ಸಂಗ್ರಹ ಚಿತ್ರ 
ವಿದೇಶ

ಅಫ್ಘಾನಿಸ್ತಾನದಲ್ಲಿ ಯುದ್ಧ ಕೊನೆಗೊಂಡಿದೆ, ಕೆಲದಿನಗಳಲ್ಲಿ ಸರ್ಕಾರ ರಚನೆ: ತಾಲಿಬಾನ್ ಘೋಷಣೆ

ದೇಶದಲ್ಲಿ ಯುದ್ಧ ಮುಗಿದಿದೆ. ಸರ್ಕಾರ ರಚನೆ ಬಾಕಿ ಉಳಿದಿದೆ. ಜಗತ್ತಿನೊಂದಿಗೆ ಉತ್ತಮ ಸಂಬಂಧ ಹಾಗೂ ದೇಶದ ಮರುನಿರ್ಮಾಣ ತಾಲಿಬಾನ್ ಧ್ಯೇಯ ಎಂದ ವಕ್ತಾರ.

ಕಾಬೂಲ್: ದೇಶದಲ್ಲಿ ಯುದ್ಧ ಕೊನೆಗೊಂಡಿದೆ, ಇನ್ನೇನಿದ್ದರೂ ಸರ್ಕರ ರಚನೆ ಮಾತ್ರ ಬಾಕಿ ಉಳಿದಿದೆ ಎಂದು ತಾಲಿಬಾನ್ ವಕ್ತಾರ ಜಬೀಯುಲ್ಲ ಮುಜಾಹಿದ್ ಹೇಳಿದ್ದಾರೆ. ಸೋಮವಾರ ಬೆಳಿಗ್ಗೆಯಷ್ಟೆ ಪಂಜ್ ಶಿರ್ ಪ್ರಾಂತ್ಯವನ್ನು ತಾಲಿಬಾನ್ ವಶಪಡಿಸಿಕೊಡಿರುವುದಾಗಿ ಘೋಷಿಸಿತ್ತು. 

ಪಂಜ್ ಶಿರ್ ಪ್ರಾಂತ್ಯ ಪೂರ್ತಿಯಾಗಿ ತಾಲಿಬಾನ್ ವಶವಾಗಿಲ್ಲ ಎಂದು ಎನ್ ಆರ್ ಎಫ್ ನಾಯಕರು ತಾಲಿಬಾನ್ ಘೋಷಣೆಯನ್ನು ನಿರಾಕರಿಸಿದ್ದರು. ಪಂಜ್ ಶಿರ್ ಪ್ರಾಂತ್ಯದಲ್ಲಿ ತಾಲಿಬಾನ್ ವಿರೋಧಿ ಪಾಳೆಯ ನೆಲೆಗೊಂಡಿತ್ತು.

ನ್ಯಾಷನಲ್ ರೆಸಿಸ್ಟೆನ್ಸ್ ಫ್ರಂಟ್ ಎನ್ನುವ ಸಂಘಟನೆ ರಚನೆಯಾಗಿ ತಾಲಿಬಾನ್ ವಿರುದ್ಧ ಹೋರಾಡುವುದಾಗಿ ತಿಳಿಸಿತ್ತು. ಆಫ್ಘನ್ ಉಪಾಧ್ಯಕ್ಷ ಅಮ್ರುಲ್ಲಾ ಸಲೇಹ್ ಎನ್ ಆರ್ ಎಫ್ ಪಡೆಯ ನೇತೃತ್ವ ವಹಿಸಿಕೊಂಡಿದ್ದಾರೆ.

ತಾಲಿಬಾನ್ ವಕ್ತಾರ ಚೀನಾ ಜೊತೆಗೆ ತಾವು ಉತ್ತಮ ಸಂಬಂಧ ಹೊಂದಲು ಇಚ್ಛಿಸುವುದಾಗಿ ತಿಳಿಸಿದ್ದಾರೆ. ಚೀನಾ ಜಗತ್ತಿನ ಸೂಪರ್ ಪವರ್ ರಾಷ್ಟ್ರಗಳಲ್ಲಿ ಒಂದು. ಅಫ್ಘಾನಿಸ್ತಾನದ ಮರುನಿರ್ಮಾಣದಲ್ಲಿ ಅದರ ನೆರವು ನಮ ಅತ್ಯಗತ್ಯ ಎಂದವರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT