ಸಂಗ್ರಹ ಚಿತ್ರ 
ವಿದೇಶ

ಹೆಲಿಕಾಪ್ಟರ್‌ನಿಂದ ನೇತಾಡಿದ್ದು ಧ್ವಜ ಸ್ಥಾಪಕ ವ್ಯಕ್ತಿ ಹೊರತು ಮೃತದೇಹವಲ್ಲ: ಅಫ್ಘಾನ್ ಪತ್ರಕರ್ತ

ಅಫ್ಘಾನಿಸ್ತಾನದ ಕಂದಹಾರ್ ಪ್ರಾಂತ್ಯದ ಮೇಲೆ ಗಸ್ತು ತಿರುಗುತ್ತಿದ್ದ ಅಮೆರಿಕಾ ನಿರ್ಮಿತ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ ನಲ್ಲಿ ನೇತಾಡಿದ್ದು ಧ್ವಜ ಸ್ಥಾಪಕ ವ್ಯಕ್ತಿ ಹೊರತು ಮೃತದೇಹವಲ್ಲ ಎಂದು ಅಫ್ಘಾನ್ ಪತ್ರಕರ್ತ ಸ್ಪಷ್ಟಪಡಿಸಿದ್ದಾರೆ. 

ಕಾಬೂಲ್: ಅಫ್ಘಾನಿಸ್ತಾನದ ಕಂದಹಾರ್ ಪ್ರಾಂತ್ಯದ ಮೇಲೆ ಗಸ್ತು ತಿರುಗುತ್ತಿದ್ದ ಅಮೆರಿಕಾ ನಿರ್ಮಿತ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ ನಲ್ಲಿ ನೇತಾಡಿದ್ದು ಧ್ವಜ ಸ್ಥಾಪಕ ವ್ಯಕ್ತಿ ಹೊರತು ಮೃತದೇಹವಲ್ಲ ಎಂದು ಅಫ್ಘಾನ್ ಪತ್ರಕರ್ತ ಸ್ಪಷ್ಟಪಡಿಸಿದ್ದಾರೆ. 

ಹೆಲಿಕಾಪ್ಟರ್ ನಲ್ಲಿ ವ್ಯಕ್ತಿಯೋರ್ವ ನೇತಾಡುತ್ತಿದ್ದ ವಿಡಿಯೋ ತುಣುಕು ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ, ಆ ವ್ಯಕ್ತಿ ಸತ್ತಿದ್ದಾನೋ ಅಥವಾ ಬದುಕಿದ್ದಾನೋ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿರಲಿಲ್ಲ. ನಂತರ ಅಫ್ಘಾನಿಸ್ತಾನದ ಪೈಲಟ್ ಚಾಪರ್ ಹಾರಿಸುತ್ತಿದ್ದನೆಂದು ಸ್ಪಷ್ಟಪಡಿಸಲಾಯಿತು. ತಾಲಿಬಾನ್ ಸದಸ್ಯರು ಗುಂಪಿನ ಧ್ವಜವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗಿತ್ತು.

ತಾಲಿಬಾನ್ ಫೈಟರ್ ಗಾಳಿಯಲ್ಲಿ ತಾಲಿಬಾನ್ ಧ್ವಜವನ್ನು ಸ್ಥಾಪಿಸಲು ಪ್ರಯತ್ನಿಸಿದ್ದು ಆದರೆ ಅದು ಸಾಧ್ಯವಾಗಲಿಲ್ಲ ಎಂದು ಅಫ್ಘಾನ್ ಪತ್ರಕರ್ತ ಬಿಲಾಲ್ ಸರ್ವಾರಿ ಟ್ವೀಟ್ ಮಾಡಿದ್ದಾರೆ.

ಕಳೆದ ವಾರ ಸ್ಥಳೀಯ ಮಾಧ್ಯಮ ವರದಿಗಳು ತಾಲಿಬಾನ್ ಅಮೆರಿಕಾ ಸೇನೆಯ ಬಯೋಮೆಟ್ರಿಕ್ ಸಾಧನಗಳನ್ನು ತನ್ನ ಸೈನ್ಯದ ನಿರ್ಣಾಯಕ ದತ್ತಾಂಶವನ್ನು ಮತ್ತು ಇತರ ಅಮೆರಿಕಾ ಮಿಲಿಟರಿ ಉಪಕರಣಗಳೊಂದಿಗೆ ರಾಜಿ ಮಾಡಿಕೊಂಡಿದೆ ಎಂದು ಹೇಳಿತ್ತು.

ಈ ತಿಂಗಳ ಆರಂಭದಲ್ಲಿ, ಶ್ವೇತಭವನವು ಅಫ್ಘಾನ್ ಪಡೆಗಳಿಂದ ವಶಪಡಿಸಿಕೊಂಡ ತಾಲಿಬಾನ್ ಅಮೆರಿಕಾ ಶಸ್ತ್ರಾಸ್ತ್ರಗಳನ್ನು ಹಿಂದಿರುಗಿಸುವುದಿಲ್ಲ ಎಂದು ನಂಬಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?