಿನ ಅತೀ ದೊಡ್ಡ ಹಬ್ಬ ದೀಪಾವಳಿ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಪಾಕಿಸ್ತಾನದ ಸಿಂಧ ಪ್ರಾಂತ್ಯದ ಕೊಟ್ರಿ ನಗರದಲ್ಲಿ ಈ ಕಳ್ಳತನ ನಡೆದಿದೆ. ಖದೀಮರ ಕೃತ್ಯಕ್ಕೆ ಗುರಿಯಾಗಿದ್ದು 'ದೇವಿ ಮಾ' ದೇಗುಲ. ದೇವಿಯ ದೇವಸ್ಥಾನದ ಬೀಗ ಮುರಿದು ಒಳ ನುಗ್ಗಿದ ಖದೀಮರು, 10 ತೊಲ ಬೆಳ್ಳಿ ಸರ ಜೊತೆಗೆ ಕಾಣಿಕೆ ಹುಂಡಿಯಲ್ಲಿದ್ದ 25 ಸಾವಿರ ರೂಪಾಯಿ ನಗದು ಕದ್ದು ಕಾಲ್ಕಿತ್ತಿದ್ದಾರೆ.

ಪ್ರಕರಣದ ಕುರಿತು ದೇವಸ್ಥಾನದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಭಗವಾನ್ ದಾಸ್ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆ ಸಿಂಧ್ ಪ್ರಾಂತ್ಯದಲ್ಲಿ ಕೃಷ್ಣನ ದೇವಸ್ಥಾನದ ಮೇಲೆ ಬಹುಸಂಖ್ಯಾತರಾಗಿರುವ ಮುಸ್ಲಿಂರು ದಾಳಿ ನಡೆಸಿ, ದೇವರ ವಿಗ್ರಹಗಳನ್ನು ಭಗ್ನಗೊಳಿಸಿದ್ದರು. ಅಲ್ಲದೆ, ದೇವಸ್ಥಾನದ ಕಟ್ಟಡಕ್ಕೆ ಹಾಗೂ ಪೀಠೋಪಕರಣಗಳಿಗೆ ಅಪಾರ ಹಾನಿ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT