ಇಮ್ರಾನ್ ಖಾನ್ ಮತ್ತು ಸೈಯದ್ ಅಲಿ ಶಾ ಗಿಲಾನಿ 
ವಿದೇಶ

'ಕಾಶ್ಮೀರದ ಸ್ವಾತಂತ್ರ್ಯ ಹೋರಾಟಗಾರ': ಗಿಲಾನಿ ನಿಧನಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸಂತಾಪ, ಶೋಕಾಚರಣೆ ಘೋಷಣೆ

ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ (91) ನಿಧನಕ್ಕೆ ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಸಂತಾಪ ಸೂಚಿಸಿದ್ದು, ಗಿಲಾನಿ ಅವರನ್ನು ಕಾಶ್ಮೀರದ ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆದಿದ್ದಾರೆ.

ನವದೆಹಲಿ: ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ (91) ನಿಧನಕ್ಕೆ ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಸಂತಾಪ ಸೂಚಿಸಿದ್ದು, ಗಿಲಾನಿ ಅವರನ್ನು ಕಾಶ್ಮೀರದ ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಇಮ್ರಾನ್ ಖಾನ್, 'ಕಾಶ್ಮೀರದ ಸ್ವಾತಂತ್ರ್ಯ ಹೋರಾಟಗಾರ ಸೈಯದ್ ಅಲಿ ಗಿಲಾನಿ ನಿಧನದ ವಾರ್ತೆತಿಳಿದು ಅತೀವ ದುಃಖವಾಯಿತು. ಅವರು ತಮ್ಮ ಜನರ ಹಕ್ಕಿಗಾಗಿ ಜೀವನಪರ್ಯಂತ ಹೋರಾಡಿದರು. ಭಾರತದಿಂದ ಸೆರೆವಾಸ ಮತ್ತು ಚಿತ್ರಹಿಂಸೆಯನ್ನು ಅನುಭವಿಸಿದರು. ಆದರೂ ದೃಢ ಸಂಕಲ್ಪದಿಂದ ಇದ್ದರು' ಎಂದು ಹೇಳಿದ್ದಾರೆ.

ಶೋಕಾಚರಣೆ ಘೋಷಣೆ
ಅಲ್ಲದೆ ಗಿಲಾನಿ ನಿಧನದ ಹಿನ್ನಲೆಯಲ್ಲಿ ಪಾಕಿಸ್ತಾನದಲ್ಲಿ ಒಂದು ದಿನದ ಅಧಿಕೃತ ಶೋಕಾಚರಣೆಯನ್ನು ಇಮ್ರಾಮ್ ಖಾನ್ ಘೋಷಿಸಿದ್ದಾರೆ.

'ಅವರ ಧೈರ್ಯಶಾಲಿ ಹೋರಾಟವನ್ನು ನಾವು (ಪಾಕಿಸ್ತಾನ) ಅಭಿನಂದಿಸುತ್ತೇವೆ. ಸದಾ ಅವರ ಮಾತುಗಳನ್ನು ನೆನಪಿಸಿಕೊಳ್ಳುತ್ತೇವೆ. ನಾವು ಪಾಕಿಸ್ತಾನಿಯರು ಮತ್ತು ಪಾಕಿಸ್ತಾನ ನಮ್ಮದಾಗಿದೆ, ಅವರ ನಿಧನದ ಹಿನ್ನೆಲೆಯಲ್ಲಿ ಪಾಕಿಸ್ತಾನದ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಿ ಅಧಿಕೃತ ಶೋಕಾಚರಣೆಯನ್ನು ಆಚರಿಸುತ್ತೇವೆ' ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT