ತಾಲೀಬಾನ್ 
ವಿದೇಶ

ಯಾವುದೇ ಅಪಾಯ ಬೇಡವೆಂದಾದರೆ ನಮ್ಮ ಸರ್ಕಾರವನ್ನು ಅಂಗೀಕರಿಸಿ: ಜಾಗತಿಕ ಸಮುದಾಯಕ್ಕೆ ತಾಲೀಬಾನ್ ಬೆದರಿಕೆ

"ಅಫ್ಘಾನಿಸ್ತಾನದಿಂದ ಯಾವುದೇ ಅಪಾಯವೂ ಎದುರಾಗಬಾರದೆಂದರೆ ತಮ್ಮ ನೇತೃತ್ವದ ಸರ್ಕಾರವನ್ನು ಮಾನ್ಯ ಮಾಡಿ ಅಂಗೀಕರಿಸಿ" ಎಂದು ಜಾಗತಿಕ ಸಮುದಾಯಕ್ಕೆ ತಾಲೀಬಾನ್ ಎಚ್ಚರಿಕೆ ನೀಡಿದೆ.

 ಕಾಬೂಲ್: "ಅಫ್ಘಾನಿಸ್ತಾನದಿಂದ ಯಾವುದೇ ಅಪಾಯವೂ ಎದುರಾಗಬಾರದೆಂದರೆ ತಮ್ಮ ನೇತೃತ್ವದ ಸರ್ಕಾರವನ್ನು ಮಾನ್ಯ ಮಾಡಿ ಅಂಗೀಕರಿಸಿ" ಎಂದು ಜಾಗತಿಕ ಸಮುದಾಯಕ್ಕೆ ತಾಲೀಬಾನ್ ಎಚ್ಚರಿಕೆ ನೀಡಿದೆ. 

ತಾಲೀಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು, ತಮ್ಮನ್ನು ಜವಾಬ್ದಾರಿಯುತ ವ್ಯವಸ್ಥೆಯನ್ನಾಗಿ ಗುರುತಿಸಬೇಕಾಗಿದೆ ಎಂದು ಹೇಳಿದ್ದಾರೆ. 

ಅಫ್ಘಾನಿಸ್ತಾನ ತಾಲೀಬಾನ್ ಕೈವಶವಾಗಿ ಎರಡು ತಿಂಗಳುಗಳು ಕಳೆದಿವೆ. ಚೀನಾ, ಪಾಕಿಸ್ತಾನ ಹೊರತುಪಡಿಸಿ ಬೇರೆ ಯಾವುದೇ ರಾಷ್ಟ್ರವೂ ತಾಲೀಬಾನ್ ಸರ್ಕಾರವನ್ನು ಮಾನ್ಯ ಮಾಡಿ ಅಂಗೀಕರಿಸುವ ಉತ್ಸಾಹವನ್ನಾಗಲೀ ತಾಲೀಬಾನ್ ಜೊತೆಗೆ ಮಾತುಕತೆ ನಡೆಸುವುದಕ್ಕೆ ಮುಂದಾಗುವ ಸೂಚನೆಯನ್ನಾಗಲೀ ನೀಡಿಲ್ಲ.

ಅಂತಾರಾಷ್ಟ್ರೀಯ ಸಮುದಾಯ ಈಗ ಅಫ್ಘಾನಿಸ್ತಾನದಲ್ಲಿನ ಮಾನವ ಹಕ್ಕುಗಳ ಪರಿಸ್ಥಿತಿ ಹಾಗೂ ಬಿಕ್ಕಟ್ಟಿನ ವಿಷಯಗಳತ್ತ ಗಮನ ಕೇಂದ್ರೀಕರಿಸುತ್ತಿದ್ದು, ಕಾದು ನೋಡುತ್ತಿವೆ. 

ಈ ನಡುವೆ ತಾಲೀಬಾನ್ ಎಚ್ಚರಿಕೆಯ ಸಂದೇಶವನ್ನು ನೀಡಿದ್ದು, ಅಂತಾರಾಷ್ಟ್ರೀಯ ಸಮುದಾಯ ತಮ್ಮನ್ನು ಮಾನ್ಯ ಮಾಡುವವರೆಗೂ ಅಫ್ಘಾನಿಸ್ತಾನದಿಂದ ಬೇರೆ ಯಾವುದೇ ರಾಷ್ಟ್ರಗಳಿಗೆ ಬರುವ ಬೆದರಿಕೆಯ ವಿಷಯದ ಬಗ್ಗೆ ಯಾವುದೇ ಜವಾಬ್ದಾರಿಯನ್ನೂ ತೆಗೆದುಕೊಳ್ಳುವುದಿಲ್ಲ ಎಂದು ಎಚ್ಚರಿಸಿದೆ. 

ನಮ್ಮನ್ನು ಅಂಗೀಕರಿಸದ ಕಾರಣಕ್ಕಾಗಿ ನಾವು ಅಮೆರಿಕ ವಿರುದ್ಧ ಹೋರಾಡಿದೆವು, ತಾಲೀಬಾನ್ ನ್ನು ಮಾನ್ಯ ಮಾಡದೇ ಇದ್ದಲ್ಲಿ ಅಫ್ಘಾನಿಸ್ತಾನ, ಪ್ರಾಂತೀಯ, ಜಾಗತಿಕ ಮಟ್ಟದಲ್ಲಿ ಸಮಸ್ಯೆ ಹೆಚ್ಚಳವಾಗುತ್ತದೆ ಎಂದು ತಾಲೀಬಾನ್ ವಕ್ತಾರರು ಹೇಳ್ದಿದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT