ಪಂಜಶೀರ್-ತಾಲಿಬಾನ್ ಸಂಘರ್ಷ 
ವಿದೇಶ

ಅಫ್ಘಾನಿಸ್ತಾನ ಘರ್ಷಣೆ: ರೆಸಿಸ್ಟೆನ್ಸ್ ಫೋರ್ಸ್ ವಕ್ತಾರನ ಸಾವು, ಪಂಜಶೀರ್ ತೊರೆದರೆ ತಾಲಿಬಾನ್ ಜತೆ ಮಾತುಕತೆ ಎಂದ ಅಹ್ಮದ್ ಮಸೂದ್

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಮತ್ತು ರೆಸಿಸ್ಟೆನ್ಸ್ ಫೋರ್ಸ್ ಪಡೆಗಳ ನಡುವಿನ ಘರ್ಷಣೆ ಮುಂದುವರೆದಿದ್ದು, ಇತ್ತ ತಾಲಿಬಾನ್ ಪಡೆಗಳ ದಾಳಿಯಲ್ಲಿ ರೆಸಿಸ್ಟೆನ್ಸ್ ಫೋರ್ಸ್ ವಕ್ತಾರರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಮತ್ತು ರೆಸಿಸ್ಟೆನ್ಸ್ ಫೋರ್ಸ್ ಪಡೆಗಳ ನಡುವಿನ ಘರ್ಷಣೆ ಮುಂದುವರೆದಿದ್ದು, ಇತ್ತ ತಾಲಿಬಾನ್ ಪಡೆಗಳ ದಾಳಿಯಲ್ಲಿ ರೆಸಿಸ್ಟೆನ್ಸ್ ಫೋರ್ಸ್ ವಕ್ತಾರರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪಂಜ್ ಶಿರ್ ಪ್ರತಿರೋಧ ನ್ಯಾಷನಲ್ ರೆಸಿಸ್ಟೆನ್ಸ್ ಫ್ರಂಟ್ ವಕ್ತಾರ ಫಾಹೀಮ್ ದಷ್ಟಿ ಭಾನುವಾರ ತಾಲಿಬಾನ್ ಜೊತೆಗಿನ ಘರ್ಷಣೆಯಲ್ಲಿ ನಿಧನರಾಗಿದ್ದಾರೆ ಎಂದು ಪ್ರತಿರೋಧ ಪಡೆಗಳ ಮೂಲಗಳು ತಿಳಿಸಿವೆ. 

ಪ್ರತಿರೋಧ ವಕ್ತಾರರ ಸಾವನ್ನು ಅಫಘಾನ್ ಸುದ್ದಿ ಸಂಸ್ಥೆ ಖಾಮಾ ಪ್ರೆಸ್ ಇಂದು ವರದಿ ಮಾಡಿದ್ದು, "ಪಂಜಶೀರ್ ಪ್ರತಿರೋಧದ ವಕ್ತಾರ ಫಾಹೀಮ್ ದುಷ್ಟಿಯು ತಾಲಿಬಾನ್ ಜೊತೆಗಿನ ಯುದ್ಧದಲ್ಲಿ ಗಳಲ್ಲಿ ನಿಧನರಾದರು" ಎಂದು ಹೇಳಲಾಗಿದೆ.

“ದಬ್ಬಾಳಿಕೆ ಮತ್ತು ಆಕ್ರಮಣಶೀಲತೆಯ ವಿರುದ್ಧದ ಪವಿತ್ರ ಪ್ರತಿರೋಧದಲ್ಲಿ ಇಬ್ಬರು ಸಹಚರರನ್ನು ಕಳೆದುಕೊಳ್ಳಲಾಗಿದೆ. ಫಾಹಿಮ್ ದಷ್ಟಿ, ಎನ್ ಆರ್ ಎಫ್ ವಕ್ತಾರ ಮತ್ತು ಜನರಲ್ ಅಬ್ದುಲ್ ವೂಡೋಡ್ ಜಾರಾ ಹುತಾತ್ಮರಾದರು. ಅವರ ಸ್ಮರಣೆ ಶಾಶ್ವತವಾಗಿರಲಿ!" ಎಂದು ನ್ಯಾಷನಲ್ ರೆಸಿಸ್ಟೆನ್ಸ್ ಫ್ರಂಟ್ ಟ್ವೀಟ್ ತಿಳಿಸಿದೆ. 

ಪಂಜಶೀರ್ ತೊರೆದರೆ ತಾಲಿಬಾನ್ ಜತೆ ಮಾತುಕತೆ: ಅಹ್ಮದ್ ಮಸೂದ್
ಅತ್ತ ನ್ಯಾಷನಲ್ ರೆಸಿಸ್ಟೆನ್ಸ್ ಫ್ರಂಟ್ ವಕ್ತಾರ ಫಾಹೀಮ್ ದಷ್ಟಿ ಸಾವಿನ ಬೆನ್ನಲ್ಲೇ ಪಂಜಶೀರ್ ತೊರೆದರೆ ತಾಲಿಬಾನ್ ಜತೆ ಮಾತುಕತೆಗೆ ಸಿದ್ಧ ಎಂದು ಪ್ರತಿರೋಧ ಪಡೆಗಳ ನಾಯಕ ಅಹ್ಮದ್ ಮಸೂದ್ ಹೇಳಿದ್ದಾರೆ.

ತಾಲಿಬಾನ್ ಸಂಘಟನೆಯು ಪಂಜಶೀರ್ ಪ್ರಾಂತ್ಯವನ್ನು ತೊರೆದರೆ ಹೋರಾಟವನ್ನು ನಿಲ್ಲಿಸಲು ಮತ್ತು ಮಾತುಕತೆ ಆರಂಭಿಸಲು ಸಿದ್ಧ.  ಪಂಜಶೀರ್ ಮತ್ತು ಅಂದರಬ್ ನಲ್ಲಿ ತಾಲಿಬಾನ್ ತಮ್ಮ ದಾಳಿ ಮತ್ತು ಸೇನಾ ಕಾರ್ಯಾಚರಣೆಗಳನ್ನು ನಿಲ್ಲಿಸಿದರೆ ಶಾಶ್ವತ ಶಾಂತಿಯನ್ನು ಸಾಧಿಸಲು ಯುದ್ಧವನ್ನು ತಕ್ಷಣವೇ ನಿಲ್ಲಿಸಲು ರಾಷ್ಟ್ರೀಯ ಪ್ರತಿರೋಧ ಪಡೆಗಳು ಸಿದ್ಧವಾಗಿವೆ, ಮತ್ತು ತಜ್ಞರು ಹಾಗೂ ಸುಧಾರಕರೊಂದಿಗೆ ಬೃಹತ್ ಸಭೆ ನಡೆಸಲು, ಮಾತುಕತೆಗಳನ್ನು ಮುಂದುವರಿಸಲು ಆಶಿಸುತ್ತೇವೆ," ಎಂದು ಭಾನುವಾರ ಮಸೂದ್ ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT