ಸ್ಫೋಟ ನಡೆದ ಸ್ಥಳ 
ವಿದೇಶ

ಪಾಕಿಸ್ತಾನದಲ್ಲಿ ಉಗ್ರಸಂಘಟನೆಯಿಂದ ಸುಸೈಡ್ ಬಾಂಬ್ ದಾಳಿ: ಮೂವರು ಸೈನಿಕರು ಸಾವು

ಅಫ್ಘಾನಿಸ್ತಾನದಲ್ಲಿ ಸರ್ಕಾರ ಬದಲಾದ ಮಾತ್ರಕ್ಕೆ ಪಾಕ್ ಸರ್ಕಾರಕ್ಕೆ ಮುಖಭಂಗ ಮಾಡುವ ತನ್ನ ಪ್ರಯತ್ನ ನಿಲ್ಲುವುದಿಲ್ಲ ಎಂದು ಉಗ್ರಸಂಘಟನೆ ಸೂಚನೆ ನೀಡಿದೆ. 

ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಆತ್ಮಹತ್ಯಾ ಬಾಂಬ್ ದಾಳಿ ಸಂಭವಿಸಿದ್ದು, ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.ಲ್ಲದೆ 20 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕ್ವೆಟ್ಟಾದಲ್ಲಿ ನೆಲೆಗೊಂಡಿದ್ದ ಪಾಕ್ ಭದ್ರತಾಪಡೆಗಳನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ. ದಾಳಿಯ ಹೊಣೆಯನ್ನು ತೆಹ್ರೀಕ್ ಇ ತಾಲಿಬಾನ್ ಉಗ್ರಸಂಘಟನೆ ಹೊತ್ತುಕೊಂಡಿದೆ. 

ದುರ್ಘಟನೆಯಲ್ಲಿ ಸತ್ತಿರುವ ಮೂವರು ಭದ್ರತಾಪಡೆ ಸಿಬ್ಬಂದಿ ಎಂದು ತಿಳಿದುಬಂದಿದೆ. ಅಲ್ಲದೆ ಗಾಯಗೊಂಡ ಎಲ್ಲಾ 20 ಮಂದಿಯಲ್ಲಿ 18 ಮಂದಿ ಪಾಕ್ ಸೈನಿಕರು ಎಂದು ತಿಳಿದುಬಂದಿದೆ. ಉಳಿದಿಬ್ಬರು ನಾಗರಿಕರಾಗಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಸರ್ಕಾರ ಬದಲಾದ ಮಾತ್ರಕ್ಕೆ ಪಾಕ್ ಸರ್ಕಾರಕ್ಕೆ ಮುಖಭಂಗ ಮಾಡುವ ತನ್ನ ಪ್ರಯತ್ನ ನಿಲ್ಲುವುದಿಲ್ಲ ಎಂದು ಉಗ್ರಸಂಘಟನೆ ಸೂಚನೆ ನೀಡಿದೆ. 

ಆಫ್ಘನ್ ನೆಲದಲ್ಲಿ ಅಡಗಿರುವ ಟಿಟಿಪಿ ಬಂಡುಕೋರರನ್ನು ಸೆರೆಹಿಡಿಯಲು ಮುಂದಾಗಿರುವ ಪಾಕ್ ಸರ್ಕಾರ ಅದೇ ಉದ್ದೇಶದಿಂದ ತಾಲಿಬಾನ್ ಜೊತೆ ಮಾತುಕತೆ ನಡೆಸಲು ಮುಂದಾಗಿತ್ತು. ಅದರ ನಡುವೆಯೇ ಟಿಟಿಪಿ ಸಂಘಟನೆಯ ಆಪ್ತ ಸಂಘಟನೆಯಾದ ತೆಹ್ರೀಕ್ ಇ ತಾಲಿಬಾನ್ ಪಾಕ್ ನಲ್ಲಿ ಹಿಂಸಾಚಾರ ಮುಂದುವರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಾರ್ದಿಕ್, ಪಂತ್'ಗೆ ಬಿಗ್ ಶಾಕ್; ವಿರಾಟ್, ರೋಹಿತ್​ ಶರ್ಮಾಗೆ ಚಾನ್ಸ್

‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ