ಸಂಗ್ರಹ ಚಿತ್ರ 
ವಿದೇಶ

ಅಫ್ಘಾನಿಸ್ತಾನದಲ್ಲಿ ಯುದ್ಧ ಕೊನೆಗೊಂಡಿದೆ, ಕೆಲದಿನಗಳಲ್ಲಿ ಸರ್ಕಾರ ರಚನೆ: ತಾಲಿಬಾನ್ ಘೋಷಣೆ

ದೇಶದಲ್ಲಿ ಯುದ್ಧ ಮುಗಿದಿದೆ. ಸರ್ಕಾರ ರಚನೆ ಬಾಕಿ ಉಳಿದಿದೆ. ಜಗತ್ತಿನೊಂದಿಗೆ ಉತ್ತಮ ಸಂಬಂಧ ಹಾಗೂ ದೇಶದ ಮರುನಿರ್ಮಾಣ ತಾಲಿಬಾನ್ ಧ್ಯೇಯ ಎಂದ ವಕ್ತಾರ.

ಕಾಬೂಲ್: ದೇಶದಲ್ಲಿ ಯುದ್ಧ ಕೊನೆಗೊಂಡಿದೆ, ಇನ್ನೇನಿದ್ದರೂ ಸರ್ಕರ ರಚನೆ ಮಾತ್ರ ಬಾಕಿ ಉಳಿದಿದೆ ಎಂದು ತಾಲಿಬಾನ್ ವಕ್ತಾರ ಜಬೀಯುಲ್ಲ ಮುಜಾಹಿದ್ ಹೇಳಿದ್ದಾರೆ. ಸೋಮವಾರ ಬೆಳಿಗ್ಗೆಯಷ್ಟೆ ಪಂಜ್ ಶಿರ್ ಪ್ರಾಂತ್ಯವನ್ನು ತಾಲಿಬಾನ್ ವಶಪಡಿಸಿಕೊಡಿರುವುದಾಗಿ ಘೋಷಿಸಿತ್ತು. 

ಪಂಜ್ ಶಿರ್ ಪ್ರಾಂತ್ಯ ಪೂರ್ತಿಯಾಗಿ ತಾಲಿಬಾನ್ ವಶವಾಗಿಲ್ಲ ಎಂದು ಎನ್ ಆರ್ ಎಫ್ ನಾಯಕರು ತಾಲಿಬಾನ್ ಘೋಷಣೆಯನ್ನು ನಿರಾಕರಿಸಿದ್ದರು. ಪಂಜ್ ಶಿರ್ ಪ್ರಾಂತ್ಯದಲ್ಲಿ ತಾಲಿಬಾನ್ ವಿರೋಧಿ ಪಾಳೆಯ ನೆಲೆಗೊಂಡಿತ್ತು.

ನ್ಯಾಷನಲ್ ರೆಸಿಸ್ಟೆನ್ಸ್ ಫ್ರಂಟ್ ಎನ್ನುವ ಸಂಘಟನೆ ರಚನೆಯಾಗಿ ತಾಲಿಬಾನ್ ವಿರುದ್ಧ ಹೋರಾಡುವುದಾಗಿ ತಿಳಿಸಿತ್ತು. ಆಫ್ಘನ್ ಉಪಾಧ್ಯಕ್ಷ ಅಮ್ರುಲ್ಲಾ ಸಲೇಹ್ ಎನ್ ಆರ್ ಎಫ್ ಪಡೆಯ ನೇತೃತ್ವ ವಹಿಸಿಕೊಂಡಿದ್ದಾರೆ.

ತಾಲಿಬಾನ್ ವಕ್ತಾರ ಚೀನಾ ಜೊತೆಗೆ ತಾವು ಉತ್ತಮ ಸಂಬಂಧ ಹೊಂದಲು ಇಚ್ಛಿಸುವುದಾಗಿ ತಿಳಿಸಿದ್ದಾರೆ. ಚೀನಾ ಜಗತ್ತಿನ ಸೂಪರ್ ಪವರ್ ರಾಷ್ಟ್ರಗಳಲ್ಲಿ ಒಂದು. ಅಫ್ಘಾನಿಸ್ತಾನದ ಮರುನಿರ್ಮಾಣದಲ್ಲಿ ಅದರ ನೆರವು ನಮ ಅತ್ಯಗತ್ಯ ಎಂದವರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?