ಇಂಡೋನೇಷ್ಯಾದ ಜೈಲಿನಲ್ಲಿ ಭೀಕರ ಅಗ್ನಿ ಅವಘಡ 
ವಿದೇಶ

ಇಂಡೋನೇಷ್ಯಾ ಜೈಲಿನಲ್ಲಿ ಭೀಕರ ಅಗ್ನಿ ಅವಘಡ: ಕನಿಷ್ಠ 41 ಕೈದಿಗಳ ಸಾವು

ಇಂಡೋನೇಷ್ಯಾದ ಜೈಲಿನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 41 ಮಂದಿ ಕೈದಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಜಕಾರ್ತ: ಇಂಡೋನೇಷ್ಯಾದ ಜೈಲಿನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 41 ಮಂದಿ ಕೈದಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇಂಡೋನೇಷ್ಯಾದ ಬಾಂಟೆನ್ ಪ್ರಾಂತ್ಯದ ಜೈಲಿನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ 41 ಜನರು ಮೃತಪಟ್ಟಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕಾನೂನು ಮತ್ತು ಮಾನವ ಹಕ್ಕುಗಳ ಸಚಿವಾಲಯದ ಜೈಲು ಇಲಾಖೆಯ ವಕ್ತಾರ ರಿಕಾ ಅಪ್ರಿಯಂತಿ ತಿಳಿಸಿದ್ದಾರೆ.

ಅವಘಡಕ್ಕೆ ಕಾರಣವನ್ನು ತಿಳಿಯಲು ತನಿಖೆ ಕೈಗೊಳ್ಳಲಾಗಿದೆ. ಬುಧವಾರ ಮಧ್ಯರಾತ್ರಿ 1 ರಿಂದ 2 ಗಂಟೆ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಅಧಿಕಾರಿಗಳು ಇನ್ನೂ ಕಾರಾಗೃಹದಲ್ಲಿದ್ದವರನ್ನು ಸ್ಥಳಾಂತರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಮೂಲಗಳ ಪ್ರಕಾರ ಈ ಬ್ಲಾಕ್ ನಲ್ಲಿ ಮಾದಕದ್ರವ್ಯ-ಸಂಬಂಧಿತ ಅಪರಾಧಗಳನ್ನು ಇರಿಸಲಾಗಿದೆ. ಇಲ್ಲಿ ಸುಮಾರು 122 ಜನರನ್ನು ಇರಿಸಲಾಗಿತ್ತು ಎನ್ನಲಾಗಿದೆ. ಈ ಜೈಲಿಗೆ 600 ಮಂದಿಯನ್ನು ಇರಿಸುವ ಸಾಮರ್ಥ್ಯವಿದ್ದು, ಇಲ್ಲಿ 2000 ಮಂದಿಯನ್ನು ಇರಿಸಲಾಗಿದೆ ಎನ್ನಲಾಗಿದೆ. 

ಕ್ರೋಧಿತ ಕೈದಿಗಳಿಂದಲೇ ಬೆಂಕಿ
ಇನ್ನು ಮತ್ತೊಂದು ಮೂಲದ ಪ್ರಕಾರ ಜೈಲಿನ ಅವ್ಯವಸ್ಥೆಯಿಂದ ರೊಚ್ಚಿಗೆದ್ದಿದ್ದ ಕೈದಿಗಳೇ ಜೈಲಿಗೆ ಬೆಂಕಿ ಹಾಕಿದ್ದಾರೆ ಎನ್ನಲಾಗಿದೆ. ಅಲ್ಲದೆ ಬೆಂಕಿ ಅವಘಡ ವೇಳೆ ಹಲವು ಕೈದಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT