ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಸೈನಿಕರು ವಾಹನದಲ್ಲಿ ಸಾಗುತ್ತಿರುವುದು 
ವಿದೇಶ

ಕಾಶ್ಮೀರ ಸಮಸ್ಯೆ ಬಗೆಹರಿಸದೆ ಭಾರತದೊಂದಿಗೆ ಶಾಂತಿ ಮಾತುಕತೆ ಸಾಧ್ಯವೇ ಇಲ್ಲ: ಪಾಕಿಸ್ತಾನ ಪುನರುಚ್ಛಾರ

ನೆರೆ ದೇಶಗಳಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು ತಮ್ಮ ದೇಶ ಸೂಕ್ಷ್ಮವಾಗಿ ಗಮನಿಸಿ ಅರಿವು ಪಡೆದುಕೊಳ್ಳುತ್ತಿದ್ದು ಗಡಿ ಭಾಗದಲ್ಲಿ ಶಾಂತಿಯನ್ನು ಕದಡಲು ಯತ್ನಿಸಿದರೆ ಪಿತೂರಿ ನಡೆಸಿದರೆ ಅದನ್ನು ಮಟ್ಟಹಾಕಲು ಎದುರಿಸಲು ಸಿದ್ಧ ಎಂದು ಪಾಕಿಸ್ತಾನ ಅಧ್ಯಕ್ಷ ಅರಿಫ್ ಅಲ್ವಿ ಎಚ್ಚರಿಸಿದ್ದಾರೆ.

ಇಸ್ಲಾಮಾಬಾದ್: ನೆರೆ ದೇಶಗಳಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು ತಮ್ಮ ದೇಶ ಸೂಕ್ಷ್ಮವಾಗಿ ಗಮನಿಸಿ ಅರಿವು ಪಡೆದುಕೊಳ್ಳುತ್ತಿದ್ದು ಗಡಿ ಭಾಗದಲ್ಲಿ ಶಾಂತಿಯನ್ನು ಕದಡಲು ಯತ್ನಿಸಿದರೆ ಪಿತೂರಿ ನಡೆಸಿದರೆ ಅದನ್ನು ಮಟ್ಟಹಾಕಲು ಎದುರಿಸಲು ಸಿದ್ಧ ಎಂದು ಪಾಕಿಸ್ತಾನ ಅಧ್ಯಕ್ಷ ಅರಿಫ್ ಅಲ್ವಿ ಎಚ್ಚರಿಸಿದ್ದಾರೆ.

ಪಾಕಿಸ್ತಾನದ ರಕ್ಷಣಾ ದಿನದ ಅಂಗವಾಗಿ ನೀಡಿರುವ ಸಂದೇಶದಲ್ಲಿ ಅವರು, ಕಾಶ್ಮೀರ ಜನತೆಗೆ ತಮ್ಮ ಸರ್ಕಾರದ ಬೆಂಬಲವನ್ನು ಮತ್ತೆ ಘೋಷಿಸಿದ್ದಾರೆ.ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸದೆ ಭಾರತದೊಂದಿಗೆ ಶಾಂತಿ ಮಾತುಕತೆ ಸಾಧ್ಯವೇ ಇಲ್ಲ ಎಂದು ಪುನರುಚ್ಛರಿಸಿದ್ದಾರೆ.

ಕಾಶ್ಮೀರ ಸೇರಿದಂತೆ ಭಾರತದೊಂದಿಗಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಮಯ ಬಂದಿದೆ. ಸಮಸ್ಯೆಗಳನ್ನು ಬಗೆಹರಿಸಿದರೆ ಗಡಿ ಪ್ರದೇಶದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆ ಇಸ್ಲಾಮಾಬಾದ್ ನಲ್ಲಿ ನಡೆದ ರಕ್ಷಣಾ ದಿನ ಆಚರಣೆಯಲ್ಲಿ 31 ಸುತ್ತು ಬಂದೂಕು ವಂದನೆಯೊಂದಿಗೆ ಆರಂಭಿಸಲಾಯಿತು ಎಂದು ಸರ್ಕಾರದ ರೇಡಿಯೊ ಪಾಕಿಸ್ತಾನ ವರದಿ ಮಾಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT