ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಸೈನಿಕರು ವಾಹನದಲ್ಲಿ ಸಾಗುತ್ತಿರುವುದು 
ವಿದೇಶ

ಕಾಶ್ಮೀರ ಸಮಸ್ಯೆ ಬಗೆಹರಿಸದೆ ಭಾರತದೊಂದಿಗೆ ಶಾಂತಿ ಮಾತುಕತೆ ಸಾಧ್ಯವೇ ಇಲ್ಲ: ಪಾಕಿಸ್ತಾನ ಪುನರುಚ್ಛಾರ

ನೆರೆ ದೇಶಗಳಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು ತಮ್ಮ ದೇಶ ಸೂಕ್ಷ್ಮವಾಗಿ ಗಮನಿಸಿ ಅರಿವು ಪಡೆದುಕೊಳ್ಳುತ್ತಿದ್ದು ಗಡಿ ಭಾಗದಲ್ಲಿ ಶಾಂತಿಯನ್ನು ಕದಡಲು ಯತ್ನಿಸಿದರೆ ಪಿತೂರಿ ನಡೆಸಿದರೆ ಅದನ್ನು ಮಟ್ಟಹಾಕಲು ಎದುರಿಸಲು ಸಿದ್ಧ ಎಂದು ಪಾಕಿಸ್ತಾನ ಅಧ್ಯಕ್ಷ ಅರಿಫ್ ಅಲ್ವಿ ಎಚ್ಚರಿಸಿದ್ದಾರೆ.

ಇಸ್ಲಾಮಾಬಾದ್: ನೆರೆ ದೇಶಗಳಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು ತಮ್ಮ ದೇಶ ಸೂಕ್ಷ್ಮವಾಗಿ ಗಮನಿಸಿ ಅರಿವು ಪಡೆದುಕೊಳ್ಳುತ್ತಿದ್ದು ಗಡಿ ಭಾಗದಲ್ಲಿ ಶಾಂತಿಯನ್ನು ಕದಡಲು ಯತ್ನಿಸಿದರೆ ಪಿತೂರಿ ನಡೆಸಿದರೆ ಅದನ್ನು ಮಟ್ಟಹಾಕಲು ಎದುರಿಸಲು ಸಿದ್ಧ ಎಂದು ಪಾಕಿಸ್ತಾನ ಅಧ್ಯಕ್ಷ ಅರಿಫ್ ಅಲ್ವಿ ಎಚ್ಚರಿಸಿದ್ದಾರೆ.

ಪಾಕಿಸ್ತಾನದ ರಕ್ಷಣಾ ದಿನದ ಅಂಗವಾಗಿ ನೀಡಿರುವ ಸಂದೇಶದಲ್ಲಿ ಅವರು, ಕಾಶ್ಮೀರ ಜನತೆಗೆ ತಮ್ಮ ಸರ್ಕಾರದ ಬೆಂಬಲವನ್ನು ಮತ್ತೆ ಘೋಷಿಸಿದ್ದಾರೆ.ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸದೆ ಭಾರತದೊಂದಿಗೆ ಶಾಂತಿ ಮಾತುಕತೆ ಸಾಧ್ಯವೇ ಇಲ್ಲ ಎಂದು ಪುನರುಚ್ಛರಿಸಿದ್ದಾರೆ.

ಕಾಶ್ಮೀರ ಸೇರಿದಂತೆ ಭಾರತದೊಂದಿಗಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಮಯ ಬಂದಿದೆ. ಸಮಸ್ಯೆಗಳನ್ನು ಬಗೆಹರಿಸಿದರೆ ಗಡಿ ಪ್ರದೇಶದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆ ಇಸ್ಲಾಮಾಬಾದ್ ನಲ್ಲಿ ನಡೆದ ರಕ್ಷಣಾ ದಿನ ಆಚರಣೆಯಲ್ಲಿ 31 ಸುತ್ತು ಬಂದೂಕು ವಂದನೆಯೊಂದಿಗೆ ಆರಂಭಿಸಲಾಯಿತು ಎಂದು ಸರ್ಕಾರದ ರೇಡಿಯೊ ಪಾಕಿಸ್ತಾನ ವರದಿ ಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಾರ್ದಿಕ್, ಪಂತ್'ಗೆ ಬಿಗ್ ಶಾಕ್; ವಿರಾಟ್, ರೋಹಿತ್​ ಶರ್ಮಾಗೆ ಚಾನ್ಸ್

‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ