ಸಾಂದರ್ಭಿಕ ಚಿತ್ತ 
ವಿದೇಶ

ಶ್ರೀಲಂಕಾಗೆ 150 ಟನ್ ಆಮ್ಲಜನಕ ದೇಣಿಗೆ: ಕೊರೊನಾ ಸಂಕಟ ಕಾಲದಲ್ಲಿ ಮಿತ್ರರಾಷ್ಟ್ರಕ್ಕೆ ನೆರವಾದ ಭಾರತ 

ಕೊರೊನಾ ಮೂರನೇ ಅಲೆಯಿಂದಾಗಿ ಶ್ರೀಲಂಕಾ ಪರಿಸ್ಥಿತಿ ನಿಯಂತ್ರಣ ಮೀರುತ್ತಿರುವ ಹಿನ್ನೆಲೆಯಲ್ಲಿ ಆಮ್ಲಜನಕ ಕೊರತೆ ಕಂಡುಬಂದಿತ್ತು.  

ಕೊಲಂಬೊ: ಭಾರತ 150 ಟನ್ ಪ್ರಮಾಣದ ಆಮ್ಲಜನಕವನ್ನು ಶ್ರೀಲಂಕಾಗೆ ಕಳುಹಿಸಿಕೊಟ್ಟಿದೆ. ಕೊರೊನಾ ಮೂರನೇ ಅಲೆಯಿಂದಾಗಿ ಶ್ರೀಲಂಕಾ ಪರಿಸ್ಥಿತಿ ನಿಯಂತ್ರಣ ಮೀರುತ್ತಿರುವ ಹಿನ್ನೆಲೆಯಲ್ಲಿ ಆಮ್ಲಜನಕ ಕೊರತೆ ಕಂಡುಬಂದಿತ್ತು.  

ದೇಶಾದ್ಯಂತ ಲಾಕ್ ಡೌನ್ ಅನ್ನು ಸೆ.13ರ ತನಕ ವಿಸ್ತರಣೆ ಮಾಡಿರುವುದಾಗಿ ಶ್ರೀಲಂಕಾದ ರಾಜಪಕ್ಸ ಸರ್ಕಾರ ಶುಕ್ರವಾರವಷ್ಟೇ ಘೋಷಿಸಿತ್ತು. 

ಇಂಥ ಸಂದರ್ಭದಲ್ಲಿ ಭಾರತ 150 ಟನ್ ಆಮ್ಲಜನಕವನ್ನು ಕಳುಹಿಸಿಕೊಟ್ಟಿರುವುದಕ್ಕೆ ಶ್ರೀಲಂಕಾ ಮೆಚ್ಚುಗೆ ವ್ಯಕ್ತಪಡಿಸಿದೆ. ವೈಜಾಗ್ ಮತ್ತು ಚೆನ್ನೈನಿಂದ ಆಮ್ಲಜನಕ ತುಂಬಿದ ಹಡಗು ಶ್ರೀಲಂಕಾದ ಕೊಲಂಬೊ ಬಂದರನ್ನು ತಲುಪಿರುವುದಾಗಿ ಅಲ್ಲಿನ ಭಾರತೀಯ ಹೈಕಮಿಷನ್ ಕಚೇರಿ ಟ್ವೀಟ್ ಮಾಡಿದೆ 

ಕೊರೊನಾ ಸೋಂಕಿತರ ಏರಿಕೆಯಿಂದಾಗಿ ದೇಶಾದ್ಯಂತ ಮೇಲಿಂದ ಮೇಲೆ ಕಠಿಣ ಲಾಕ್ ಡೌನ್ ನಿಯಮಾವಳಿಯನ್ನು ಹೇರಲಾಗುತ್ತಿದ್ದು, ಅದರಿಂದಾಗಿ ದೇಶದ ಆರ್ಥಿಕತೆ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT